AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ವಿವಾದದ ಬೆನ್ನಲ್ಲೇ ಮುಂಬೈನಲ್ಲಿನ 7 ಕೋಟಿ ರೂಪಾಯಿ ಆಸ್ತಿ ಮಾರಿಕೊಂಡ ಪ್ರಿಯಾಂಕಾ ಚೋಪ್ರಾ

ಇಷ್ಟು ವರ್ಷಗಳ ಕಾಲ ಈ ಪ್ರಾಪರ್ಟಿಯನ್ನು ಪ್ರಿಯಾಂಕಾ ಚೋಪ್ರಾ ಅವರು ಬಾಡಿಗೆಗೆ ನೀಡಿದ್ದರು. ಆದರೆ ಈಗ ಮಾರಾಟ ಮಾಡಿದ್ದಾರೆ. ಅವರ ಪರವಾಗಿ ತಾಯಿ ಮಧು ಚೋಪ್ರಾ ಈ ವ್ಯವಹಾರ ನಡೆಸಿದ್ದಾರೆ.

Priyanka Chopra: ವಿವಾದದ ಬೆನ್ನಲ್ಲೇ ಮುಂಬೈನಲ್ಲಿನ 7 ಕೋಟಿ ರೂಪಾಯಿ ಆಸ್ತಿ ಮಾರಿಕೊಂಡ ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್
ಮದನ್​ ಕುಮಾರ್​
|

Updated on: Apr 17, 2023 | 7:15 AM

Share

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಇತ್ತೀಚಿನ ದಿನಗಳಲ್ಲಿ ವಿವಾದದ ಕಾರಣದಿಂದ ಸುದ್ದಿ ಆಗಿದ್ದಾರೆ. ತುಂಬ ವರ್ಷಗಳ ಹಿಂದೆ ಬಾಲಿವುಡ್​ನಲ್ಲಿ ತಾವು ಅನುಭವಿಸಿದ ಕಷ್ಟದ ಬಗ್ಗೆ ಈಗ ಮಾತನಾಡಿದ್ದಕ್ಕಾಗಿ ಅವರು ಟೀಕೆಗೆ ಒಳಗಾದರು. ಕೆಲವರು ಅವರಿಗೆ ಬೆಂಬಲ ಸೂಚಿಸಿದರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದರು. ಈ ಎಲ್ಲ ಕಿರಿಕ್​ಗಳ ಬೆನ್ನಲ್ಲೇ ಅವರೊಂದು ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ಮುಂಬೈನಲ್ಲಿ ತಮಗೆ ಸೇರಿದ ಆಸ್ತಿಯೊಂದನ್ನು ಅವರು ಮಾರಿದ್ದಾರೆ. ಬರೋಬ್ಬರಿ 7 ಕೋಟಿ ರೂಪಾಯಿ ಬೆಲೆ ಬಾಳುವ ಪ್ರಾಪರ್ಟಿಯನ್ನು ಅವರು ಮಾರಾಟ ಮಾಡಿದ್ದಾರೆ. ಈ ಮೂಲಕ ಅವರು ಶಾಶ್ವತವಾಗಿ ಮುಂಬೈ (Mumbai) ಜೊತೆಗಿನ ನಂಟಿಗೆ ವಿದಾಯ ಹೇಳುತ್ತಾರಾ ಎಂಬ ಅನುಮಾನ ಮೂಡಿದೆ. ಸದ್ಯ ಅವರು ಹಿಂದಿಯಲ್ಲಿ ಯಾವುದೇ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಅವರ ಸಂಪೂರ್ಣ ಗಮನ ಹಾಲಿವುಡ್​ ಮೇಲಿದೆ.

2018ರಲ್ಲಿ ನಿಕ್​ ಜೋನಸ್​ ಅವರನ್ನು ಮದುವೆ ಆದ ಬಳಿಕ ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕಕ್ಕೆ ಶಿಫ್ಟ್​ ಆದರು. ಈಗ ಅವರು ಅಲ್ಲಿಯೇ ಸೆಟ್ಲ್​ ಆಗಿದ್ದಾರೆ. ಹಾಲಿವುಡ್​ ಸಿನಿಮಾಗಳಿಂದ ಅವರಿಗೆ ಅವಕಾಶಗಳು ಸಿಗುತ್ತಿವೆ. ಈ ಸಂದರ್ಭದಲ್ಲಿ ಅವರು ಮುಂಬೈನಲ್ಲಿನ ಆಸ್ತಿ ಮಾರಿದ್ದಾರೆ. ಇಷ್ಟು ವರ್ಷಗಳ ಕಾಲ ಆ ಜಾಗವನ್ನು ಅವರು ಬಾಡಿಗೆಗೆ ನೀಡಿದ್ದರು. ಆದರೆ ಈಗ ಮಾರಾಟ ಮಾಡಿದ್ದಾರೆ. ಪ್ರಿಯಾಂಕಾ ಚೋಪ್ರಾ ಪರವಾಗಿ ಅವರ ತಾಯಿ ಮಧು ಚೋಪ್ರಾ ಈ ವ್ಯವಹಾರ ನಡೆಸಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ ರೀತಿ ಬ್ಯಾಕ್​ಲೆಸ್​ ಆಗಿ ನಟಿಸ್ತಾರಾ ಸಮಂತಾ ರುತ್​ ಪ್ರಭು?

ಇದನ್ನೂ ಓದಿ
Image
Priyanka Chopra: ಫ್ಯಾನ್ಸ್​ ವಾವ್​ ಎನ್ನುವಂತೆ ಗ್ಲಾಮರ್​ ವೇಷ ಧರಿಸಿದ ಪ್ರಿಯಾಂಕಾ ಚೋಪ್ರಾ; ಇಲ್ಲಿವೆ ಫೋಟೋಗಳು
Image
ಶಾಕಿಂಗ್​ ಸತ್ಯದ ಜತೆ ಮೊದಲ ಬಾರಿ ಮಗು ಫೋಟೋ ತೋರಿಸಿದ ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್​
Image
ಪ್ರಿಯಾಂಕಾ ಚೋಪ್ರಾ ಮಗಳ ಹೆಸರು ಮಾಲ್ತಿ ಮೇರಿ ಚೋಪ್ರಾ ಜೋನಸ್​; ಏನು ಇದರ ಅರ್ಥ?
Image
ಕಪ್ಪು ಸೀರೆ ಧರಿಸಿ ‘ಪ್ರೀ ಆಸ್ಕರ್​ ಪಾರ್ಟಿ’ಯಲ್ಲಿ ಮಿಂಚಿದ ‘ದೇಸಿ ಗರ್ಲ್​’ ಪ್ರಿಯಾಂಕಾ ಚೋಪ್ರಾ

ಏನೇ ಎಂದರೂ ಪ್ರಿಯಾಂಕಾ ಚೋಪ್ರಾ ಅವರಿಗೆ ಮುಂಬೈ ನಗರದ ಜೊತೆ ವಿಶೇಷ ನಂಟು ಇದೆ. ಅವರಿಗೆ ಹೆಸರು ಮತ್ತು ಯಶಸ್ಸನ್ನು ತಂದುಕೊಟ್ಟ ನಗರ ಅದು. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ಸಲುವಾಗಿ ಮುಂಬೈಗೆ ಬಂದಿದ್ದ ಅವರು ಕೆಲವು ದಿನಗಳ ಕಾಲ ಇಲ್ಲಿಯೇ ಉಳಿದುಕೊಂಡಿದ್ದರು. ಮಗಳು ಮಾಲ್ತಿ ಮೇರಿ ಜೋನಸ್​ ಚೋಪ್ರಾ ಜೊತೆ ಅವರು ಮುಂಬೈನ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಇದನ್ನೂ ಓದಿ: Priyanka Chopra: ಮುಂಬೈನಲ್ಲಿ ಮಗಳ ಜೊತೆ ಗಣಪತಿ ದೇವರ ದರ್ಶನ ಪಡೆದ ನಟಿ ಪ್ರಿಯಾಂಕಾ ಚೋಪ್ರಾ; ಇಲ್ಲಿದೆ ಫೋಟೋ

ಹಿಂದಿ ಚಿತ್ರರಂಗದಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಹಲವು ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. 2002ರಲ್ಲಿ ಬಾಲಿವುಡ್​ಗೆ ಕಾಲಿಟ್ಟ ಅವರು ಸ್ಟಾರ್​ ನಟಿಯಾಗಿ ಮೆರೆದರು. ‘ಬಾಜಿ ರಾವ್​ ಮಸ್ತಾನಿ’ ರೀತಿಯ ಸೂಪರ್ ಹಿಟ್​ ಸಿನಿಮಾಗಳನ್ನು ನೀಡಿದರು. 2016ರಲ್ಲಿ ಬಂದ ‘ಜೈ ಗಂಗಾಜಲ್​’ ಸಿನಿಮಾವೇ ಕೊನೇ. ಆ ಬಳಿಕ ಪ್ರಿಯಾಂಕಾ ಚೋಪ್ರಾ ಅವರು ಹಿಂದಿಯ ಯಾವುದೇ ಸಿನಿಮಾದಲ್ಲೂ ನಟಿಸಿಲ್ಲ. ಅವರು ಮತ್ತೆ ಬಾಲಿವುಡ್​ಗೆ ಕಮ್​ಬ್ಯಾಕ್​ ಮಾಡಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ. ಆದರೆ ಅಭಿಮಾನಿಗಳ ಆಸೆ ಸದ್ಯಕ್ಕಂತೂ ಈಡೇರುವಂತೆ ಕಾಣುತ್ತಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್