AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jawan: ‘ತಾಕತ್ತಿದ್ದರೆ ಜವಾನ್​ ಎದುರು ನಿಮ್ಮ ಸಿನಿಮಾ ರಿಲೀಸ್​ ಮಾಡಿ’: ವಿವೇಕ್​ ಅಗ್ನಿಹೋತ್ರಿಗೆ ನೇರ ಸವಾಲು

Vivek Agnihotri: ಇತ್ತೀಚೆಗೆ ವಿವೇಕ್​ ಅಗ್ನಿಹೋತ್ರಿ ಅವರು ಟ್ವಿಟರ್​ನಲ್ಲಿ ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ಶಾರುಖ್​ ಖಾನ್ ಅವರ ಅಭಿಮಾನಿಯೊಬ್ಬರು ನೇರವಾಗಿ ಚಾಲೆಂಜ್​ ಮಾಡಿದ್ದಾರೆ.

Jawan: ‘ತಾಕತ್ತಿದ್ದರೆ ಜವಾನ್​ ಎದುರು ನಿಮ್ಮ ಸಿನಿಮಾ ರಿಲೀಸ್​ ಮಾಡಿ’: ವಿವೇಕ್​ ಅಗ್ನಿಹೋತ್ರಿಗೆ ನೇರ ಸವಾಲು
ಶಾರುಖ್​ ಖಾನ್​, ವಿವೇಕ್ ಅಗ್ನಿಹೋತ್ರಿ
ಮದನ್​ ಕುಮಾರ್​
|

Updated on: Jul 12, 2023 | 7:35 PM

Share

ಬಾಲಿವುಡ್​ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರಿಗೆ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಿಂದ ಸಖತ್​ ಜನಪ್ರಿಯತೆ ಸಿಕ್ಕಿತು. ಈಗ ಅವರು ‘ದಿ ವ್ಯಾಕ್ಸಿನ್​ ವಾರ್​’ (Vivek Agnihotri) ಸಿನಿಮಾ ಮಾಡುತ್ತಿದ್ದಾರೆ. ಈ ವರ್ಷ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆ ಸಿನಿಮಾ ಬಿಡುಗಡೆ ಆಗಲಿದೆ. ಸೋಶಿಯಲ್​ ಮೀಡಿಯಾದಲ್ಲಿ ವಿವೇಕ್​ ಅಗ್ನಿಹೋತ್ರಿ ಅವರು ಆ್ಯಕ್ಟೀವ್​ ಆಗಿದ್ದಾರೆ. ಅವರಿಗೆ ನೆಟ್ಟಿಗರೊಬ್ಬರು ನೇರ ಸವಾಲು ಎಸೆದಿದ್ದಾರೆ. ‘ತಾಕತ್ತಿದ್ದರೆ ನಿಮ್ಮ ಸಿನಿಮಾವನ್ನು ಜವಾನ್​ (Jawan Movie) ಚಿತ್ರದ ಎದುರು ರಿಲೀಸ್​ ಮಾಡಿ’ ಎಂದು ಚಾಲೆಂಜ್​ ಮಾಡಲಾಗಿದೆ. ಅದಕ್ಕೆ ವಿವೇಕ್​ ಅಗ್ನಿಹೋತ್ರಿ ಕೊಟ್ಟ ಉತ್ತರ ಏನು? ಈ ಸ್ಟೋರಿಯಲ್ಲಿದೆ ವಿವರ..

ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾ ಮೇಲೆ ಭರ್ಜರಿ ಹೈಪ್​ ಕ್ರಿಯೇಟ್​ ಆಗಿದೆ. ಅಟ್ಲಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇತ್ತೀಚೆಗೆ ರಿಲೀಸ್​ ಆಗಿರುವ ಪ್ರಿವ್ಯೂ ನೋಡಿ ಜನರು ವಾವ್​ ಎನ್ನುತ್ತಿದ್ದಾರೆ. ಸೆಪ್ಟೆಂಬರ್​ 7ರಂದು ‘ಜವಾನ್​’ ರಿಲೀಸ್​ ಆಗಲಿದೆ. ಆ ಸಿನಿಮಾ ಖಂಡಿತವಾಗಿಯೂ ಬ್ಲಾಕ್​ಬಸ್ಟರ್​ ಆಗಲಿದೆ ಎಂದು ಅನೇಕರು ಭವಿಷ್ಯ ನುಡಿಯುತ್ತಿದ್ದಾರೆ. ಅಂಥ ಸಿನಿಮಾದ ಎದುರು ತಮ್ಮ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರವನ್ನು ರಿಲೀಸ್​ ಮಾಡಲು ವಿವೇಕ್​ ಅಗ್ನಿಹೋತ್ರಿ ಕೂಡ ಸಿದ್ಧರಿಲ್ಲ.

ಇತ್ತೀಚೆಗೆ ವಿವೇಕ್​ ಅಗ್ನಿಹೋತ್ರಿ ಅವರು ಟ್ವಿಟರ್​ನಲ್ಲಿ ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ಶಾರುಖ್​ ಖಾನ್ ಅವರ ಅಭಿಮಾನಿಯೊಬ್ಬರು ನೇರವಾಗಿ ಚಾಲೆಂಜ್​ ಮಾಡಿದ್ದಾರೆ. ‘ತಾಕತ್ತಿದ್ದರೆ ಶಾರುಖ್​ ಖಾನ್​ ಎದುರು ಕ್ಲ್ಯಾಶ್​ ಮಾಡಿಕೊಳ್ಳಿ’ ಎಂದು ಸವಾಲು ಎಸೆದಿದ್ದಾರೆ. ಇದಕ್ಕೆ ವಿವೇಕ್​ ಅಗ್ನಿಹೋತ್ರಿ ಅವರು ಕೂಲ್​ ಆಗಿ ಉತ್ತರ ನೀಡಿದ್ದಾರೆ. ‘ಬಾಲಿವುಡ್​ನ ಆಟದಲ್ಲಿ ನಾವು ಭಾಗಿಯಾಗಲ್ಲ. ಕ್ಲ್ಯಾಶ್ ಎಂಬ ಪದ ಇರುವುದು ಸ್ಟಾರ್​ಗಳಿಗೆ ಮತ್ತು ಮಾಧ್ಯಮದವರಿಗೆ ಮಾತ್ರ’ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದಾರೆ.

ಇದನ್ನೂ ಓದಿ: Vivek Agnihotri: ‘ಹಿಂಸೆಯ ವೈಭವೀಕರಣವೂ ಟ್ಯಾಲೆಂಟ್​ ಆಗಿಬಿಟ್ಟಿದೆ’: ‘ಸಲಾರ್​’ ಟೀಸರ್​ ಬಿಡುಗಡೆ ಬೆನ್ನಲ್ಲೇ ವಿವೇಕ್​ ಅಗ್ನಿಹೋತ್ರಿ ಟ್ವೀಟ್​

‘ನಾನು ಭರವಸೆ ಕೊಡುತ್ತೇನೆ. ಶಾರುಖ್​ ಖಾನ್​ ಅವರ ‘ಜವಾನ್​’ ಸಿನಿಮಾ ಸಾರ್ವಕಾಲಿಕ ಬ್ಲಾಕ್​ ಬಸ್ಟರ್​ ಆಗಲಿದೆ. ಅದನ್ನು ನೋಡಿದ ಬಳಿಕ ದಯವಿಟ್ಟು ನಮ್ಮ ಚಿಕ್ಕ ಸಿನಿಮಾವನ್ನೂ ನೋಡಿ. ಭಾರತದ ದೊಡ್ಡ ಯುದ್ಧದ ಬಗ್ಗೆ ನಿಮಗೆ ತಿಳಿದಿರದ ವಿಷಯಗಳು ಕುರಿತು ಮಾಡಿರುವ ಸಿನಿಮಾ ನಮ್ಮದು’ ಎಂದು ವಿವೇಕ್​ ಅಗ್ನಿಹೋತ್ರಿ ಟ್ವೀಟ್​ ಮಾಡಿದ್ದಾರೆ. ಅವರ ಈ ಪೋಸ್ಟ್​ ವೈರಲ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?