AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನಲ್ಲೂ ಧೂಳೆಬ್ಬಿಸಲಿದೆ ‘ಛಾವ’ ಸಿನಿಮಾ; ರಶ್ಮಿಕಾ ಅಭಿಮಾನಿಗಳಿಗೆ ಖುಷಿ

ನಟಿ ರಶ್ಮಿಕಾ ಮಂದಣ್ಣ ಅವರಿಗೆ ಆಂಧ್ರ ಮತ್ತು ತೆಲಂಗಾಣದಲ್ಲಿ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ರಶ್ಮಿಕಾ ನಟಿಸಿದ ಬಾಲಿವುಡ್ ಸಿನಿಮಾ ‘ಛಾವ’ ಈಗ ತೆಲುಗು ಭಾಷೆಗೆ ಡಬ್ ಆಗಿ ತೆರೆಕಾಣುತ್ತಿದೆ. ತೆಲುಗು ವರ್ಷನ್ ಟ್ರೇಲರ್​ ಅನಾವರಣ ಆಗಿದೆ. ಕೆಲವೇ ಗಂಟೆಗಳಲ್ಲಿ 17 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.

ತೆಲುಗಿನಲ್ಲೂ ಧೂಳೆಬ್ಬಿಸಲಿದೆ ‘ಛಾವ’ ಸಿನಿಮಾ; ರಶ್ಮಿಕಾ ಅಭಿಮಾನಿಗಳಿಗೆ ಖುಷಿ
Chhaava
ಮದನ್​ ಕುಮಾರ್​
|

Updated on: Mar 03, 2025 | 5:11 PM

Share

‘ಛಾವ’ ಸಿನಿಮಾ ಬಿಡುಗಡೆ ಆಗಿ 18 ದಿನಗಳು ಕಳೆದಿವೆ. ಇಂದಿಗೂ ಕೂಡ ಈ ಸಿನಿಮಾ ಅತ್ಯುತ್ತಮವಾಗಿ ಕಲೆಕ್ಷನ್ ಮಾಡುತ್ತಿದೆ. ಹಿಂದಿ ವರ್ಷನ್​ನಿಂದ ಭಾರತದ ಬಾಕ್ಸ್ ಆಫೀಸ್​ನಲ್ಲಿ ಬರೋಬ್ಬರಿ 471 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಇನ್ನು ಕೆಲವೇ ದಿನಗಳಲ್ಲಿ 500 ಕೋಟಿ ರೂಪಾಯಿ ದಾಟಲಿದೆ. ಈ ನಡುವೆ ಬೇರೆ ಭಾಷೆಗಳ ಪ್ರೇಕ್ಷಕರನ್ನೂ ಈ ಸಿನಿಮಾ ಸೆಳೆಯುತ್ತಿದೆ. ಹೌದು, ಈಗ ‘ಛಾವ’ (Chhaava) ಸಿನಿಮಾ ತೆಲುಗಿಗೆ ಡಬ್ ಆಗಿದೆ. ತೆಲುಗು ವರ್ಷನ್ ಟ್ರೇಲರ್​ ಬಿಡುಗಡೆ ಆಗಿದ್ದು, ಪಾಸಿಟಿವ್ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.

ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ ಅವರು ‘ಛಾವ’ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ವಿಕ್ಕಿ ಕೌಶಲ್ ಅವರಿಗೆ ಬಾಲಿವುಡ್​ನಲ್ಲಿ ಇರುವಂತೆ ರಶ್ಮಿಕಾ ಮಂದಣ್ಣ ಅವರಿಗೆ ತೆಲುಗಿನಲ್ಲಿ ಫ್ಯಾನ್ ಫಾಲೋಯಿಂಗ್ ಇದೆ. ಅಲ್ಲದೇ ತೆಲುಗು ಪ್ರೇಕ್ಷಕರು ಈ ಸಿನಿಮಾವನ್ನು ಡಬ್ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಹಾಗಾಗಿ ‘ಛಾವ’ ಸಿನಿಮಾವನ್ನು ಅದ್ದೂರಿಯಾಗಿ ತೆಲುಗಿನಲ್ಲಿ ಬಿಡುಗಡೆ ಮಾಡಲು ಸಕಲ ತಯಾರಿ ನಡೆದಿದೆ.

‘ಛಾವ’ ತೆಲುಗು ವರ್ಷನ್ ಟ್ರೇಲರ್​:

ಇದನ್ನೂ ಓದಿ
Image
‘ಛಾವ’ ಪ್ರದರ್ಶನದ ವೇಳೆ ಚಿತ್ರಮಂದಿರದ ಒಳಗೆ ಬೆಂಕಿ; ಕಾರಣ ತಿಳಿಸಿದ ಪೊಲೀಸರು
Image
‘ಛಾವ’ ಎಫೆಕ್ಟ್: ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನದ ವಿಷಯ ಸೇರಿಸಲು ಒತ್ತಾಯ
Image
ಛಾವ ಸಿನಿಮಾ ದೃಶ್ಯ ಹಾಗೂ ಕುಂಭಮೇಳ ಕಾಲ್ತುಳಿತದ ಬಗ್ಗೆ ಸ್ವರಾ ಭಾಸ್ಕರ್ ಟೀಕೆ
Image
‘ಛಾವ’ ಸಿನಿಮಾ ಪ್ರದರ್ಶನದ ವೇಳೆ ಚಿತ್ರಮಂದಿರದ ಪರದೆ ಹರಿದು ಹಾಕಿದ ಕುಡುಕ

ಮಾರ್ಚ್​ 7ರಂದು ‘ಛಾವ’ ತೆಲುಗು ವರ್ಷನ್ ಬಿಡುಗಡೆ ಆಗಲಿದೆ. ಇಂದು (ಮಾರ್ಚ್​ 3) ತೆಲುಗು ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಕೆಲವೇ ಗಂಟೆಗಳಲ್ಲಿ ಈ ಟ್ರೇಲರ್​ಗೆ ಮಿಲಿಯನ್​ಗಟ್ಟಲೆ ವೀಕ್ಷಣೆ ಆಗಿದೆ. ತೆಲುಗು ಪ್ರೇಕ್ಷಕರು ಈ ಸಿನಿಮಾ ಮೇಲೆ ಎಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂಬುದಕ್ಕೆ ಈ ಸಂಖ್ಯೆಯೇ ಸಾಕ್ಷಿ ನೀಡುವಂತಿದೆ. ತೆಲುಗು ವರ್ಷನ್ ರಿಲೀಸ್ ಆಗುತ್ತಿರುವುದಕ್ಕೆ ರಶ್ಮಿಕಾ ಮಂದಣ್ಣ ಅವರು ಹೆಚ್ಚು ಖುಷಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಪ್ರಚಾರ ಮಾಡುತ್ತಿದ್ದಾರೆ.

ಛತ್ರಪತಿ ಸಂಭಾಜಿ ಮಹಾರಾಜ್ ಜೀವನವನ್ನು ಆಧರಿಸಿ ‘ಛಾವ’ ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾಗೆ ಅಪಾರ ಜನಮೆಚ್ಚುಗೆ ಸಿಕ್ಕಿದೆ. ಸಂಭಾಜಿ ಪಾತ್ರ ಮಾಡಿರುವ ವಿಕ್ಕಿ ಕೌಶಲ್ ಅವರು ಸೂಪರ್ ಸ್ಟಾರ್​ ಆಗಿದ್ದಾರೆ. ಈ ಚಿತ್ರದಿಂದ ಅವರ ವೃತ್ತಿಜೀವನದ ಅತಿ ದೊಡ್ಡ ಸಕ್ಸಸ್ ಸಿಕ್ಕಿದೆ. ಅಲ್ಲು ಅರವಿಂದ್ ಅವರು ‘ಗೀತಾ ಆರ್ಟ್ಸ್​’ ಮೂಲಕ ಈ ಸಿನಿಮಾವನ್ನು ತೆಲುಗಿನಲ್ಲಿ ವಿತರಣೆ ಮಾಡುತ್ತಿದ್ದಾರೆ. ತೆಲುಗು ವರ್ಷನ್ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​