AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ, ರ್ಯಾಪರ್ ಬಾದ್​ಶಾ ವಿರುದ್ಧ ಪ್ರಕರಣ

Rapper Badshah: ರ್ಯಾಪರ್ ಬಾದ್​ಶಾ ತಮ್ಮ ಹೊಸ ಹಾಡನ್ನು ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಮಾಡಿದ್ದಾರೆ. ಏಪ್ರಿಲ್ 11 ರಂದು ಅವರ ಹೊಸ ಹಾಡು ಬಿಡುಗಡೆ ಆಗಿದೆ. ಆದರೆ ಹಾಡಿನಲ್ಲಿ ಚರ್ಚು ಮತ್ತು ಬೈಬಲ್​ಗಳ ಬಳಕೆ ಮಾಡಿರುವ ಕಾರಣ ರ್ಯಾಪರ್ ಬಾದ್​ಶಾ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದಡಿ ದೂರು ದಾಖಲಿಸಲಾಗಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ, ರ್ಯಾಪರ್ ಬಾದ್​ಶಾ ವಿರುದ್ಧ ಪ್ರಕರಣ
Badshah
ಮಂಜುನಾಥ ಸಿ.
|

Updated on: May 01, 2025 | 8:12 AM

Share

ಭಾರತದಲ್ಲಿ ಇತ್ತೀಚೆಗೆ ಕಲಾವಿದರು ಒಂದಲ್ಲ ಒಂದು ವಿವಾದಕ್ಕೆ ಸಿಲುಕುತ್ತಲೇ ಇದ್ದಾರೆ. ಕಮಿಡಿಯನ್​ಗಳು, ನಟ-ನಟಿಯರು, ಇತ್ತೀಚೆಗೆ ಹಾಡುಗಾರರ ಮೇಲೂ ಸಹ ಪ್ರಕರಣಗಳು ದಾಖಲಾಗುತ್ತಿವೆ. ಭಾರತದ ಟಾಪ್ ರ್ಯಾಪರ್​ಗಳಲ್ಲಿ ಒಬ್ಬರಾಗಿರುವ ರ್ಯಾಪರ್ ಬಾದ್​ಶಾ (Badshah) ವಿರುದ್ಧ ಪಂಜಾಬ್​ನಲ್ಲಿ ದೂರು ದಾಖಲಾಗಿದೆ. ತಮ್ಮ ಹಾಡಿನ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ನೀಡಿರುವ ಆರೋಪ ಅವರ ವಿರುದ್ಧ ಕೇಳಿ ಬಂದಿದೆ.

ರ್ಯಾಪರ್ ಬಾದ್​ಶಾ ಇತ್ತೀಚೆಗಷ್ಟೆ ‘ವೆಲ್ವೆಟ್ ಫ್ಲೋ’ ಹೆಸರಿನ ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ಹಾಡಿನಲ್ಲಿ ಚರ್ಚ್, ಬೈಬಲ್ ಪದಗಳ ಬಳಕೆ ಮಾಡಿರುವುದು ಕೆಲ ಕ್ರಿಶ್ಚಿಯನ್ನರನ್ನು ಕೆರಳಿಸಿದಂತಿದೆ. ಇದೇ ಕಾರಣಕ್ಕೆ ಇಮಾನ್ಯುಯೆಲ್ ಮಸಿಹ್ ಎಂಬುವರು ಪಂಜಾಬ್​​ನಲ್ಲಿ ದೂರು ದಾಖಲಿಸಿದ್ದಾರೆ. ಬಾದ್​ಶಾ ತಮ್ಮ ಹಾಡಿನ ಮೂಲಕ ಕ್ರಿಶ್ಚಿಯನ್ನರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಆರೋಪ ಮಾಡಿದ್ದಾರೆ.

ಪಂಜಾಬ್​ನ ಗುರುದಾಸ್​ಪುರದ ಕಿಲಾ ಲಾಲ್ ಸಿಂಗ್ ಪೊಲೀಸ್ ಠಾಣೆಯಲ್ಲಿ ಬಾದ್​ಶಾ ವಿರುದ್ಧ ದೂರು ದಾಖಲಾಗಿದೆ. ಮಾತ್ರವಲ್ಲದೆ ಬಾಟ್ಲಾ ಹೌಸ್ ಬಳಿ ಕ್ರಿಶ್ಚಿಯನ್ ಸಮುದಾಯದವರು ಬಾದ್​ಶಾ ವಿರುದ್ಧ ಪ್ರತಿಭಟನೆ ಸಹ ಮಾಡಿದ್ದು, ಹಾಡನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಬಾಲಿವುಡ್ ಸಿನಿಮಾಕ್ಕಾಗಿ ಸಂಭಾವನೆ ತಗ್ಗಿಸಿಕೊಂಡರಾ ನಟಿ ಶ್ರೀಲೀಲಾ

ಬಾದ್​ಶಾ ಅವರ ‘ವೆಲ್ವೆಟ್ ಫ್ಲೋ’ ಹಾಡು ಏಪ್ರಿಲ್ 11 ರಂದು ಬಿಡುಗಡೆ ಆಗಿದೆ. ಯೂಟ್ಯೂಬ್​ನಲ್ಲಿ ಬಿಡುಗಡೆ ಆದ ಈ ಹಾಡು ಸಖತ್ ಟ್ರೆಂಡಿಂಗ್ ಆಗುತ್ತಿದೆ. ಹಾಡು ಈಗಾಗಲೇ 86 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ. ‘ಮನೆ ಚರ್ಚ್​ನಂತೆ ಅನಿಸಲಿ, ಪಾಸ್​ಪೋರ್ಟ್ ಬೈಬಲ್ ರೀತಿ’ ಎಂಬ ಸಾಲು ಆ ಹಾಡಿನಲ್ಲಿದೆ. ಹಾಡಿನಲ್ಲಿ ತಮ್ಮ ಬಗ್ಗೆ ತಾವೇ ಹೇಳಿಕೊಂಡಂತಿದೆ ಬಾದ್​ಶಾ.

ರ್ಯಾಪರ್​ಗಳಾದ ಬಾದ್​ಶಾ ಮತ್ತು ಹನಿಸಿಂಗ್ ನಡುವೆ ವರ್ಷಗಳಿಂದಲೂ ದುಶ್ಮನಿ ಇದ್ದೇ ಇದೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹನಿ ಸಿಂಗ್, ಬಾದ್​ಶಾ ಅನ್ನು ಕ್ಲೈಂಟ್ ಎಂದು ಕರೆದಿದ್ದರು. ಅದಕ್ಕೆ ಹಾಡು ಮಾಡಿದ್ದ ಬಾದ್​ಶಾ ಮತ್ತು ರಫ್ತಾರ್, ‘ಓಯೋ ಆಂಟಿ ನಮ್ಮನ್ನು ಕ್ಲೈಂಟ್ ಎಂದು ಕರೆಯುತ್ತಾಳೆ’ ಎಂದಿದ್ದರು. ಈಗ ಬಾದ್​ ಶಾ ಮಾಡಿರುವ ‘ವೆಲ್ವೆಟ್ ಫ್ಲೋ’ ಹಾಡಿನಲ್ಲಿಯೂ ಸಹ ವಿರೋಧಿಗಳನ್ನು ಗುರಿ ಮಾಡಿಕೊಂಡೇ ಹಾಡು ಮಾಡಿದ್ದಾರೆ. ಅದರಲ್ಲಿ ಚರ್ಚ್ ಮತ್ತು ಬೈಬಲ್ ಪದಗಳನ್ನು ಬಳಸಿರುವುದು ಕ್ರಿಶ್ಚಿಯನ್ನರ ಅಸಮಾಧಾನಕ್ಕೆ ಕಾರಣವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ