AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saif Ali Khan: ‘ನಮ್ಮ ಬೆಡ್​ರೂಂಗೆ ಬಂದುಬಿಡಿ’; ಪಾಪರಾಜಿ ವಿರುದ್ಧ ಕೆಂಡಕಾರಿದ ಸೈಫ್ ಅಲಿ ಖಾನ್

Paparazzi | Kareena Kapoor Khan: ಪಾರ್ಟಿ ಮುಗಿಸಿ ಬಂದಿದ್ದರಿಂದ ಸೈಫ್ ಅಲಿ ಖಾನ್​ ಸುಸ್ತಾದಂತೆ ಕಂಡರು. ಹೀಗಿರುವಾಗಲೇ ಕ್ಯಾಮೆರಾಗೆ ಪೋಸ್ ನೀಡಿ ಎನ್ನುವ ಬೇಡಿಕೆಯಿಂದ ಅವರಿಗೆ ಕಿರಿಕಿರಿ ಆಗಿದೆ.

Saif Ali Khan: ‘ನಮ್ಮ ಬೆಡ್​ರೂಂಗೆ ಬಂದುಬಿಡಿ’; ಪಾಪರಾಜಿ ವಿರುದ್ಧ ಕೆಂಡಕಾರಿದ ಸೈಫ್ ಅಲಿ ಖಾನ್
ಸೈಫ್ ಅಲಿ ಖಾನ್
ಮದನ್​ ಕುಮಾರ್​
|

Updated on: Mar 03, 2023 | 5:58 PM

Share

ಇತ್ತೀಚೆಗೆ ಪಾಪರಾಜಿಗಳ (Paparazzi) ಹಾವಳಿ ಹೆಚ್ಚುತ್ತಿದೆ. ಸೆಲೆಬ್ರಿಟಿಗಳಿಗೆ ಇದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಪಾಪರಾಜಿಗಳು ಎಲ್ಲೆಂದರಲ್ಲಿ ಕ್ಯಾಮೆರಾ ಹಿಡಿದು ಬರುತ್ತಿರುವುದರಿಂದ ನಟ-ನಟಿಯರಿಗೆ ಖಾಸಗಿತನವೇ ಇಲ್ಲದಂತಾಗಿದೆ. ಕುಟುಂಬದ ಜೊತೆ ಎಲ್ಲಾದರೂ ಹೊರಗೆ ಹೊರಟರೆ ಸಾಕು, ಕ್ಯಾಮೆರಾಗಳು ಅವರನ್ನು ಮುತ್ತಿಕೊಳ್ಳುತ್ತವೆ. ಪಾಪರಾಜಿಗಳಿಗೆ ಪೋಸ್ ಕೊಟ್ಟ ನಂತರವೇ ಮುಂದೆ ಸಾಗಬೇಕು. ಅರ್ಜೆಂಟ್​ ಆಗಿ ಹೊರಟಾಗ ಕ್ಯಾಮೆರಾ ಕಡೆ ಮುಖ ಮಾಡದೇ ಇದ್ದರೆ ಅದನ್ನು ಬೇರೆ ರೀತಿಯಲ್ಲಿ ಹೇಳಿ ಸೆಲೆಬ್ರಿಟಿಗಳ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಆಗುತ್ತದೆ. ಈಗ ಸೈಫ್ ಅಲಿ ಖಾನ್ (Saif Ali Khan) ಅವರು ಪಾಪರಾಜಿಗಳ ವಿರುದ್ಧ ಕಿಡಿಕಾರಿದ್ದಾರೆ. ‘ನಮ್ಮ ಬೆಡ್​ರೂಂಗೆ ಬಂದುಬಿಡಿ’ ಎಂದು ಕೆಂಡಕಾರಿದ್ದಾರೆ.

ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ಅವರು ನಟಿ ಮಲೈಕಾ ಅರೋರಾ ಅವರ ಬರ್ತ್​ಡೇ ಪಾರ್ಟಿಗೆ ತೆರಳಿದ್ದರು. ಮನೆಗೆ ಮರಳುವಾಗ ತಡವಾಗಿತ್ತು. ಆ ಸಂದರ್ಭದಲ್ಲೂ ಪಾಪರಾಜಿಗಳು ಕ್ಯಾಮೆರಾ ಹಿಡಿದು ಸೈಫ್ ಮನೆ ಮುಂದೆ ಕಾದು ನಿಂತಿದ್ದರು. ಸೈಫ್ ಹಾಗೂ ಕರೀನಾ ಕೆಳಗೆ ಇಳಿಯುತ್ತಿದ್ದಂತೆಯೇ ಫೋಟೋಗೆ ಬೇಡಿಕೆ ಇಡಲಾಗಿದೆ.

ಇದನ್ನೂ ಓದಿ
Image
‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​
Image
ಪ್ರೀತಿ ಜಿಂಟಾ ಮುಂದೆ ಸೈಫ್​ ಅಲಿ ಖಾನ್​ ಸ್ಟಂಟ್​ ಎಡವಟ್ಟು​; ಸತ್ತು ಹೋಗ್ತಾರೆ ಅಂತ ಭಾವಿಸಿದ್ದ ನಟಿ
Image
ಗಣೇಶನಿಗೆ ಕೈ ಮುಗಿದ ಸೈಫ್​ ಅಲಿ ಖಾನ್​ ವಿರುದ್ಧ ಒಂದು ವರ್ಗದ ನೆಟ್ಟಿಗರು ಗರಂ; ಹಬ್ಬದ ನಡುವೆ ಟ್ರೋಲ್​​
Image
‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

ಇದನ್ನೂ ಓದಿ: Goodbye: 30 ಸೆಕೆಂಡ್​ ಟೈಮ್​ ಕೊಟ್ಟ ರಶ್ಮಿಕಾ; ಬರೀ 10 ಸೆಕೆಂಡ್​ ಒಳಗೆ ಕೆಲಸ ಮುಗಿಸಿದ ಪಾಪರಾಜಿಗಳು

ಪಾರ್ಟಿ ಮುಗಿಸಿ ಬಂದಿದ್ದರಿಂದ ಸೈಫ್ ಸುಸ್ತಾದಂತೆ ಕಂಡರು. ಅವರು ಮನೆ ಒಳಗೆ ತೆರಳುವ ಆತುರದಲ್ಲಿದ್ದರು. ಹೀಗಿರುವಾಗಲೇ ಕ್ಯಾಮೆರಾಗೆ ಪೋಸ್ ನೀಡಿ ಎನ್ನುವ ಬೇಡಿಕೆಯಿಂದ ಅವರಿಗೆ ಕಿರಿಕಿರಿ ಆಗಿದೆ. ‘ಒಂದು ಕೆಲಸ ಮಾಡಿ, ನೀವು ನಮ್ಮ ಬೆಡ್​ರೂಂಗೆ ಬಂದು ಬಿಡಿ’ ಎಂದು ಸೈಫ್ ಏರುಧ್ವನಿಯಲ್ಲೇ ಹೇಳಿದ್ದಾರೆ. ಇದನ್ನು ಕೇಳಿದ ಕೆಲ ಪಾಪರಾಜಿಗಳು ‘ಇಲ್ಲ ಇಲ್ಲ’ ಎಂದು ನಗುವಿನಿಂದ ಹೇಳುವ ಪ್ರಯತ್ನ ಮಾಡಿದ್ದಾರೆ. ಇಷ್ಟಾದ ಬಳಿಕವೂ ಪೋಸ್ ನೀಡದೇ ಸೈಫ್ ಮನೆ ಒಳಗೆ ತೆರಳಿದ್ದಾರೆ.

ಇದನ್ನೂ ಓದಿ: Hrithik Roshan: ಪ್ರೇಯಸಿ ತುಟಿಗೆ ಹೃತಿಕ್​​ ರೋಷನ್​ ಕಿಸ್;​ ಜೂಮ್​ ಹಾಕಿ ವಿಡಿಯೋ ಮಾಡಿದ ಪಾಪರಾಜಿಗಳಿಗೆ ನೆಟ್ಟಿಗರ ಛೀಮಾರಿ

ಇತ್ತೀಚೆಗೆ ಆಲಿಯಾ ಭಟ್ ಅವರು ಪಾಪರಾಜಿಗಳ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ಹೊರಹಾಕಿದ್ದರು. ಮನೆಯಲ್ಲಿ ಇರುವ ಸಂದರ್ಭದಲ್ಲಿ ಪಕ್ಕದ ಬಿಲ್ಡಿಂಗ್​ನಿಂದ ಅವರ ಫೋಟೋಗಳನ್ನು ಕ್ಲಿಕ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಇದನ್ನು ಕಂಡು ಆಲಿಯಾ ಅಸಮಾಧಾನಗೊಂಡಿದ್ದರು. ಇದು ಖಾಸಗಿತನಕ್ಕೆ ಬಂದ ಧಕ್ಕೆ ಎಂದು ಅವರು ಹೇಳಿದ್ದರು.

ಸಿನಿಮಾ ವಿಚಾರಕ್ಕೆ ಬರೋದಾದರೆ ಕರೀನಾ ಕಪೂರ್ ಅವರು ಮಕ್ಕಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಸೈಫ್ ಅಲಿ ಖಾನ್ ಅವರು ವೆಬ್ ಸೀರಿಸ್ ಹಾಗೂ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ‘ಆದಿಪುರುಷ್​’ ಚಿತ್ರ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಅವರು ರಾವಣನ ಪಾತ್ರ ಮಾಡಿದ್ದಾರೆ. ಇದರ ಜೊತೆಗೆ ಜೂನಿಯರ್​ ಎನ್​ಟಿಆರ್ ನಟನೆಯ 30ನೇ ಚಿತ್ರದಲ್ಲಿ ವಿಲನ್ ಆಗಿ ಸೈಫ್​ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ