AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jawan: ‘ತಾಕತ್ತಿದ್ದರೆ ಜವಾನ್​ ಎದುರು ನಿಮ್ಮ ಸಿನಿಮಾ ರಿಲೀಸ್​ ಮಾಡಿ’: ವಿವೇಕ್​ ಅಗ್ನಿಹೋತ್ರಿಗೆ ನೇರ ಸವಾಲು

Vivek Agnihotri: ಇತ್ತೀಚೆಗೆ ವಿವೇಕ್​ ಅಗ್ನಿಹೋತ್ರಿ ಅವರು ಟ್ವಿಟರ್​ನಲ್ಲಿ ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ಶಾರುಖ್​ ಖಾನ್ ಅವರ ಅಭಿಮಾನಿಯೊಬ್ಬರು ನೇರವಾಗಿ ಚಾಲೆಂಜ್​ ಮಾಡಿದ್ದಾರೆ.

Jawan: ‘ತಾಕತ್ತಿದ್ದರೆ ಜವಾನ್​ ಎದುರು ನಿಮ್ಮ ಸಿನಿಮಾ ರಿಲೀಸ್​ ಮಾಡಿ’: ವಿವೇಕ್​ ಅಗ್ನಿಹೋತ್ರಿಗೆ ನೇರ ಸವಾಲು
ಶಾರುಖ್​ ಖಾನ್​, ವಿವೇಕ್ ಅಗ್ನಿಹೋತ್ರಿ
ಮದನ್​ ಕುಮಾರ್​
|

Updated on: Jul 12, 2023 | 7:35 PM

Share

ಬಾಲಿವುಡ್​ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರಿಗೆ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಿಂದ ಸಖತ್​ ಜನಪ್ರಿಯತೆ ಸಿಕ್ಕಿತು. ಈಗ ಅವರು ‘ದಿ ವ್ಯಾಕ್ಸಿನ್​ ವಾರ್​’ (Vivek Agnihotri) ಸಿನಿಮಾ ಮಾಡುತ್ತಿದ್ದಾರೆ. ಈ ವರ್ಷ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆ ಸಿನಿಮಾ ಬಿಡುಗಡೆ ಆಗಲಿದೆ. ಸೋಶಿಯಲ್​ ಮೀಡಿಯಾದಲ್ಲಿ ವಿವೇಕ್​ ಅಗ್ನಿಹೋತ್ರಿ ಅವರು ಆ್ಯಕ್ಟೀವ್​ ಆಗಿದ್ದಾರೆ. ಅವರಿಗೆ ನೆಟ್ಟಿಗರೊಬ್ಬರು ನೇರ ಸವಾಲು ಎಸೆದಿದ್ದಾರೆ. ‘ತಾಕತ್ತಿದ್ದರೆ ನಿಮ್ಮ ಸಿನಿಮಾವನ್ನು ಜವಾನ್​ (Jawan Movie) ಚಿತ್ರದ ಎದುರು ರಿಲೀಸ್​ ಮಾಡಿ’ ಎಂದು ಚಾಲೆಂಜ್​ ಮಾಡಲಾಗಿದೆ. ಅದಕ್ಕೆ ವಿವೇಕ್​ ಅಗ್ನಿಹೋತ್ರಿ ಕೊಟ್ಟ ಉತ್ತರ ಏನು? ಈ ಸ್ಟೋರಿಯಲ್ಲಿದೆ ವಿವರ..

ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾ ಮೇಲೆ ಭರ್ಜರಿ ಹೈಪ್​ ಕ್ರಿಯೇಟ್​ ಆಗಿದೆ. ಅಟ್ಲಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇತ್ತೀಚೆಗೆ ರಿಲೀಸ್​ ಆಗಿರುವ ಪ್ರಿವ್ಯೂ ನೋಡಿ ಜನರು ವಾವ್​ ಎನ್ನುತ್ತಿದ್ದಾರೆ. ಸೆಪ್ಟೆಂಬರ್​ 7ರಂದು ‘ಜವಾನ್​’ ರಿಲೀಸ್​ ಆಗಲಿದೆ. ಆ ಸಿನಿಮಾ ಖಂಡಿತವಾಗಿಯೂ ಬ್ಲಾಕ್​ಬಸ್ಟರ್​ ಆಗಲಿದೆ ಎಂದು ಅನೇಕರು ಭವಿಷ್ಯ ನುಡಿಯುತ್ತಿದ್ದಾರೆ. ಅಂಥ ಸಿನಿಮಾದ ಎದುರು ತಮ್ಮ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರವನ್ನು ರಿಲೀಸ್​ ಮಾಡಲು ವಿವೇಕ್​ ಅಗ್ನಿಹೋತ್ರಿ ಕೂಡ ಸಿದ್ಧರಿಲ್ಲ.

ಇತ್ತೀಚೆಗೆ ವಿವೇಕ್​ ಅಗ್ನಿಹೋತ್ರಿ ಅವರು ಟ್ವಿಟರ್​ನಲ್ಲಿ ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ಶಾರುಖ್​ ಖಾನ್ ಅವರ ಅಭಿಮಾನಿಯೊಬ್ಬರು ನೇರವಾಗಿ ಚಾಲೆಂಜ್​ ಮಾಡಿದ್ದಾರೆ. ‘ತಾಕತ್ತಿದ್ದರೆ ಶಾರುಖ್​ ಖಾನ್​ ಎದುರು ಕ್ಲ್ಯಾಶ್​ ಮಾಡಿಕೊಳ್ಳಿ’ ಎಂದು ಸವಾಲು ಎಸೆದಿದ್ದಾರೆ. ಇದಕ್ಕೆ ವಿವೇಕ್​ ಅಗ್ನಿಹೋತ್ರಿ ಅವರು ಕೂಲ್​ ಆಗಿ ಉತ್ತರ ನೀಡಿದ್ದಾರೆ. ‘ಬಾಲಿವುಡ್​ನ ಆಟದಲ್ಲಿ ನಾವು ಭಾಗಿಯಾಗಲ್ಲ. ಕ್ಲ್ಯಾಶ್ ಎಂಬ ಪದ ಇರುವುದು ಸ್ಟಾರ್​ಗಳಿಗೆ ಮತ್ತು ಮಾಧ್ಯಮದವರಿಗೆ ಮಾತ್ರ’ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದಾರೆ.

ಇದನ್ನೂ ಓದಿ: Vivek Agnihotri: ‘ಹಿಂಸೆಯ ವೈಭವೀಕರಣವೂ ಟ್ಯಾಲೆಂಟ್​ ಆಗಿಬಿಟ್ಟಿದೆ’: ‘ಸಲಾರ್​’ ಟೀಸರ್​ ಬಿಡುಗಡೆ ಬೆನ್ನಲ್ಲೇ ವಿವೇಕ್​ ಅಗ್ನಿಹೋತ್ರಿ ಟ್ವೀಟ್​

‘ನಾನು ಭರವಸೆ ಕೊಡುತ್ತೇನೆ. ಶಾರುಖ್​ ಖಾನ್​ ಅವರ ‘ಜವಾನ್​’ ಸಿನಿಮಾ ಸಾರ್ವಕಾಲಿಕ ಬ್ಲಾಕ್​ ಬಸ್ಟರ್​ ಆಗಲಿದೆ. ಅದನ್ನು ನೋಡಿದ ಬಳಿಕ ದಯವಿಟ್ಟು ನಮ್ಮ ಚಿಕ್ಕ ಸಿನಿಮಾವನ್ನೂ ನೋಡಿ. ಭಾರತದ ದೊಡ್ಡ ಯುದ್ಧದ ಬಗ್ಗೆ ನಿಮಗೆ ತಿಳಿದಿರದ ವಿಷಯಗಳು ಕುರಿತು ಮಾಡಿರುವ ಸಿನಿಮಾ ನಮ್ಮದು’ ಎಂದು ವಿವೇಕ್​ ಅಗ್ನಿಹೋತ್ರಿ ಟ್ವೀಟ್​ ಮಾಡಿದ್ದಾರೆ. ಅವರ ಈ ಪೋಸ್ಟ್​ ವೈರಲ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು