AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾಲಕ ಈಗ ಬಾಲಿವುಡ್​ನ ಸೂಪರ್​ ಸ್ಟಾರ್​, ಭವಿಷ್ಯದ ಡಾನ್​; ಯಾರು ಅಂತ ಗೊತ್ತಾಯ್ತಾ?

ಸೆಲೆಬ್ರಿಟಿಗಳು ತಾವು ಚಿಕ್ಕ ವಯಸ್ಸಿನಲ್ಲಿ ತೆಗೆಸಿಕೊಂಡ ಫೋಟೋಗಳನ್ನು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುತ್ತಾರೆ. ಅವುಗಳಿಗೆ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಾರೆ. ಈಗ ಬಾಲಿವುಡ್​ನ ಓರ್ವ ಸ್ಟಾರ್​ ಹೀರೋ ಫೋಟೋ ವೈರಲ್​ ಆಗಿದೆ.

ಈ ಬಾಲಕ ಈಗ ಬಾಲಿವುಡ್​ನ ಸೂಪರ್​ ಸ್ಟಾರ್​, ಭವಿಷ್ಯದ ಡಾನ್​; ಯಾರು ಅಂತ ಗೊತ್ತಾಯ್ತಾ?
ಬಾಲಿವುಡ್​ ನಟನ ಬಾಲ್ಯದ ಫೋಟೋ
Follow us
ಮದನ್​ ಕುಮಾರ್​
|

Updated on: Aug 11, 2023 | 11:08 AM

ನಟ-ನಟಿಯರ ಬಾಲ್ಯದ ಫೋಟೋಗಳ (Childhood Photo) ಬಗ್ಗೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕುತೂಹಲ. ತಮ್ಮ ನೆಚ್ಚಿನ ಕಲಾವಿದರು ಬಾಲ್ಯದಲ್ಲಿ ಹೇಗೆ ಕಾಣುತ್ತಿದ್ದರು ಎಂಬುದನ್ನು ತಿಳಿಯುವ ಆಸಕ್ತಿ ಎಲ್ಲರಿಗೂ ಇರುತ್ತದೆ. ಹಾಗಾಗಿ ಸೆಲೆಬ್ರಿಟಿಗಳು ತಾವು ಚಿಕ್ಕ ವಯಸ್ಸಿನಲ್ಲಿ ತೆಗೆಸಿಕೊಂಡ ಫೋಟೋಗಳನ್ನು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುತ್ತಾರೆ. ಅವುಗಳಿಗೆ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಾರೆ. ಈಗ ಬಾಲಿವುಡ್​ನ ಓರ್ವ ಸ್ಟಾರ್​ ಹೀರೋ ಫೋಟೋ ವೈರಲ್​ ಆಗಿದೆ. ಅಂದು ಚಿಕ್ಕ ಬಾಲಕನಾಗಿದ್ದ ಅವರು ಈಗ ಬಹುಬೇಡಿಕೆಯ ಸ್ಟಾರ್​. ಭವಿಷ್ಯದಲ್ಲಿ ಡಾನ್​ ಕೂಡ ಆಗುತ್ತಾರೆ. ಯಾರು ಅಂತ ಗೊತ್ತಾಯ್ತಾ? ಇದು ಬೇರೆ ಯಾರೂ ಅಲ್ಲ, ನಟ ರಣವೀರ್​ ಸಿಂಗ್​! ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಅವರು ಹೊಸ ಸಿನಿಮಾದ (Don 3) ತಯಾರಿಯಲ್ಲಿದ್ದಾರೆ. ರಣವೀರ್​ ಸಿಂಗ್​ (Ranveer Singh) ಅವರ ಬಾಲ್ಯದ ಈ ಫೋಟೋ ಗಮನ ಸೆಳೆಯುತ್ತಿದೆ.

ಬಾಲಿವುಡ್​ನಲ್ಲಿ ‘ಡಾನ್​’ ಸಿನಿಮಾ ಸರಣಿ ತುಂಬ ಫೇಮಸ್​. ಈಗಾಗಲೇ ಅಮಿತಾಭ್​ ಬಚ್ಚನ್​ ಮತ್ತು ಶಾರುಖ್ ಖಾನ್​ ಅವರು ಡಾನ್​ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದಾರೆ. ‘ಡಾನ್​ 3’ ಸಿನಿಮಾದಲ್ಲಿ ಶಾರುಖ್​ ಖಾನ್​ ನಟಿಸುತ್ತಿಲ್ಲ. ಅವರ ಬದಲಿಗೆ ರಣವೀರ್​ ಸಿಂಗ್​ ಅವರಿಗೆ ಅವಕಾಶ ಸಿಕ್ಕಿದೆ. ಈಗಾಗಲೇ ನಿರ್ದೇಶಕ ಫರ್ಹಾನ್​ ಅಖ್ತರ್​ ಅವರು ‘ಡಾನ್​ 3’ ಚಿತ್ರವನ್ನು ಅನೌನ್ಸ್​ ಮಾಡಿದ್ದಾರೆ. ಅದರ ಬೆನ್ನಲ್ಲೇ ರಣವೀರ್​ ಸಿಂಗ್​ ಅವರು ಬಾಲ್ಯದ ಫೋಟೋ ಹಂಚಿಕೊಂಡು ತಮ್ಮ ಮನದ ಮಾತುಗಳನ್ನು ತಿಳಿಸಿದ್ದಾರೆ.

ಅಮಿತಾಭ್​ ಬಚ್ಚನ್​ ಮತ್ತು ಶಾರುಖ್​ ಖಾನ್​ ಅವರು ಮಾಡಿ ಸೈ ಎನಿಸಿಕೊಂಡ ಪಾತ್ರವನ್ನು ಈಗ ಬೇರೆ ನಟ ಮುಂದುವರಿಸುವುದು ಎಂದರೆ ಸುಲಭದ ಮಾತಲ್ಲ. ಅದು ದೊಡ್ಡ ಜವಾಬ್ದಾರಿ. ಅದನ್ನು ತಾವು ಸಮರ್ಥವಾಗಿ ನಿಭಾಯಿಸುವುದಾಗಿ ರಣವೀರ್​ ಸಿಂಗ್​ ಭರವಸೆ ನೀಡಿದ್ದಾರೆ. ಅಮಿತಾಭ್​ ಬಚ್ಚನ್​ ಮತ್ತು ಶಾರುಖ್​ ಖಾನ್​ಗೆ ಹೆಮ್ಮೆ ಆಗುವ ರೀತಿಯಲ್ಲಿ ನಟಿಸುವುದಾಗಿ ರಣವೀರ್​ ಸಿಂಗ್​ ಹೇಳಿದ್ದಾರೆ. ತಮ್ಮ ಮೇಲೆ ನಂಬಿಕೆ ಇಟ್ಟು ಈ ಪಾತ್ರ ನೀಡಿದ ಚಿತ್ರತಂಡಕ್ಕೆ ಅವರು ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ‘ಒಂದು ಎಚ್ಚರಿಕೆ ಕೊಟ್ಟಿದ್ದರೆ ಚೆನ್ನಾಗಿರುತ್ತಿತ್ತು’; ದೀಪಿಕಾ ಪಡುಕೋಣೆ ಹಾಟ್​ ಅವತಾರಕ್ಕೆ ದಂಗಾದ ಪತಿ ರಣವೀರ್​ ಸಿಂಗ್​

ಇತ್ತೀಚಿನ ವರ್ಷಗಳಲ್ಲಿ ರಣವೀರ್​ ಸಿಂಗ್​ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ‘83’, ‘ಜಯೇಶ್​ಭಾಯ್​ ಜೋರ್ದಾರ್​’ ಮುಂತಾದ ಸಿನಿಮಾಗಳು ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಸಾಧಾರಣ ಗಳಿಕೆ ಮಾಡಿದೆ. ಮುಂದಿನ ಸಿನಿಮಾಗಳಲ್ಲಿ ರಣವೀರ್​ ಸಿಂಗ್​ ಅವರು ಹೆಚ್ಚು ಶ್ರಮ ಮತ್ತು ಕಾಳಜಿ ವಹಿಸಿ ಕೆಲಸ ಮಾಡಬೇಕಿದೆ. ‘ಡಾನ್​ 3’ ಸಿನಿಮಾದಲ್ಲಿ ಭರಪೂರ ಮನರಂಜನೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಈ ಚಿತ್ರದ ಟೀಸರ್​ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್