AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ಥೆಯ ನೈಜ ಪಾತ್ರದಲ್ಲಿ ದೀಪಿಕಾ

ಬಾಲಿವುಡ್​ನಲ್ಲಿ ಇತ್ತೀಚೆಗೆ ನೈಜ ಕಥೆಗಳನ್ನಾಧರಿಸಿದ ಸಿನಿಮಾಗಳು ಕಮಾಲ್ ಮಾಡ್ತಿವೆ. ಇಂಥಾ ರಿಯಾಲಿಸ್ಟಿಕ್ ಸಿನಿಮಾಗಳ ಸಾಲಿಗೆ ಸೇರ್ತಿರೋದು ದೀಪಿಕಾ ಪಡುಕೋಣೆ ಅಭಿನಯದ ಚಾಪಕ್ ಚಿತ್ರ. ಹೌದು, ಸದ್ಯ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತ್ರ ಬಾಲಿವುಡ್​ನ ಪದ್ಮಾವತಿ ಎಕ್ಸ್​ಪರಿಮೆಂಟ್ ಪಾತ್ರಗಳ ಮೂಲಕ ಪ್ರೇಕ್ಷಕರಿಗೆ ಮೋಡಿ ಮಾಡೋಕೆ ರೆಡಿಯಾಗಿದ್ದಾರೆ. ಸದ್ಯ ದೀಪಿಕಾ ಪಡುಕೋಣೆ ಬಗ್ಗೆ ಮಾತನಾಡೋಕೆ ಕಾರಣ ಆಗಿರೋದು ಚಾಪಕ್ ಟ್ರೈಲರ್. ಸಮಾಜದಲ್ಲಿ ಹೆಣ್ಣಿನ ಮೇಲೆ ನಡೆಯೋ ಶೋಷಣೆ, ದೌರ್ಜನ್ಯದಂಥಹ ಘಟನೆಗಳು ನಡೀತಾನೆ ಇರ್ತವೆ. ಅಂತಹದ್ದೇ ಸಂಚಲನಕ್ಕೆ ಕಾರಣವಾಗಿದ್ದ ಘಟನೆ ಅಂದ್ರೆ […]

ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ಥೆಯ ನೈಜ ಪಾತ್ರದಲ್ಲಿ ದೀಪಿಕಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Nov 24, 2020 | 7:49 AM

Share

ಬಾಲಿವುಡ್​ನಲ್ಲಿ ಇತ್ತೀಚೆಗೆ ನೈಜ ಕಥೆಗಳನ್ನಾಧರಿಸಿದ ಸಿನಿಮಾಗಳು ಕಮಾಲ್ ಮಾಡ್ತಿವೆ. ಇಂಥಾ ರಿಯಾಲಿಸ್ಟಿಕ್ ಸಿನಿಮಾಗಳ ಸಾಲಿಗೆ ಸೇರ್ತಿರೋದು ದೀಪಿಕಾ ಪಡುಕೋಣೆ ಅಭಿನಯದ ಚಾಪಕ್ ಚಿತ್ರ. ಹೌದು, ಸದ್ಯ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತ್ರ ಬಾಲಿವುಡ್​ನ ಪದ್ಮಾವತಿ ಎಕ್ಸ್​ಪರಿಮೆಂಟ್ ಪಾತ್ರಗಳ ಮೂಲಕ ಪ್ರೇಕ್ಷಕರಿಗೆ ಮೋಡಿ ಮಾಡೋಕೆ ರೆಡಿಯಾಗಿದ್ದಾರೆ.

ಸದ್ಯ ದೀಪಿಕಾ ಪಡುಕೋಣೆ ಬಗ್ಗೆ ಮಾತನಾಡೋಕೆ ಕಾರಣ ಆಗಿರೋದು ಚಾಪಕ್ ಟ್ರೈಲರ್. ಸಮಾಜದಲ್ಲಿ ಹೆಣ್ಣಿನ ಮೇಲೆ ನಡೆಯೋ ಶೋಷಣೆ, ದೌರ್ಜನ್ಯದಂಥಹ ಘಟನೆಗಳು ನಡೀತಾನೆ ಇರ್ತವೆ. ಅಂತಹದ್ದೇ ಸಂಚಲನಕ್ಕೆ ಕಾರಣವಾಗಿದ್ದ ಘಟನೆ ಅಂದ್ರೆ ಅದು 15 ವರ್ಷಗಳ ಹಿಂದೆ ದೆಹಲಿ ಮೂಲದ ಯುವತಿ ಲಕ್ಷ್ಮೀ ಮೇಲೆ ನಡೆದಿದ್ದ ಆ್ಯಸಿಡ್ ದಾಳಿ ಪ್ರಕರಣ.

2005ರಲ್ಲಿ 32 ವರ್ಷದ ವ್ಯಕ್ತಿಯಿಂದ ಲಕ್ಷ್ಮೀ ಆ್ಯಸಿಡ್ ದಾಳಿಗೆ ತುತ್ತಾದ ನಂತರ ಅನುಭವಿಸೋ ಯಾತನೆ, ನೋವು, ಅವಮಾನ ಮತ್ತು ಆಕೆಯ ಬದುಕಿನ ಕಥೆಯ ಹಲವು ಘಟನಾವಳಿಗಳನ್ನ ದೀಪಿಕಾ ಪಡುಕೋಣೆ ಪಾತ್ರದ ಮೂಲಕ ಹೇಳಲಾಗಿದೆ. ಸದ್ಯ ರಿಲೀಸ್ ಆಗಿರೋ ಟ್ರೈಲರ್ ಸಂಚಲನ ಮೂಡಿಸಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಚಾಪಕ್ ಸಿನಿಮಾದಲ್ಲಿ ನೈಜ ಘಟನೆ ಜೊತೆಗೆ ಕೆಲವು ಎಲ್ಲಿಯೂ ರಿವೀಲ್ ಆಗದ ಸತ್ಯಘಟನೆಗಳನ್ನ ಹೇಳಲಾಗಿದೆಯಂತೆ. ಇನ್ನು ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತ್ರ ದೀಪಿಕಾ ಎಕ್ಸ್ ಪರಿಮೆಂಟಲ್ ಪಾತ್ರಗಳಿಗೆ ತಮ್ಮನ್ನ ತಾವು ಒಗ್ಗಿಸಿಕೊಳ್ತಿದ್ದಾರೆ.

ಹೀಗಾಗಿ, ಸದ್ಯ ರಿಲೀಸ್ ಆಗಿರೋ ಟ್ರೈಲರ್ ದೀಪಿಕಾ ಹೀಗೂ ಕಮಾಲ್ ಮಾಡಬಹುದಾ ಅನ್ನೋ ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ. ಇನ್ನು ಜನವರಿಯಲ್ಲಿ ರಿಲೀಸ್ ಆಗ್ತಿರೋ ಮಹಿಳೆ ಮೇಲಿನ ದೌರ್ಜನ್ಯದ ಕಥೆ ಹೇಳಿರೋ ಚಾಪಕ್​ನಲ್ಲಿ ದೀಪಿಕಾ ಅಭಿನಯಿಸಿದ್ದಾರೆ. ಇನ್ನು ಈ ಸಿನಿಮಾ ಸಮಾಜದಲ್ಲಿನ ಒಂದಿಷ್ಟು ವಿಕೃತ ಮನಸ್ಸುಗಳನ್ನ ಬದಲಾಯಿಸುವಲ್ಲಿ ಸಕ್ಸಸ್ ಆಗುತ್ತಾ ನೋಡಬೇಕಿದೆ.

Published On - 10:32 am, Wed, 11 December 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು