AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಸೋಮವಾರವೂ ಬಂಪರ್​ ಬೆಳೆ ತೆಗೆದ ‘ಛಾವ’; 11 ದಿನಕ್ಕೆ 353 ಕೋಟಿ ರೂಪಾಯಿ

‘ಛಾವ’ ಸಿನಿಮಾ ತೆರೆಕಂಡು 11 ದಿನಗಳು ಕಳೆದಿವೆ. ಇಂದಿಗೂ ಈ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಭಾರತದ ಬಾಕ್ಸ್ ಆಫೀಸ್​ನಲ್ಲಿ ಈತನಕ 353.61 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಹೀಗೆಯೇ ಮುಂದುವರಿದರೆ 500 ಕೋಟಿ ರೂಪಾಯಿ ಗಡಿ ಮುಟ್ಟಲಿದೆ. ವಿಕ್ಕಿ ಕೌಶಲ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

2ನೇ ಸೋಮವಾರವೂ ಬಂಪರ್​ ಬೆಳೆ ತೆಗೆದ ‘ಛಾವ’; 11 ದಿನಕ್ಕೆ 353 ಕೋಟಿ ರೂಪಾಯಿ
Vicky Kaushal
ಮದನ್​ ಕುಮಾರ್​
|

Updated on: Feb 25, 2025 | 4:14 PM

Share

ಸೂಪರ್​ ಹಿಟ್ ‘ಛಾವ’ ಸಿನಿಮಾದ ಅಬ್ಬರ ಸದ್ಯಕ್ಕಂತೂ ಕಡಿಮೆ ಆಗುವಂತೆ ಕಾಣುತ್ತಿಲ್ಲ. ಸತತ 11ನೇ ದಿನವೂ ಈ ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ವಿಕ್ಕಿ ಕೌಶಲ್, ರಶ್ಮಿಕಾ ಮಂದಣ್ಣ, ಅಕ್ಷಯ್ ಖನ್ನಾ ಮುಂತಾದವರು ನಟಿಸಿದ ಈ ಸಿನಿಮಾಗೆ ಭರ್ಜರಿ ಜನಸ್ಪಂದನೆ ಸಿಕ್ಕಿದೆ. ದಿನದಿಂದ ದಿನಕ್ಕೆ ಪ್ರೇಕ್ಷಕರಿಂದ ಬಾಯಿ ಮಾತಿನ ಪ್ರಚಾರ ಹೆಚ್ಚಾಗುತ್ತಿರುವುದರಿಂದ ಉತ್ತಮವಾಗಿ ಕಲೆಕ್ಷನ್ ಆಗುತ್ತಿದೆ. ಅಚ್ಚರಿ ಎಂದರೆ, 2ನೇ ಸೋಮವಾರ ಕೂಡ ಈ ಸಿನಿಮಾಗೆ ಭರ್ಜರಿ ಕಮಾಯಿ ಆಗಿದೆ. 11 ದಿನಕ್ಕೆ ‘ಛಾವ’ ಸಿನಿಮಾದ ಒಟ್ಟು ಕಲೆಕ್ಷನ್​ 353.61 ಕೋಟಿ ರೂಪಾಯಿ ಆಗಿದೆ.

ಲಕ್ಷ್ಮಣ್ ಉಟೇಕರ್​ ಅವರು ನಿರ್ದೇಶನ ಮಾಡಿದ ‘ಛಾವ’ ಸಿನಿಮಾದಲ್ಲಿ ಛತ್ರಪತಿ ಸಂಭಾಜಿ ಮಹಾರಾಜ್ ಜೀವನದ ಕಥೆ ಇದೆ. ಈ ಪಾತ್ರವನ್ನು ವಿಕ್ಕಿ ಕೌಶಲ್ ಅವರು ಮಾಡಿದ್ದಾರೆ. ಅವರ ನಟನೆಗೆ ಅಭಿಮಾನಿಗಳಿಂದ ಭರ್ಜರಿ ಮೆಚ್ಚಿಗೆ ಸಿಗುತ್ತಿದೆ. ಮಹಾರಾಷ್ಟ್ರದ ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ನಿರ್ಮಾಪಕರಿಗೆ ಈ ಸಿನಿಮಾದಿಂದ ಸಖತ್ ಲಾಭ ಆಗಿದೆ.

11 ದಿನಗಳ ಕಾಲ ಯಶಸ್ವಿವಾಗಿ ಪ್ರದರ್ಶನ ಕಂಡಿರುವ ‘ಛಾವ’ ಸಿನಿಮಾ 2ನೇ ವೀಕೆಂಡ್​ನಲ್ಲಿ ಅಚ್ಚರಿಯ ಕಮಾಯಿ ಮಾಡಿತು. ಫೆಬ್ರವರಿ 22ರಂದು ಬರೋಬ್ಬರಿ 44.10 ಕೋಟಿ ರೂಪಾಯಿ ಸಂಗ್ರಹ ಆಯಿತು. ಫೆಬ್ರವರಿ 23ರಂದು 41.10 ಕೋಟಿ ರೂಪಾಯಿ ಕಲೆಕ್ಷನ್​ ಆಯಿತು. ಸೋಮವಾರ (ಫೆಬ್ರವರಿ 24) 19.10 ಕೋಟಿ ರೂಪಾಯಿ ಗಳಿಸುವ ಮೂಲಕ ಈ ಸಿನಿಮಾ ತನ್ನ ನಾಗಾಲೋಟ ಮುಂದುವರಿಸಿದೆ.

ಇದನ್ನೂ ಓದಿ: ‘ಛಾವ’ ಎಫೆಕ್ಟ್: ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನದ ವಿಷಯ ಸೇರಿಸಲು ಒತ್ತಾಯ

2025ರ ಮೊದಲ ಸೂಪರ್​ ಹಿಟ್​ ಸಿನಿಮಾ ಎಂಬ ಖ್ಯಾತಿಗೆ ‘ಛಾವ’ ಪಾತ್ರವಾಗಿದೆ. ಮುಂದಿನ ದಿನಗಳಲ್ಲಿ ಈ ಸಿನಿಮಾ ಅನಾಯಾಸವಾಗಿ 500 ಕೋಟಿ ರೂಪಾಯಿ ಕ್ಲಬ್ ಸೇರಲಿದೆ ಎಂದು ಬಾಕ್ಸ್ ಆಫೀಸ್​ ವ್ಯವಹಾರ ಬಲ್ಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಸಿನಿಮಾದಿಂದ ವಿಕ್ಕಿ ಕೌಶಲ್ ಅವರ ಸ್ಟಾರ್​ಗಿರಿ ಹೆಚ್ಚಾಗಿದೆ. ರಶ್ಮಿಕಾ ಮಂದಣ್ಣ ಕೂಡ ಮಿಂಚುತ್ತಿದ್ದಾರೆ. ನರೇಂದ್ರ ಮೋದಿ ಸಹ ‘ಛಾವ’ ಸಿನಿಮಾ ಬಗ್ಗೆ ಮೆಚ್ಚುಗೆ ಸೂಚಿಸಿದ ಬಳಿಕ ಪ್ರೇಕ್ಷಕರ ಸಂಖ್ಯೆ ಹೆಚ್ಚಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್