AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುರ್ಜ್ ಖಲೀಫಾ ಮೇಲೆ ಅಡ್ವಾನ್ಸ್ ಬುಕಿಂಗ್ ಶುರು ಮಾಡಿದ ಮೊದಲ ಸಿನಿಮಾ ‘ಚಂದು ಚಾಂಪಿಯನ್’

‘ಚಂದು ಚಾಂಪಿಯನ್​’ ಸಿನಿಮಾದಲ್ಲಿ ಕಾರ್ತಿಕ್​ ಆರ್ಯನ್​ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿರಲಿದೆ. ನಿರ್ದೇಶಕ ಕಬೀರ್ ಖಾನ್​ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇಂದಿನಿಂದ (ಜೂನ್​ 9) ಸಿನಿಮಾದ ಅಡ್ವಾನ್ಸ್​ ಬುಕಿಂಗ್ ಓಪನ್​ ಆಗಿದೆ. ಅದು ಕೂಡ ಬುರ್ಜ್​ ಖಲೀಫಾ ಮೇಲೆ ಎಂಬುದು ವಿಶೇಷ.

ಬುರ್ಜ್ ಖಲೀಫಾ ಮೇಲೆ ಅಡ್ವಾನ್ಸ್ ಬುಕಿಂಗ್ ಶುರು ಮಾಡಿದ ಮೊದಲ ಸಿನಿಮಾ ‘ಚಂದು ಚಾಂಪಿಯನ್’
ಬುರ್ಜ್​ ಖಲೀಫಾ, ಕಾರ್ತಿಕ್​ ಆರ್ಯನ್​
ಮದನ್​ ಕುಮಾರ್​
|

Updated on: Jun 09, 2024 | 8:04 PM

Share

ಸಾಜಿದ್​ ನಾಡಿಯದ್ವಾಲ ಮತ್ತು ಕಬೀರ್​ ಖಾನ್​ ಅವರು ‘ಚಂದು ಚಾಂಪಿಯನ್​’ (Chandu Champion) ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಬಿಡುಗಡೆಗೆ ಸಕಲ ತಯಾರಿ ನಡೆದಿದೆ. ಈಗಾಗಲೇ ಅಡ್ವಾನ್ಸ್​ ಬುಕಿಂಗ್​ (Chandu Champion Advance Booking) ಓಪನ್​ ಮಾಡಲಾಗಿದೆ. ವಿಶೇಷ ಏನೆಂದರೆ, ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಕುರಿತು ಮಾಹಿತಿ ನೀಡಲು ಈ ಸಿನಿಮಾ ತಂಡ ಒಂದು ವಿಶೇಷ ದಾರಿಯನ್ನು ಅನುಸರಿಸಿದೆ. ವಿಶ್ವದ ಅತಿ ಎತ್ತರದ ಕಟ್ಟಡ ಎಂಬ ಖ್ಯಾತಿ ಹೊಂದಿರುವ ಬುರ್ಜ್​ ಖಲೀಫಾ (Burj Khalifa) ಮೇಲೆ ‘ಚಂದು ಚಾಂಪಿಯನ್​’ ಸಿನಿಮಾದ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಕುರಿತು ಮಾಹಿತಿ ಬಿತ್ತರಿಸಲಾಗಿದೆ.

ಬುರ್ಜ್​ ಖಲೀಫಾ ಮೇಲೆ ಸಿನಿಮಾಗಳ ಪ್ರಚಾರ ಮಾಡುವುದು ಹೊಸದೇನೂ ಅಲ್ಲ. ಈಗಾಗಲೇ ‘ವಿಕ್ರಾಂತ್​ ರೋಣ’ ಸೇರಿದಂತೆ ಅನೇಕ ಸಿನಿಮಾಗಳ ಪ್ರಮೋಷನ್​ ಕಂಟೆಂಟ್​ಗಳನ್ನು ಬಿತ್ತರಿಸಲಾಗಿತ್ತು. ಆದರೆ ಅವೆಲ್ಲವೂ ಟೀಸರ್​, ಟ್ರೇಲರ್​, ಫಸ್ಟ್​ ಲುಕ್​ ಇತ್ಯಾದಿ ಆಗಿದ್ದವು. ಇದೇ ಮೊದಲ ಬಾರಿಗೆ ‘ಚಂದು ಚಾಂಪಿಯನ್​’ ಸಿನಿಮಾ ತಂಡದವರು ಮುಂಗಡ ಟಿಕೆಟ್​ ಬುಕಿಂಗ್​ ಬಗ್ಗೆ ಮಾಹಿತಿ ಬಿತ್ತರಿಸುವ ಮೂಲಕ ಹೊಸತನ ತೋರಿದ್ದಾರೆ.

ಕಾರ್ತಿಕ್​ ಆರ್ಯನ್​ ಅವರು ‘ಚಂದು ಚಾಂಪಿಯನ್​’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿರಲಿದೆ. ಈಗಾಗಲೇ ಪೋಸ್ಟರ್​ ಬಿಡುಗಡೆ ಆಗಿದ್ದು ಪ್ರೇಕ್ಷಕರ ಕೌತುಕ ಕೆರಳಿಸಿದೆ. ಇಂದಿನಿಂದ (ಜೂನ್​ 9) ಬುಕಿಂಗ್​​ ಶುರುವಾಗಿದೆ. ಬುರ್ಜ್​ ಖಲೀಫಾ ಮೇಲೆ ಬುಕಿಂಗ್​ ವಿವರ ಹಂಚಿಕೊಂಡ ಫೋಟೋ ವೈರಲ್​ ಆಗಿದೆ.

ಇದನ್ನೂ ಓದಿ: ಬರ್ತ್​ಡೇ ದಿನ ಬುರ್ಜ್​ ಖಲೀಫಾ ಮೇಲೆ ಮೂಡಿತು ಶಾರುಖ್​ ಫೋಟೋ; ವೈರಲ್​ ಆಯ್ತು ವಿಡಿಯೋ

ಜೂನ್​ 14ರಂದು ‘ಚಂದು ಚಾಂಪಿಯನ್​’ ಸಿನಿಮಾ ಬಿಡುಗಡೆ ಆಗಲಿದೆ. ಕಾರ್ತಿಕ್​ ಆರ್ಯನ್​ ಅವರ ವೃತ್ತಿ ಜೀವನದಲ್ಲಿ ಇದು ತುಂಬ ಮಹತ್ವದ ಸಿನಿಮಾ ಆಗಿರಲಿದೆ. ಅವರ ಅಭಿಮಾನಿಗಳು ಈ ಚಿತ್ರದ ಮೇಲೆ ಸಾಕಷ್ಟು ಭರವಸೆ ಇಟ್ಟುಕೊಂಡಿದ್ದಾರೆ. ಪ್ಯಾರಾಲೆಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಮುರಳಿಕಾಂತ್​ ಪೇಟ್ಕರ್​ ಅವರ ಜೀವನದ ಕುರಿತು ಈ ಸಿನಿಮಾ ಇದೆ. ಕಬೀರ್ ಖಾನ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ