AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್ ವೇಳೆ ನಟಿಯರನ್ನು ಕೀಳಾಗಿ ಕಾಣಲಾಗುತ್ತದೆ: ಚಿತ್ರರಂಗದ ತಾರತಮ್ಯ ಬಿಚ್ಚಿಟ್ಟ ಕೃತಿ ಸನೋನ್

ಸಿನಿಮಾದ ಚಿತ್ರೀಕರಣದ ವೇಳೆ ನಟಿಯರನ್ನು ಹೇಗೆ ನಡೆಸಿಕೊಳ್ಳಲಾಗುತ್ತದೆ ಎಂಬುದರ ಬಗ್ಗೆ ಕೃತಿ ಸನನ್ ಅವರು ಮಾತನಾಡಿದ್ದಾರೆ. ಹೀರೋ ಮತ್ತು ಹೀರೋಯಿನ್ ನಡುವೆ ಬಹಳ ತಾರತಮ್ಯ ಮಾಡಲಾಗುತ್ತದೆ ಎಂದು ಅವರು ಓಪನ್ ಆಗಿ ಹೇಳಿದ್ದಾರೆ. ಸೆಟ್‌ಗಳಲ್ಲಿನ ಈ ತಾರತಮ್ಯಗಳು ಸಂಪೂರ್ಣವಾಗಿ ತೊಲಗಬೇಕಿದೆ ಎಂದು ಕೃತಿ ಸನೋನ್ ಅಭಿಪ್ರಾಯಪಟ್ಟಿದ್ದಾರೆ.

ಶೂಟಿಂಗ್ ವೇಳೆ ನಟಿಯರನ್ನು ಕೀಳಾಗಿ ಕಾಣಲಾಗುತ್ತದೆ: ಚಿತ್ರರಂಗದ ತಾರತಮ್ಯ ಬಿಚ್ಚಿಟ್ಟ ಕೃತಿ ಸನೋನ್
Kriti SanonImage Credit source: Instagram/kritisanon
ಮದನ್​ ಕುಮಾರ್​
|

Updated on: Jul 05, 2026 | 11:13 AM

Share

ಮುಖ್ಯಾಂಶಗಳು

  • ಲಿಲ್ಲಿ ಸಿಂಗ್ ಅವರ ಟಾಕ್ ಶೋನಲ್ಲಿ ಭಾಗವಹಿಸಿ ಮಾತನಾಡಿದ ಕೃತಿ ಸನನ್.
  • ನಟ-ನಟಿಯರ ನಡುವೆ ವ್ಯತ್ಯಾಸ ಇರುತ್ತದೆ ಎಂದು ಕೃತಿ ಸನೋನ್ ಆರೋಪ.
  • ಸಹಾಯಕ ನಿರ್ದೇಶಕರ ವರ್ತನೆ ಬಗ್ಗೆಯೂ ಕೃತಿ ಸನೋನ್ ಅಸಮಾಧಾನ.

ಚಿತ್ರರಂಗದಲ್ಲಿ ಪುರುಷ ಮತ್ತು ಮಹಿಳಾ ಕಲಾವಿದರ ನಡುವೆ ನಡೆಯುವ ಲಿಂಗ ತಾರತಮ್ಯದ (Gender Bias) ಕುರಿತು ಖ್ಯಾತ ನಟಿ ಕೃತಿ ಸನನ್ (Kriti Sanon) ಮುಕ್ತವಾಗಿ ಧ್ವನಿ ಎತ್ತಿದ್ದಾರೆ. ಚಿತ್ರೀಕರಣದ ಸೆಟ್‌ಗಳಲ್ಲಿ ಮಹಿಳಾ ಕಲಾವಿದರನ್ನು ಹೇಗೆ ಕೀಳಾಗಿ ಕಾಣಲಾಗುತ್ತದೆ ಮತ್ತು ಪುರುಷರಿಗೆ ಹೋಲಿಸಿದರೆ ನಟಿಯರನ್ನು ಹೇಗೆ ತಾರತಮ್ಯದಿಂದ ನಡೆಸಿಕೊಳ್ಳಲಾಗುತ್ತದೆ ಎಂಬುದನ್ನು ಅವರು ಬಿಚ್ಚಿಟ್ಟಿದ್ದಾರೆ. ಪ್ರಸಿದ್ಧ ಯೂಟ್ಯೂಬರ್ ಲಿಲ್ಲಿ ಸಿಂಗ್ ಅವರ ಟಾಕ್ ಶೋನಲ್ಲಿ ಭಾಗವಹಿಸಿದ್ದ ಕೃತಿ, ತಾವು ಮಾಡೆಲಿಂಗ್, ಇಂಜಿನಿಯರಿಂಗ್ ಕಾಲೇಜು ಮತ್ತು ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಭಾಗವಾಗಿದ್ದರೂ, ಬಾಲಿವುಡ್‌ನಲ್ಲೇ ಅತ್ಯಂತ ಹೆಚ್ಚು ಸವಾಲುಗಳನ್ನು ಎದುರಿಸಬೇಕಾಗಿ ಬಂತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಪ್ರಶ್ನೆ ಕೇಳಿದರೆ ಕಿರಿಕಿರಿ ಅಂತಾರೆ!’

ಚಿತ್ರೀಕರಣದ ಸಮಯದಲ್ಲಿ ಪುರುಷ ಮತ್ತು ಮಹಿಳಾ ಕಲಾವಿದರನ್ನು ನೋಡುವ ದೃಷ್ಟಿಕೋನವೇ ಬೇರೆಯಾಗಿರುತ್ತದೆ ಎಂದು ಕೃತಿ ವಿವರಿಸಿದ್ದಾರೆ. ತಮಗೆ ಚಿತ್ರಕಥೆ ಹಾಗೂ ಪಾತ್ರಗಳ ಬಗ್ಗೆ ನಿರ್ದೇಶಕರನ್ನು ಪ್ರಶ್ನಿಸುವ ಅಭ್ಯಾಸ ಮೊದಲಿನಿಂದಲೂ ಇದೆ ಎಂದ ಅವರು, ‘ಒಬ್ಬ ನಟಿ ಪ್ರಶ್ನೆ ಕೇಳಿದರೆ ಸೆಟ್‌ನಲ್ಲಿರುವವರು ‘ಇವಳು ಎಷ್ಟು ಪ್ರಶ್ನೆ ಕೇಳುತ್ತಾಳೆ, ಇನ್ನು ಇವಳ 50 ಪ್ರಶ್ನೆಗಳು ಶುರುವಾಗುತ್ತವೆ’ ಎಂದು ಆಡಿಕೊಳ್ಳುತ್ತಾರೆ. ಇದೇ ಪ್ರಶ್ನೆಯನ್ನು ಒಬ್ಬ ನಟ ಕೇಳಿದರೆ, ಅವನು ಸಿನಿಮಾದಲ್ಲಿ ತುಂಬಾ ಆಸಕ್ತಿ ಹೊಂದಿದ್ದಾನೆ ಎಂದು ಹೊಗಳುತ್ತಾರೆ’ ಎಂದು ಹೇಳಿದ್ದಾರೆ.

‘ಹೆಚ್ಚು ತಲೆ ಕೆಡಿಸಿಕೊಳ್ಳಬೇಡ, ಸುಮ್ಮನೆ ನಟಿಸು’:

‘ನನಗೂ ಇಂತಹ ಅನುಭವವಾಗಿದೆ. ನಾನು ಪ್ರಶ್ನೆ ಕೇಳಿದಾಗ ‘ಹೆಚ್ಚು ತಲೆ ಕೆಡಿಸಿಕೊಳ್ಳಬೇಡ, ಸುಮ್ಮನೆ ನಟಿಸು’ ಎಂದು ಹೇಳುತ್ತಿದ್ದರು. ಆದರೆ ಅದೇ ಪ್ರಶ್ನೆಯನ್ನು ಸಹನಟ ಕೇಳಿದಾಗ ‘ಓಕೆ, ಹಾಗೇ ಮಾಡೋಣ’ ಎಂದು ಒಪ್ಪಿಕೊಳ್ಳುತ್ತಿದ್ದರು’ ಎಂದು ಕೃತಿ ಬೇಸರ ಹಂಚಿಕೊಂಡಿದ್ದಾರೆ. ಚಿತ್ರೀಕರಣದ ವೇಳೆ ಸಿಗುವ ಸೌಲಭ್ಯಗಳಲ್ಲೂ ನಟ-ನಟಿಯರ ನಡುವೆ ವ್ಯತ್ಯಾಸ ಇರುತ್ತದೆ ಎಂದು ಕೃತಿ ಸನೋನ್ ಗಂಭೀರ ಆರೋಪ ಮಾಡಿದ್ದಾರೆ.

‘ಸಣ್ಣ ಕಾರು ಕೊಟ್ಟರೂ ಪರವಾಗಿಲ್ಲ, ಆದರೆ’:

‘ಹಲವು ಬಾರಿ ನಟರಿಗೆ ನೀಡಲಾಗುವ ಕಾರು ಅಥವಾ ಕ್ಯಾರವಾನ್ ರೂಮ್‌ಗಳು ತುಂಬಾ ಐಷಾರಾಮಿಯಾಗಿರುತ್ತವೆ. ಆದರೆ ನಟಿಯರಿಗೆ ಸಾಮಾನ್ಯವಾದ ರೂಮ್ ನೀಡಲಾಗುತ್ತದೆ. ನನಗೆ ಸಣ್ಣ ರೂಮ್ ಅಥವಾ ಸಣ್ಣ ಕಾರು ಕೊಟ್ಟರೂ ಪರವಾಗಿಲ್ಲ, ಆದರೆ ಆ ಮೂಲಕ ನಾನು ಅವರಿಗಿಂತ ಕಮ್ಮಿ ಎನ್ನುವಂತೆ ನನ್ನನ್ನು ಭಾವಿಸಬೇಡಿ ಎನ್ನುವುದಷ್ಟೇ ನನ್ನ ವಾದ’ ಎಂದು ಕೃತಿ ಹೇಳಿದ್ದಾರೆ.

ಇದರೊಂದಿಗೆ ಸಹಾಯಕ ನಿರ್ದೇಶಕರ ವರ್ತನೆಯ ಬಗ್ಗೆಯೂ ಮಾತನಾಡಿರುವ ಅವರು, ‘ಶೂಟಿಂಗ್ ಸೆಟ್‌ಗೆ ಬರುವಂತೆ ಸಹಾಯಕ ನಿರ್ದೇಶಕರು ಮೊದಲು ಹುಡುಗಿಯರನ್ನೇ ಕರೆಯುತ್ತಾರೆ. ಅವರಿಗೆ ಪುರುಷ ನಟರನ್ನು ಕಂಡರೆ ಕೊಂಚ ಭಯವಿರುತ್ತದೆ. ಹೀಗಾಗಿ ಮಹಿಳಾ ನಟಿಯರನ್ನು ಅವರು ತುಂಬಾ ಸಲೀಲಾಗಿ ತೆಗೆದುಕೊಳ್ಳುತ್ತಾರೆ’ ಎಂದಿದ್ದಾರೆ.

ಇದನ್ನೂ ಓದಿ: ‘ಕಾಕ್‌ಟೇಲ್ 2’ ಚಿತ್ರದಲ್ಲಿ ಸಲಿಂಗಿಗಳ ಪಾತ್ರ ಮಾಡಿದ್ದಾರಾ ರಶ್ಮಿಕಾ ಮಂದಣ್ಣ, ಕೃತಿ ಸನನ್?

ತಮ್ಮ ವೃತ್ತಿಜೀವನದ ಆರಂಭದ ದಿನಗಳನ್ನು ನೆನಪಿಸಿಕೊಂಡ ಕೃತಿ, ಹಿಂದೆ ಬಾಲಿವುಡ್‌ನಲ್ಲಿ ಮಹಿಳೆಯರಿಗೆ ಸಿಗುತ್ತಿದ್ದ ಪಾತ್ರಗಳು ಕೇವಲ ಗ್ಲಾಮರ್ ಅಥವಾ ನಾಯಕನ ಪ್ರೇಯಸಿಯ ಪಾತ್ರಕ್ಕೆ ಮಾತ್ರ ಸೀಮಿತವಾಗಿದ್ದವು. ಆದರೆ ಈಗ ಕಾಲ ಬದಲಾಗುತ್ತಿದೆ, ಮಹಿಳಾ ಪ್ರಧಾನ ಚಿತ್ರಗಳು ಬರುತ್ತಿವೆ ಮತ್ತು ನಟಿಯರಿಗಾಗಿ ಉತ್ತಮ ಪಾತ್ರಗಳನ್ನು ಬರೆಯಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ವಿಜಯೇಂದ್ರ
ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ವಿಜಯೇಂದ್ರ
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?
ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ಪ್ರಿಯಾಂಕ್ ಖರ್ಗೆ
ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ಪ್ರಿಯಾಂಕ್ ಖರ್ಗೆ
ನಾನಿನ್ನೂ ಬದುಕಿದ್ದೇನೆ; ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ
ನಾನಿನ್ನೂ ಬದುಕಿದ್ದೇನೆ; ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ