AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾಲಕ ಈಗ ಬಾಲಿವುಡ್​ನ ಸೂಪರ್​ ಸ್ಟಾರ್​, ಭವಿಷ್ಯದ ಡಾನ್​; ಯಾರು ಅಂತ ಗೊತ್ತಾಯ್ತಾ?

ಸೆಲೆಬ್ರಿಟಿಗಳು ತಾವು ಚಿಕ್ಕ ವಯಸ್ಸಿನಲ್ಲಿ ತೆಗೆಸಿಕೊಂಡ ಫೋಟೋಗಳನ್ನು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುತ್ತಾರೆ. ಅವುಗಳಿಗೆ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಾರೆ. ಈಗ ಬಾಲಿವುಡ್​ನ ಓರ್ವ ಸ್ಟಾರ್​ ಹೀರೋ ಫೋಟೋ ವೈರಲ್​ ಆಗಿದೆ.

ಈ ಬಾಲಕ ಈಗ ಬಾಲಿವುಡ್​ನ ಸೂಪರ್​ ಸ್ಟಾರ್​, ಭವಿಷ್ಯದ ಡಾನ್​; ಯಾರು ಅಂತ ಗೊತ್ತಾಯ್ತಾ?
ಬಾಲಿವುಡ್​ ನಟನ ಬಾಲ್ಯದ ಫೋಟೋ
ಮದನ್​ ಕುಮಾರ್​
|

Updated on: Aug 11, 2023 | 11:08 AM

Share

ನಟ-ನಟಿಯರ ಬಾಲ್ಯದ ಫೋಟೋಗಳ (Childhood Photo) ಬಗ್ಗೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕುತೂಹಲ. ತಮ್ಮ ನೆಚ್ಚಿನ ಕಲಾವಿದರು ಬಾಲ್ಯದಲ್ಲಿ ಹೇಗೆ ಕಾಣುತ್ತಿದ್ದರು ಎಂಬುದನ್ನು ತಿಳಿಯುವ ಆಸಕ್ತಿ ಎಲ್ಲರಿಗೂ ಇರುತ್ತದೆ. ಹಾಗಾಗಿ ಸೆಲೆಬ್ರಿಟಿಗಳು ತಾವು ಚಿಕ್ಕ ವಯಸ್ಸಿನಲ್ಲಿ ತೆಗೆಸಿಕೊಂಡ ಫೋಟೋಗಳನ್ನು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುತ್ತಾರೆ. ಅವುಗಳಿಗೆ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಾರೆ. ಈಗ ಬಾಲಿವುಡ್​ನ ಓರ್ವ ಸ್ಟಾರ್​ ಹೀರೋ ಫೋಟೋ ವೈರಲ್​ ಆಗಿದೆ. ಅಂದು ಚಿಕ್ಕ ಬಾಲಕನಾಗಿದ್ದ ಅವರು ಈಗ ಬಹುಬೇಡಿಕೆಯ ಸ್ಟಾರ್​. ಭವಿಷ್ಯದಲ್ಲಿ ಡಾನ್​ ಕೂಡ ಆಗುತ್ತಾರೆ. ಯಾರು ಅಂತ ಗೊತ್ತಾಯ್ತಾ? ಇದು ಬೇರೆ ಯಾರೂ ಅಲ್ಲ, ನಟ ರಣವೀರ್​ ಸಿಂಗ್​! ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಅವರು ಹೊಸ ಸಿನಿಮಾದ (Don 3) ತಯಾರಿಯಲ್ಲಿದ್ದಾರೆ. ರಣವೀರ್​ ಸಿಂಗ್​ (Ranveer Singh) ಅವರ ಬಾಲ್ಯದ ಈ ಫೋಟೋ ಗಮನ ಸೆಳೆಯುತ್ತಿದೆ.

ಬಾಲಿವುಡ್​ನಲ್ಲಿ ‘ಡಾನ್​’ ಸಿನಿಮಾ ಸರಣಿ ತುಂಬ ಫೇಮಸ್​. ಈಗಾಗಲೇ ಅಮಿತಾಭ್​ ಬಚ್ಚನ್​ ಮತ್ತು ಶಾರುಖ್ ಖಾನ್​ ಅವರು ಡಾನ್​ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದಾರೆ. ‘ಡಾನ್​ 3’ ಸಿನಿಮಾದಲ್ಲಿ ಶಾರುಖ್​ ಖಾನ್​ ನಟಿಸುತ್ತಿಲ್ಲ. ಅವರ ಬದಲಿಗೆ ರಣವೀರ್​ ಸಿಂಗ್​ ಅವರಿಗೆ ಅವಕಾಶ ಸಿಕ್ಕಿದೆ. ಈಗಾಗಲೇ ನಿರ್ದೇಶಕ ಫರ್ಹಾನ್​ ಅಖ್ತರ್​ ಅವರು ‘ಡಾನ್​ 3’ ಚಿತ್ರವನ್ನು ಅನೌನ್ಸ್​ ಮಾಡಿದ್ದಾರೆ. ಅದರ ಬೆನ್ನಲ್ಲೇ ರಣವೀರ್​ ಸಿಂಗ್​ ಅವರು ಬಾಲ್ಯದ ಫೋಟೋ ಹಂಚಿಕೊಂಡು ತಮ್ಮ ಮನದ ಮಾತುಗಳನ್ನು ತಿಳಿಸಿದ್ದಾರೆ.

ಅಮಿತಾಭ್​ ಬಚ್ಚನ್​ ಮತ್ತು ಶಾರುಖ್​ ಖಾನ್​ ಅವರು ಮಾಡಿ ಸೈ ಎನಿಸಿಕೊಂಡ ಪಾತ್ರವನ್ನು ಈಗ ಬೇರೆ ನಟ ಮುಂದುವರಿಸುವುದು ಎಂದರೆ ಸುಲಭದ ಮಾತಲ್ಲ. ಅದು ದೊಡ್ಡ ಜವಾಬ್ದಾರಿ. ಅದನ್ನು ತಾವು ಸಮರ್ಥವಾಗಿ ನಿಭಾಯಿಸುವುದಾಗಿ ರಣವೀರ್​ ಸಿಂಗ್​ ಭರವಸೆ ನೀಡಿದ್ದಾರೆ. ಅಮಿತಾಭ್​ ಬಚ್ಚನ್​ ಮತ್ತು ಶಾರುಖ್​ ಖಾನ್​ಗೆ ಹೆಮ್ಮೆ ಆಗುವ ರೀತಿಯಲ್ಲಿ ನಟಿಸುವುದಾಗಿ ರಣವೀರ್​ ಸಿಂಗ್​ ಹೇಳಿದ್ದಾರೆ. ತಮ್ಮ ಮೇಲೆ ನಂಬಿಕೆ ಇಟ್ಟು ಈ ಪಾತ್ರ ನೀಡಿದ ಚಿತ್ರತಂಡಕ್ಕೆ ಅವರು ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ‘ಒಂದು ಎಚ್ಚರಿಕೆ ಕೊಟ್ಟಿದ್ದರೆ ಚೆನ್ನಾಗಿರುತ್ತಿತ್ತು’; ದೀಪಿಕಾ ಪಡುಕೋಣೆ ಹಾಟ್​ ಅವತಾರಕ್ಕೆ ದಂಗಾದ ಪತಿ ರಣವೀರ್​ ಸಿಂಗ್​

ಇತ್ತೀಚಿನ ವರ್ಷಗಳಲ್ಲಿ ರಣವೀರ್​ ಸಿಂಗ್​ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ‘83’, ‘ಜಯೇಶ್​ಭಾಯ್​ ಜೋರ್ದಾರ್​’ ಮುಂತಾದ ಸಿನಿಮಾಗಳು ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಸಾಧಾರಣ ಗಳಿಕೆ ಮಾಡಿದೆ. ಮುಂದಿನ ಸಿನಿಮಾಗಳಲ್ಲಿ ರಣವೀರ್​ ಸಿಂಗ್​ ಅವರು ಹೆಚ್ಚು ಶ್ರಮ ಮತ್ತು ಕಾಳಜಿ ವಹಿಸಿ ಕೆಲಸ ಮಾಡಬೇಕಿದೆ. ‘ಡಾನ್​ 3’ ಸಿನಿಮಾದಲ್ಲಿ ಭರಪೂರ ಮನರಂಜನೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಈ ಚಿತ್ರದ ಟೀಸರ್​ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ