AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಚಿನ್ನದ ಗಣಿಯ ಕರಾಳ ಕಥೆ ಹೇಳಲಿದೆ ತಮಿಳಿನ ಈ ಸಿನಿಮಾ

ಕನ್ನಡದ ‘ಕೆಜಿಎಫ್’ ಚಿತ್ರದಲ್ಲಿ ಕೋಲಾರದ ಚಿನ್ನದ ಗಣಿಯನ್ನು ತೋರಿಸಲಾಗಿತ್ತು. ಆದರೆ, ಇಲ್ಲಿ ಇದ್ದಿದ್ದೆಲ್ಲವೂ ಕಾಲ್ಪನಿಕ ಕಥೆ. ಆದರೆ, ‘ತಂಗಳಾನ್’ ಚಿತ್ರದಲ್ಲಿ ಕೆಜಿಎಫ್​ನ ನೈಜ ಕಥೆ ಹೇಳಲಾಗುತ್ತಿದೆ. ಇಲ್ಲಿನ ಕಾರ್ಮಿಕರ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ನಿರ್ದೇಕ ಪಾ. ರಂಜಿತ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಕೋಲಾರ ಚಿನ್ನದ ಗಣಿಯ ಕರಾಳ ಕಥೆ ಹೇಳಲಿದೆ ತಮಿಳಿನ ಈ ಸಿನಿಮಾ
ಚಿಯಾನ್ ವಿಕ್ರಂ
ರಾಜೇಶ್ ದುಗ್ಗುಮನೆ
|

Updated on: Feb 27, 2024 | 7:32 AM

Share

ಚಿಯಾನ್ ವಿಕ್ರಮ್ (Chiyan Vikram) ಅವರು ಭಿನ್ನ ಪಾತ್ರಗಳ ಮೂಲಕ ಗಮನ ಸೆಳೆಯುತ್ತಾರೆ. ಅವರು ಆಯ್ಕೆ ಮಾಡಿಕೊಳ್ಳುವ ಪಾತ್ರಗಳು ಸಾಕಷ್ಟು ಭಿನ್ನವಾಗಿರುತ್ತವೆ. ಈಗ ಅವರು ‘ತಂಗಳಾನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ರಿವೀಲ್ ಆದಾಗಿನಿಂದಲೂ ಸಿನಿಮಾ ಬಗ್ಗೆ ಹೈಪ್ ಸೃಷ್ಟಿ ಆಗಿದೆ. ಈ ಚಿತ್ರದ ಕಥೆ ಸಾಗೋದು 19ನೇ ಶತಮಾನದಲ್ಲಿ. ನೈಜ ಘಟನೆಯನ್ನು ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ. ವಿಶೇಷ ಎಂದರೆ ಈ ಚಿತ್ರವನ್ನು ಕೋಲಾರದಲ್ಲಿರುವ ಚಿನ್ನದ ಗಣಿಯಲ್ಲಿ ಶೂಟ್ ಮಾಡಲಾಗಿದೆ. ಈ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿದೆ.

‘ಕೆಜಿಎಫ್’ ಸಿನಿಮಾದಲ್ಲಿ ಕೋಲಾರದ ಚಿನ್ನದ ಗಣಿಯನ್ನು ತೋರಿಸಲಾಗಿದೆ. ಆದರೆ, ಇಲ್ಲಿ ಇದ್ದಿದ್ದೆಲ್ಲವೂ ಕಾಲ್ಪನಿಕ ಕಥೆ ಆಗಿತ್ತು. ಆದರೆ, ‘ತಂಗಳಾನ್’ ಸಿನಿಮಾದಲ್ಲಿ ಕೆಜಿಎಫ್​ನ ನೈಜ ಕಥೆ ಹೇಳಲಾಗುತ್ತಿದೆ. ಇಲ್ಲಿನ ಕಾರ್ಮಿಕರ ಕಥೆಯನ್ನು ಸಿನಿಮಾದಲ್ಲಿ ಹೇಳಲಾಗುತ್ತಿದೆ. ನಿರ್ದೇಕ ಪಾ. ರಂಜಿತ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಈ ಸಿನಿಮಾ ಕೋಲಾರ ಚಿನ್ನದ ಗಣಿಯ ನೈಜ ಕಥೆಯನ್ನು ಹೇಳಲಿದೆ. ಒಂದು ಸಾವಿರ ವರ್ಷಗಳ ಹಿಂದೆ ಕೋಲಾರ ಚಿನ್ನದ ಗಣಿಯನ್ನು ಬ್ರಿಟಿಷರು ಕಂಡುಹಿಡಿದರು. ಅದನ್ನು ಅವರು ತಮ್ಮ ಸ್ವಂತ ಉದ್ದೇಶಗಳಿಗಾಗಿ ಬಳಸಿಕೊಂಡರು ಮತ್ತು ಲೂಟಿ ಮಾಡಿದರು. ಈ ವೇಳೆ ಕಾರ್ಮಿಕರಿಗೆ ಸಾಕಷ್ಟು ಹಿಂಸೆ ನೀಡಲಾಗಿತ್ತು. ಇದನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ.

‘ತಂಗಳಾನ್’ ಸಿನಿಮಾದ ಟೀಸರ್ ಈಗಾಗಲೇ ರಿಲೀಸ್ ಆಗಿ ಗಮನ ಸೆಳೆದಿದೆ. ಈ ಚಿತ್ರದ ರಿಲೀಸ್ ಡೇಟ್ ಇನ್ನೂ ಘೋಷಣೆ ಆಗಿಲ್ಲ. 2024 ಏಪ್ರಿಲ್​ನಲ್ಲಿ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ. ತಮಿಳು ಮಾತ್ರವಲ್ಲದೆ ಕನ್ನಡ, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಜಿವಿ ಪ್ರಕಾಶ್ ಕುಮಾರ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ಧಗೊಳ್ಳುತ್ತಿದೆ ಮತ್ತೊಂದು ‘ಕೆಜಿಎಫ್​’ ಸಿನಿಮಾ; ಚಿಯಾನ್ ವಿಕ್ರಮ್ ಹೀರೋ

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ತಂಗಳಾನ್’ ಸಿನಿಮಾ ಜನವರಿ 26ರಂದೇ ರಿಲೀಸ್ ಆಗಬೇಕಿತ್ತು. ಆದರೆ, ಸಿನಿಮಾದ ಕೆಲಸಗಳು ಪೂರ್ಣಗೊಂಡಿಲ್ಲ ಎನ್ನುವ ಕಾರಣಕ್ಕೆ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಯಿತು. ಈ ಚಿತ್ರದ ಕಥೆ 1870ರಿಂದ 1940ರವರೆಗೆ ಸಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!