Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ಥೆಯ ನೈಜ ಪಾತ್ರದಲ್ಲಿ ದೀಪಿಕಾ

ಬಾಲಿವುಡ್​ನಲ್ಲಿ ಇತ್ತೀಚೆಗೆ ನೈಜ ಕಥೆಗಳನ್ನಾಧರಿಸಿದ ಸಿನಿಮಾಗಳು ಕಮಾಲ್ ಮಾಡ್ತಿವೆ. ಇಂಥಾ ರಿಯಾಲಿಸ್ಟಿಕ್ ಸಿನಿಮಾಗಳ ಸಾಲಿಗೆ ಸೇರ್ತಿರೋದು ದೀಪಿಕಾ ಪಡುಕೋಣೆ ಅಭಿನಯದ ಚಾಪಕ್ ಚಿತ್ರ. ಹೌದು, ಸದ್ಯ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತ್ರ ಬಾಲಿವುಡ್​ನ ಪದ್ಮಾವತಿ ಎಕ್ಸ್​ಪರಿಮೆಂಟ್ ಪಾತ್ರಗಳ ಮೂಲಕ ಪ್ರೇಕ್ಷಕರಿಗೆ ಮೋಡಿ ಮಾಡೋಕೆ ರೆಡಿಯಾಗಿದ್ದಾರೆ. ಸದ್ಯ ದೀಪಿಕಾ ಪಡುಕೋಣೆ ಬಗ್ಗೆ ಮಾತನಾಡೋಕೆ ಕಾರಣ ಆಗಿರೋದು ಚಾಪಕ್ ಟ್ರೈಲರ್. ಸಮಾಜದಲ್ಲಿ ಹೆಣ್ಣಿನ ಮೇಲೆ ನಡೆಯೋ ಶೋಷಣೆ, ದೌರ್ಜನ್ಯದಂಥಹ ಘಟನೆಗಳು ನಡೀತಾನೆ ಇರ್ತವೆ. ಅಂತಹದ್ದೇ ಸಂಚಲನಕ್ಕೆ ಕಾರಣವಾಗಿದ್ದ ಘಟನೆ ಅಂದ್ರೆ […]

ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ಥೆಯ ನೈಜ ಪಾತ್ರದಲ್ಲಿ ದೀಪಿಕಾ
Follow us
ಸಾಧು ಶ್ರೀನಾಥ್​
| Updated By: Skanda

Updated on:Nov 24, 2020 | 7:49 AM

ಬಾಲಿವುಡ್​ನಲ್ಲಿ ಇತ್ತೀಚೆಗೆ ನೈಜ ಕಥೆಗಳನ್ನಾಧರಿಸಿದ ಸಿನಿಮಾಗಳು ಕಮಾಲ್ ಮಾಡ್ತಿವೆ. ಇಂಥಾ ರಿಯಾಲಿಸ್ಟಿಕ್ ಸಿನಿಮಾಗಳ ಸಾಲಿಗೆ ಸೇರ್ತಿರೋದು ದೀಪಿಕಾ ಪಡುಕೋಣೆ ಅಭಿನಯದ ಚಾಪಕ್ ಚಿತ್ರ. ಹೌದು, ಸದ್ಯ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತ್ರ ಬಾಲಿವುಡ್​ನ ಪದ್ಮಾವತಿ ಎಕ್ಸ್​ಪರಿಮೆಂಟ್ ಪಾತ್ರಗಳ ಮೂಲಕ ಪ್ರೇಕ್ಷಕರಿಗೆ ಮೋಡಿ ಮಾಡೋಕೆ ರೆಡಿಯಾಗಿದ್ದಾರೆ.

ಸದ್ಯ ದೀಪಿಕಾ ಪಡುಕೋಣೆ ಬಗ್ಗೆ ಮಾತನಾಡೋಕೆ ಕಾರಣ ಆಗಿರೋದು ಚಾಪಕ್ ಟ್ರೈಲರ್. ಸಮಾಜದಲ್ಲಿ ಹೆಣ್ಣಿನ ಮೇಲೆ ನಡೆಯೋ ಶೋಷಣೆ, ದೌರ್ಜನ್ಯದಂಥಹ ಘಟನೆಗಳು ನಡೀತಾನೆ ಇರ್ತವೆ. ಅಂತಹದ್ದೇ ಸಂಚಲನಕ್ಕೆ ಕಾರಣವಾಗಿದ್ದ ಘಟನೆ ಅಂದ್ರೆ ಅದು 15 ವರ್ಷಗಳ ಹಿಂದೆ ದೆಹಲಿ ಮೂಲದ ಯುವತಿ ಲಕ್ಷ್ಮೀ ಮೇಲೆ ನಡೆದಿದ್ದ ಆ್ಯಸಿಡ್ ದಾಳಿ ಪ್ರಕರಣ.

2005ರಲ್ಲಿ 32 ವರ್ಷದ ವ್ಯಕ್ತಿಯಿಂದ ಲಕ್ಷ್ಮೀ ಆ್ಯಸಿಡ್ ದಾಳಿಗೆ ತುತ್ತಾದ ನಂತರ ಅನುಭವಿಸೋ ಯಾತನೆ, ನೋವು, ಅವಮಾನ ಮತ್ತು ಆಕೆಯ ಬದುಕಿನ ಕಥೆಯ ಹಲವು ಘಟನಾವಳಿಗಳನ್ನ ದೀಪಿಕಾ ಪಡುಕೋಣೆ ಪಾತ್ರದ ಮೂಲಕ ಹೇಳಲಾಗಿದೆ. ಸದ್ಯ ರಿಲೀಸ್ ಆಗಿರೋ ಟ್ರೈಲರ್ ಸಂಚಲನ ಮೂಡಿಸಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಚಾಪಕ್ ಸಿನಿಮಾದಲ್ಲಿ ನೈಜ ಘಟನೆ ಜೊತೆಗೆ ಕೆಲವು ಎಲ್ಲಿಯೂ ರಿವೀಲ್ ಆಗದ ಸತ್ಯಘಟನೆಗಳನ್ನ ಹೇಳಲಾಗಿದೆಯಂತೆ. ಇನ್ನು ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತ್ರ ದೀಪಿಕಾ ಎಕ್ಸ್ ಪರಿಮೆಂಟಲ್ ಪಾತ್ರಗಳಿಗೆ ತಮ್ಮನ್ನ ತಾವು ಒಗ್ಗಿಸಿಕೊಳ್ತಿದ್ದಾರೆ.

ಹೀಗಾಗಿ, ಸದ್ಯ ರಿಲೀಸ್ ಆಗಿರೋ ಟ್ರೈಲರ್ ದೀಪಿಕಾ ಹೀಗೂ ಕಮಾಲ್ ಮಾಡಬಹುದಾ ಅನ್ನೋ ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ. ಇನ್ನು ಜನವರಿಯಲ್ಲಿ ರಿಲೀಸ್ ಆಗ್ತಿರೋ ಮಹಿಳೆ ಮೇಲಿನ ದೌರ್ಜನ್ಯದ ಕಥೆ ಹೇಳಿರೋ ಚಾಪಕ್​ನಲ್ಲಿ ದೀಪಿಕಾ ಅಭಿನಯಿಸಿದ್ದಾರೆ. ಇನ್ನು ಈ ಸಿನಿಮಾ ಸಮಾಜದಲ್ಲಿನ ಒಂದಿಷ್ಟು ವಿಕೃತ ಮನಸ್ಸುಗಳನ್ನ ಬದಲಾಯಿಸುವಲ್ಲಿ ಸಕ್ಸಸ್ ಆಗುತ್ತಾ ನೋಡಬೇಕಿದೆ.

Published On - 10:32 am, Wed, 11 December 19

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ