AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನನ್ನು ತೆಲುಗು ಚಿತ್ರರಂಗದ ಭಾಗವಾಗಿ ಪರಿಗಣಿಸಿ’; ಕೋರಿಕೆ ಇಟ್ಟ ಅಮಿತಾಭ್ ಬಚ್ಚನ್

ಚಿರಂಜೀವಿ ಅವರಿಗೆ ಅಕ್ಕಿನೇನಿ ನಾಗೇಶ್ವರ ರಾವ್ ಸ್ಮರಣಾರ್ಥ ಎಎನ್ಆರ್ ರಾಷ್ಟ್ರೀಯ ಪ್ರಶಸ್ತಿಯನ್ನು ಅಮಿತಾಬ್ ಬಚ್ಚನ್ ಅವರು ಪ್ರದಾನ ಮಾಡಿದರು. ಈ ಸಮಾರಂಭದಲ್ಲಿ ಅಮಿತಾಬ್ ಬಚ್ಚನ್ ತಮ್ಮ ಮತ್ತು ಚಿರಂಜೀವಿ ಅವರ ನಿಕಟ ಸಂಬಂಧದ ಬಗ್ಗೆ ಮಾತನಾಡಿದರು ಮತ್ತು 'ಕಲ್ಕಿ 2898 ಎಡಿ' ಚಿತ್ರದಲ್ಲಿ ನಟಿಸಿದ ಅನುಭವವನ್ನು ಹಂಚಿಕೊಂಡರು.

‘ನನ್ನನ್ನು ತೆಲುಗು ಚಿತ್ರರಂಗದ ಭಾಗವಾಗಿ ಪರಿಗಣಿಸಿ’; ಕೋರಿಕೆ ಇಟ್ಟ ಅಮಿತಾಭ್ ಬಚ್ಚನ್
ರಾಜೇಶ್ ದುಗ್ಗುಮನೆ
|

Updated on: Oct 29, 2024 | 8:49 AM

Share

ಅಕ್ಕಿನೇನಿ ನಾಗೇಶ್ವರ್ ರಾವ್ ಸ್ಮರಣಾರ್ಥ ಅಕ್ಕಿನೇನಿ ಇಂಟರ್​ನ್ಯಾಷನಲ್ ಫೌಂಡೇಷನ್ ಎಎನ್​ಆರ್​ ನ್ಯಾಷನಲ್​ ಅವಾರ್ಡ್ ನೀಡುತ್ತಾ ಬಂದಿದೆ. ಈ ಬಾರಿ ಈ ಪ್ರಶಸ್ತಿಯನ್ನು ಚಿರಂಜೀವಿ ಅವರಿಗೆ ನೀಡಲಾಗಿದೆ. ಅಮಿತಾಭ್ ಬಚ್ಚನ್ ಅವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ಈ ಅವಾರ್ಡ್​ನ ಚಿರಂಜೀವಿಗೆ ನೀಡಿದ್ದಾರೆ.

ಚಿರಂಜೀವಿ ಹಾಗೂ ಅಮಿತಾಭ್ ಬಚ್ಚನ್ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಈ ಬಾಂಧವ್ಯದ ಬಗ್ಗೆ ಅಮಿತಾಭ್ ಬಚ್ಚನ್ ಮಾತನಾಡಿದ್ದಾರೆ. ‘ಕಲ್ಕಿ 2898 ಎಡಿ’, ‘ಮನಮ್’, ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ನಟಿಸಿ ತೆಲುಗು ಚಿತ್ರರಂಗದಲ್ಲಿ ಅವರು ಹೆಸರು ಮಾಡಿದ್ದಾರೆ. ತೆಲುಗು ಚಿತ್ರರಂಗದ ಒಂದು ಭಾಗ ಎನ್ನುವ ಭಾವನೆ ಅಮಿತಾಭ್ ಅವರಿಗೆ ಬಂದಿದೆ.

‘ಚಿರಂಜೀವಿ ನನ್ನ ಆಪ್ತ ಗೆಳೆಯ. ನಾನು ಏನನ್ನಾದರೂ ಕೇಳಿದರೆ ಅಥವಾ ಏನಾದರೂ ಬೇಕಿದ್ದರೆ ಅವರು ಸದಾ ನನ್ನ ಜೊತೆ ಇರುತ್ತಾರೆ. ಅದಕ್ಕೆ ಧನ್ಯವಾದಗಳು. ನಿಮ್ಮ ಸಿನಿಮಾದಲ್ಲಿ ನನಗೆ ಅವಕಾಶ ನೀಡಿದ್ದಕ್ಕೆ ಧನ್ಯವಾದ. ವೈಜಯಂತಿ ನಿರ್ಮಾಣದಲ್ಲಿ ಸಿನಿಮಾದಲ್ಲಿ ಕೆಲಸ ಮಾಡಲು ಅವಕಾಶ ನೀಡಿದ ನಾಗ್ ಅಶ್ವಿನ್​ಗೆ (ಕಲ್ಕಿ 2898 ಎಡಿ) ಧನ್ಯವಾದ. ನಾನು ತೆಲುಗು ಚಿತ್ರರಂಗದ ಸದಸ್ಯ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ’ ಎಂದಿದ್ದಾರೆ ಅವರು.

‘ನಾನು ಮತ್ತೊಮ್ಮೆ ನನ್ನ ಕೃತಜ್ಞತೆ ಹೇಳಲು ಬಯಸುತ್ತೇನೆ. ದಯವಿಟ್ಟು ಇನ್ನು ಮುಂದೆ ನನ್ನನ್ನು ತೆಲುಗು ಚಿತ್ರರಂಗದ ಸದಸ್ಯನಾಗಿ ಪರಿಗಣಿಸಿ. ನಾಗಾರ್ಜುನ, ನಾಗ್​ ಅಶ್ವಿನ್, ಚಿರಂಜೀವಿ ಅವರಂತವರು ಅವಕಾಶ ನೀಡಿದ್ದಕ್ಕೆ ಧನ್ಯವಾದ. ಮುಂದಿನ ಬಾರಿ ನಿಮ್ಮ ಸಿನಿಮಾಗಳಲ್ಲಿ ನನಗೆ ಅವಕಾಶ ನೀಡಲು ಮರೆಯಬೇಡಿ’ ಅವರು ಹೇಳಿದ್ದಾರೆ.

ಇದನ್ನೂ ಓದಿ: ಈ ಫೋಟೋದಲ್ಲಿ ಇದ್ದಾರೆ ಅಮಿತಾಭ್ ಬಚ್ಚನ್; ಯಾರೆಂದು ಪತ್ತೆ ಹಚ್ಚುವಿರಾ?

ಅಮಿತಾಭ್ ಬಚ್ಚನ್ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಅಶ್ವತ್ಥಾಮನಾಗಿ ಕಾಣಿಸಿಕೊಂಡರು. ಅವರ ಪಾತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಅವರು ಎರಡನೇ ಪಾರ್ಟ್​ನಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಶೂಟಿಂಗ್ ಶೀಘ್ರವೇ ಆರಂಭ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ