AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಸಿನಿಮಾದಲ್ಲಿ ಕಂತೆ ಕಂತೆ ನಕಲಿ ನೋಟು ಬಳಕೆ; ಇಲ್ಲಿದೆ ಸಾಕ್ಷಿ

ಬಿಡುಗಡೆಗೂ ಮುನ್ನವೇ ‘ಸಿಕಂದರ್’ ಸಿನಿಮಾ ಟ್ರೋಲ್ ಆಗುತ್ತಿದೆ. ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ನಟನೆಯ ಈ ಚಿತ್ರ ಈದ್ ಪ್ರಯುಕ್ತ ತೆರೆಕಾಣಲಿದೆ. ಅನುಭವಿ ನಿರ್ದೇಶಕ ಎ.ಆರ್. ಮುರುಗದಾಸ್ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಈ ಚಿತ್ರದ ದೃಶ್ಯದಲ್ಲಿ ನಕಲಿ ನೋಟುಗಳು ಬಳಕೆ ಆಗಿರುವುದನ್ನು ನೆಟ್ಟಿಗರು ಪತ್ತೆ ಹಚ್ಚಿದ್ದಾರೆ.

ಸಲ್ಮಾನ್ ಖಾನ್ ಸಿನಿಮಾದಲ್ಲಿ ಕಂತೆ ಕಂತೆ ನಕಲಿ ನೋಟು ಬಳಕೆ; ಇಲ್ಲಿದೆ ಸಾಕ್ಷಿ
Fake Currency Note
ಮದನ್​ ಕುಮಾರ್​
|

Updated on: Mar 26, 2025 | 6:32 PM

Share

ನಟ ಸಲ್ಮಾನ್ ಖಾನ್ (Salman Khan) ಅವರು ‘ಸಿಕಂದರ್’ (Sikandar) ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಮಾರ್ಚ್​ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಆದರೆ ಬಿಡುಗಡೆಗೂ ಮುನ್ನ ಕೆಲವು ನೆಗೆಟಿವ್ ಕಾರಣಗಳಿಂದ ಈ ಸಿನಿಮಾ ಸುದ್ದಿ ಆಗುತ್ತಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅವರು ನಾಯಕಿಯಾಗಿ ನಟಿಸಿದ್ದಾರೆ. ಟ್ರೇಲರ್​ನಲ್ಲಿ ಅವರ ನಟನೆ ಕಳಪೆ ಆಗಿದೆ ಎಂದು ಜನರು ಟ್ರೋಲ್ ಮಾಡಿದ್ದರು. ಈಗ ಇನ್ನೊಂದು ವಿಷಯದ ಬಗ್ಗೆ ಚರ್ಚೆ ಆಗುತ್ತಿದೆ. ಈ ಸಿನಿಮಾದ ದೃಶ್ಯವೊಂದರಲ್ಲಿ ಕಂತೆ-ಕಂತೆ ನಕಲಿ ನೋಟುಗಳು (Fake Currency Note) ಬಳಕೆ ಆಗಿರುವುದು ಕಾಣಿಸಿದೆ!

‘ಸಿಕಂದರ್’ ಸಿನಿಮಾಗೆ ಎ.ಆರ್. ಮುರುಗದಾಸ್ ಅವರು ನಿರ್ದೇಶನ ಮಾಡಿದ್ದಾರೆ. ‘ಘಜಿನಿ’ ರೀತಿಯ ಸೂಪರ್ ಹಿಟ್ ಸಿನಿಮಾ ನೀಡಿದ ಖ್ಯಾತಿ ಅವರಿಗೆ ಇದೆ. ಆದರೆ ‘ಸಿಕಂದರ್’ ಸಿನಿಮಾದಲ್ಲಿ ಅವರು ಕೆಲವು ಎಡವಟ್ಟುಗಳನ್ನು ಮಾಡಿದಂತಿದೆ. ಟ್ರೇಲರ್​ನಲ್ಲಿ ಪ್ರೇಕ್ಷಕರಿಗೆ ಒಂದಷ್ಟು ತಪ್ಪುಗಳು ಕಾಣಿಸುತ್ತಿವೆ. ಅದನ್ನು ಸಾಕ್ಷಿ ಸಮೇತ ತೋರಿಸಲಾಗುತ್ತಿದೆ.

‘ಸಿಕಂದರ್’ ಸಿನಿಮಾ ಟ್ರೇಲರ್:

ಇದನ್ನೂ ಓದಿ
Image
ಸಲ್ಲು ಜೊತೆ ಪ್ರೇಮ, ಇಬ್ಬರು ಮಕ್ಕಳ ತಂದೆಯ ಜೊತೆ ವಿವಾಹ, ಆ ಬಳಿಕ ವಿಚ್ಛೇದನ
Image
ಸಿನಿಮಾ ಕೈಬಿಟ್ಟು ಸಲ್ಮಾನ್ ಖಾನ್​ಗೆ ಕ್ಷಮೆ ಕೇಳಿದ ಅಟ್ಲಿ; ರಾಂಗ್ ಆದ ನಟ?
Image
ದಕ್ಷಿಣದ ನಿರ್ದೇಶಕನ ಮೇಲೆ ಉರಿದು ಬಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು, ಕಾರಣ?
Image
ಸಲ್ಮಾನ್ ಖಾನ್​ಗೆ ಬಂದಿರಲಿಲ್ಲ ಆಫರ್; ಜೀವನ ಬದಲಾಯಿಸಿದ ವ್ಯಕ್ತಿ ಇವರು

ಈ ಸಿನಿಮಾದ ಟ್ರೇಲರ್​ನಲ್ಲಿ ಹೀಗೊಂದು ದೃಶ್ಯ ಇದೆ. ಟ್ಯಾಕ್ಸಿ ಚಾಲಕನಿಗೆ ಸಲ್ಮಾನ್ ಖಾನ್ ಅವರು 500 ರೂಪಾಯಿ ನೋಟುಗಳ ಎರಡು ಕಂತೆಗಳನ್ನು ನೀಡುತ್ತಾರೆ. ಇದನ್ನು ಝೂಮ್ ಮಾಡಿ ನೋಡಿದಾಗ ಅವು ನಕಲಿ ನೋಟುಗಳು ಎಂಬುದು ಗೊತ್ತಾಗಿದೆ. ‘ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ’ ಎಂದು ಬರೆದಿರಬೇಕಾದ ಜಾಗದಲ್ಲಿ ‘ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ’ ಎಂದು ಬರೆದಿದೆ.

ಸೋಶಿಯಲ್ ಮೀಡಿಯಾದಲ್ಲಿ ಜನರು ಈ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಇಂಥ ವಿವರಗಳ ಬಗ್ಗೆ ನಿರ್ದೇಶಕರು ಯಾಕೆ ಗಮನ ಹರಿಸಿಲ್ಲ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಇಂಥ ಕಳಪೆ ಕೆಲಸದ ಕಾರಣದಿಂದಲೇ ಬಾಲಿವುಡ್ ಸಿನಿಮಾಗಳು ಸೋಲುತ್ತಿವೆ ಎಂದು ಕೂಡ ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಕೆಲವರು ಮಾತ್ರ ನಕಲಿ ನೋಟುಗಳ ಬಳಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹಾಲಿವುಡ್ ಸಿನಿಮಾದಲ್ಲಿ ಸಲ್ಮಾನ್ ಖಾನ್, ಸಂಜಯ್ ದತ್; ಸಿಕ್ತು ಬಿಗ್ ನ್ಯೂಸ್

‘ಸಿನಿಮಾದ ಶೂಟಿಂಗ್​ನಲ್ಲಿ ಕಂತೆ ಕಂತೆ ರಿಯಲ್ ನೋಟುಗಳನ್ನು ಬಳಸಲು ಸಾಧ್ಯವಿಲ್ಲ. ಹಾಗಾಗಿ ನಕಲಿ ನೋಟುಗಳನ್ನು ಬಳಸಲಾಗಿದೆ. ಅಷ್ಟಕ್ಕೂ ಸಿನಿಮಾದ ಕಥೆಯಲ್ಲಿ ಈ ದೃಶ್ಯ ಯಾವ ರೀತಿ ಮೂಡಿಬಂದಿದೆ ಎಂಬುದನ್ನು ತಿಳಿಯದೇ ಕೇವಲ ಟ್ರೇಲರ್ ನೋಡಿ ನಿರ್ಧಾರಕ್ಕೆ ಬರುವುದು ಸರಿಯಲ್ಲ’ ಎಂದು ಸಲ್ಮಾನ್ ಖಾನ್ ಅವರ ಅಪ್ಪಟ ಅಭಿಮಾನಿಗಳು ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ