AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raju Srivastava Death: ಹಾಸ್ಯ ನಟ ರಾಜು ಶ್ರೀವಾಸ್ತವ​ ನಿಧನ; ಕಡೆಗೂ ಫಲಿಸಲಿಲ್ಲ ಅಭಿಮಾನಿಗಳ ಪ್ರಾರ್ಥನೆ

Raju Srivastava Passes Away: ಹಲವು ದಿನಗಳಿಂದ ರಾಜು ಶ್ರೀವಾಸ್ತವ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದರು.

Raju Srivastava Death: ಹಾಸ್ಯ ನಟ ರಾಜು ಶ್ರೀವಾಸ್ತವ​ ನಿಧನ; ಕಡೆಗೂ ಫಲಿಸಲಿಲ್ಲ ಅಭಿಮಾನಿಗಳ ಪ್ರಾರ್ಥನೆ
ರಾಜು
Follow us
TV9 Web
| Updated By: Digi Tech Desk

Updated on:Sep 21, 2022 | 11:48 AM

ಭಾರತೀಯ ಚಿತ್ರರಂಗದ ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ (Comedian Raju Srivastava) ಅವರು ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಅವರ ಸಾವಿನ ಸುದ್ದಿಯನ್ನು ಕುಟುಂಬದವರು ಖಚಿತಪಡಿಸಿದ್ದಾರೆ. ಹಲವು ದಿನಗಳಿಂದ ರಾಜು ಶ್ರೀವಾಸ್ತವ (Raju Srivastava) ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದರು. ಆದರೆ ಯಾರ ಪ್ರಾರ್ಥನೆಯೂ ಫಲಿಸಿಲ್ಲ. ಅವರ ನಿಧನಕ್ಕೆ (Raju Srivastava Death) ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ಆಗಸ್ಟ್ 10ರಂದು ದೆಹಲಿಯ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ರಾಜುಗೆ ಹೃದಯಾಘಾತವಾಯಿತು. ನಂತರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕಳೆದ ಒಂದು ವಾರದಿಂದ ಅವರಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಿಂದಿ ಚಿತ್ರರಂಗದಿಂದ ರಾಜು ಶ್ರೀವಾಸ್ತವ ​ ಬಣ್ಣದ ಬದುಕು ಆರಂಭಿಸಿದರು. ‘ಮೈನೆ ಪ್ಯಾರ್ ಕಿಯಾ’, ‘ಬಾಜಿಗರ್​’, ‘ಬಾಂಬೆ ಟು ಗೋವಾ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ನಂತರ ಸ್ಟ್ಯಾಂಡಪ್​ ಕಾಮಿಡಿಯನ್ ಆಗಿಯೂ ಗುರುತಿಸಿಕೊಂಡರು. ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್​’ನಲ್ಲಿ ಎರಡನೇ ರನ್ನರ್​ ಅಪ್ ಆದರು. ಇನ್ನು, ರಿಯಾಲಿಟಿ ಶೋನಲ್ಲೂ ರಾಜು ಶ್ರೀವಾಸ್ತವ ಭಾಗವಹಿಸಿದ್ದರು. ಹಿಂದಿ ಬಿಗ್ ಬಾಸ್​ನ ಮೂರನೇ ಸೀಸನ್​ಗೆ ಅವರು ಸ್ಪರ್ಧಿ ಆಗಿದ್ದರು. ‘ಕಾಮಿಡಿ ಕಾ ಮಹಾ ಮುಕ್ಬಾಲ್​’, ‘ನಾಚ್ ಬಲಿಯೇ’ ರಿಯಾಲಿಟಿ ಶೋನ ಆರನೇ ಸೀಸನ್​ಗೆ ಅವರು ಸ್ಪರ್ಧಿ ಆಗಿದ್ದರು.

ಇದನ್ನೂ ಓದಿ
Image
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​

ರಾಜು ಶ್ರೀವಾಸ್ತವ ಅವರ ನಿಧನಕ್ಕೆ ಅಭಿಮಾನಿಗಳು, ಸ್ನೇಹಿತರು ಹಾಗೂ ಸೆಲೆಬ್ರಿಟಿಗಳು ಕಂಬಿನಿ ಮಿಡಿಯುತ್ತಿದ್ದಾರೆ. ಬಾಲಿವುಡ್​ನ ಅನೇಕ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

ಸ್ಟ್ಯಾಂಡಪ್​ ಕಾಮಿಡಿ ಲೋಕದಲ್ಲಿ ರಾಜು ಶ್ರೀವಾಸ್ತವ ಅವರು ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಹಾಸ್ಯಭರಿತ ಮಾತುಗಳು ಮನಸಾರೆ ನಕ್ಕು ನಗುರಾದವರಿಗೆ ಲೆಕ್ಕವೇ ಇಲ್ಲ. ಇಂದು ಅವರನ್ನು ಕಳೆದುಕೊಂಡಿರುವುದು ಚಿತ್ರರಂಗಕ್ಕೆ ತುಂಬಲಾರದ ನಷ್ಟ ಆಗಿದೆ.

ಒಟ್ಟು 41 ದಿನಗಳ ಕಾಲ ರಾಜು ಶ್ರೀವಾಸ್ತವ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ದಾಖಲಾದ ತಕ್ಷಣವೇ ಅವರನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಕೆಲವು ದಿನಗಳ ಬಳಿಕ ಅವರ ಮಿದುಳು ನಿಷ್ಕ್ರಿಯವಾಗಿದೆ ಎಂಬುದು ತಿಳಿದುಬಂದಿತು. ಆ ಬಳಿಕ ಅಭಿಮಾನಿಗಳಲ್ಲಿ ಮತ್ತು ಕುಟುಂಬದವರಲ್ಲಿ ಚಿಂತೆ ಹೆಚ್ಚಿತ್ತು. ಆಗ ಅವರ ನಿಧನದಿಂದ ಶೋಕ ಮಡುಗಟ್ಟಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:55 am, Wed, 21 September 22

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ