AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾಲಕ ಈಗ ಬಾಲಿವುಡ್​ನ ಸೂಪರ್​ ಸ್ಟಾರ್​, ಭವಿಷ್ಯದ ಡಾನ್​; ಯಾರು ಅಂತ ಗೊತ್ತಾಯ್ತಾ?

ಸೆಲೆಬ್ರಿಟಿಗಳು ತಾವು ಚಿಕ್ಕ ವಯಸ್ಸಿನಲ್ಲಿ ತೆಗೆಸಿಕೊಂಡ ಫೋಟೋಗಳನ್ನು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುತ್ತಾರೆ. ಅವುಗಳಿಗೆ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಾರೆ. ಈಗ ಬಾಲಿವುಡ್​ನ ಓರ್ವ ಸ್ಟಾರ್​ ಹೀರೋ ಫೋಟೋ ವೈರಲ್​ ಆಗಿದೆ.

ಈ ಬಾಲಕ ಈಗ ಬಾಲಿವುಡ್​ನ ಸೂಪರ್​ ಸ್ಟಾರ್​, ಭವಿಷ್ಯದ ಡಾನ್​; ಯಾರು ಅಂತ ಗೊತ್ತಾಯ್ತಾ?
ಬಾಲಿವುಡ್​ ನಟನ ಬಾಲ್ಯದ ಫೋಟೋ
ಮದನ್​ ಕುಮಾರ್​
|

Updated on: Aug 11, 2023 | 11:08 AM

Share

ನಟ-ನಟಿಯರ ಬಾಲ್ಯದ ಫೋಟೋಗಳ (Childhood Photo) ಬಗ್ಗೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕುತೂಹಲ. ತಮ್ಮ ನೆಚ್ಚಿನ ಕಲಾವಿದರು ಬಾಲ್ಯದಲ್ಲಿ ಹೇಗೆ ಕಾಣುತ್ತಿದ್ದರು ಎಂಬುದನ್ನು ತಿಳಿಯುವ ಆಸಕ್ತಿ ಎಲ್ಲರಿಗೂ ಇರುತ್ತದೆ. ಹಾಗಾಗಿ ಸೆಲೆಬ್ರಿಟಿಗಳು ತಾವು ಚಿಕ್ಕ ವಯಸ್ಸಿನಲ್ಲಿ ತೆಗೆಸಿಕೊಂಡ ಫೋಟೋಗಳನ್ನು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುತ್ತಾರೆ. ಅವುಗಳಿಗೆ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಾರೆ. ಈಗ ಬಾಲಿವುಡ್​ನ ಓರ್ವ ಸ್ಟಾರ್​ ಹೀರೋ ಫೋಟೋ ವೈರಲ್​ ಆಗಿದೆ. ಅಂದು ಚಿಕ್ಕ ಬಾಲಕನಾಗಿದ್ದ ಅವರು ಈಗ ಬಹುಬೇಡಿಕೆಯ ಸ್ಟಾರ್​. ಭವಿಷ್ಯದಲ್ಲಿ ಡಾನ್​ ಕೂಡ ಆಗುತ್ತಾರೆ. ಯಾರು ಅಂತ ಗೊತ್ತಾಯ್ತಾ? ಇದು ಬೇರೆ ಯಾರೂ ಅಲ್ಲ, ನಟ ರಣವೀರ್​ ಸಿಂಗ್​! ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಅವರು ಹೊಸ ಸಿನಿಮಾದ (Don 3) ತಯಾರಿಯಲ್ಲಿದ್ದಾರೆ. ರಣವೀರ್​ ಸಿಂಗ್​ (Ranveer Singh) ಅವರ ಬಾಲ್ಯದ ಈ ಫೋಟೋ ಗಮನ ಸೆಳೆಯುತ್ತಿದೆ.

ಬಾಲಿವುಡ್​ನಲ್ಲಿ ‘ಡಾನ್​’ ಸಿನಿಮಾ ಸರಣಿ ತುಂಬ ಫೇಮಸ್​. ಈಗಾಗಲೇ ಅಮಿತಾಭ್​ ಬಚ್ಚನ್​ ಮತ್ತು ಶಾರುಖ್ ಖಾನ್​ ಅವರು ಡಾನ್​ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದಾರೆ. ‘ಡಾನ್​ 3’ ಸಿನಿಮಾದಲ್ಲಿ ಶಾರುಖ್​ ಖಾನ್​ ನಟಿಸುತ್ತಿಲ್ಲ. ಅವರ ಬದಲಿಗೆ ರಣವೀರ್​ ಸಿಂಗ್​ ಅವರಿಗೆ ಅವಕಾಶ ಸಿಕ್ಕಿದೆ. ಈಗಾಗಲೇ ನಿರ್ದೇಶಕ ಫರ್ಹಾನ್​ ಅಖ್ತರ್​ ಅವರು ‘ಡಾನ್​ 3’ ಚಿತ್ರವನ್ನು ಅನೌನ್ಸ್​ ಮಾಡಿದ್ದಾರೆ. ಅದರ ಬೆನ್ನಲ್ಲೇ ರಣವೀರ್​ ಸಿಂಗ್​ ಅವರು ಬಾಲ್ಯದ ಫೋಟೋ ಹಂಚಿಕೊಂಡು ತಮ್ಮ ಮನದ ಮಾತುಗಳನ್ನು ತಿಳಿಸಿದ್ದಾರೆ.

ಅಮಿತಾಭ್​ ಬಚ್ಚನ್​ ಮತ್ತು ಶಾರುಖ್​ ಖಾನ್​ ಅವರು ಮಾಡಿ ಸೈ ಎನಿಸಿಕೊಂಡ ಪಾತ್ರವನ್ನು ಈಗ ಬೇರೆ ನಟ ಮುಂದುವರಿಸುವುದು ಎಂದರೆ ಸುಲಭದ ಮಾತಲ್ಲ. ಅದು ದೊಡ್ಡ ಜವಾಬ್ದಾರಿ. ಅದನ್ನು ತಾವು ಸಮರ್ಥವಾಗಿ ನಿಭಾಯಿಸುವುದಾಗಿ ರಣವೀರ್​ ಸಿಂಗ್​ ಭರವಸೆ ನೀಡಿದ್ದಾರೆ. ಅಮಿತಾಭ್​ ಬಚ್ಚನ್​ ಮತ್ತು ಶಾರುಖ್​ ಖಾನ್​ಗೆ ಹೆಮ್ಮೆ ಆಗುವ ರೀತಿಯಲ್ಲಿ ನಟಿಸುವುದಾಗಿ ರಣವೀರ್​ ಸಿಂಗ್​ ಹೇಳಿದ್ದಾರೆ. ತಮ್ಮ ಮೇಲೆ ನಂಬಿಕೆ ಇಟ್ಟು ಈ ಪಾತ್ರ ನೀಡಿದ ಚಿತ್ರತಂಡಕ್ಕೆ ಅವರು ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ‘ಒಂದು ಎಚ್ಚರಿಕೆ ಕೊಟ್ಟಿದ್ದರೆ ಚೆನ್ನಾಗಿರುತ್ತಿತ್ತು’; ದೀಪಿಕಾ ಪಡುಕೋಣೆ ಹಾಟ್​ ಅವತಾರಕ್ಕೆ ದಂಗಾದ ಪತಿ ರಣವೀರ್​ ಸಿಂಗ್​

ಇತ್ತೀಚಿನ ವರ್ಷಗಳಲ್ಲಿ ರಣವೀರ್​ ಸಿಂಗ್​ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ‘83’, ‘ಜಯೇಶ್​ಭಾಯ್​ ಜೋರ್ದಾರ್​’ ಮುಂತಾದ ಸಿನಿಮಾಗಳು ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಸಾಧಾರಣ ಗಳಿಕೆ ಮಾಡಿದೆ. ಮುಂದಿನ ಸಿನಿಮಾಗಳಲ್ಲಿ ರಣವೀರ್​ ಸಿಂಗ್​ ಅವರು ಹೆಚ್ಚು ಶ್ರಮ ಮತ್ತು ಕಾಳಜಿ ವಹಿಸಿ ಕೆಲಸ ಮಾಡಬೇಕಿದೆ. ‘ಡಾನ್​ 3’ ಸಿನಿಮಾದಲ್ಲಿ ಭರಪೂರ ಮನರಂಜನೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಈ ಚಿತ್ರದ ಟೀಸರ್​ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು