‘ರಾಮಾಯಣ’ ಸಿನಿಮಾ, ರಣ್​ಬೀರ್ ಕಪೂರ್ ಅಲ್ಲ, ಯಶ್ ‘ನಾಯಕ’

ರಣ್​ಬೀರ್ ಕಪೂರ್ ನಾಯಕನಾಗಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಇದೇ ಸಿನಿಮಾದಲ್ಲಿ ನಟಿಸುತ್ತಿರುವ ನಟರೊಬ್ಬರು ಸಿನಿಮಾ ಬಗ್ಗೆ ದೊಡ್ಡ ಅಪ್​ಡೇಟ್​ ಬಿಟ್ಟುಕೊಟ್ಟಿದ್ದಾರೆ. ಸಿನಿಮಾದಲ್ಲಿ ನಾಯಕ ರಣ್​ಬೀರ್ ಅಲ್ಲ ಬದಲಿಗೆ ಯಶ್ ಅಂತೆ!

‘ರಾಮಾಯಣ’ ಸಿನಿಮಾ, ರಣ್​ಬೀರ್ ಕಪೂರ್ ಅಲ್ಲ, ಯಶ್ ‘ನಾಯಕ’
Follow us
|

Updated on: Jul 16, 2024 | 11:29 AM

‘ರಾಮಾಯಣ’ ಕುರಿತ ದೊಡ್ಡ ಪ್ರಾಜೆಕ್ಟ್ ಒಂದು ಹಿಂದಿಯಲ್ಲಿ ಈಗಾಗಲೇ ಸೆಟ್ಟೇರಿದೆ. ಶ್ರೀರಾಮನ ಪಾತ್ರದಲ್ಲಿ ರಣ್​ಬೀರ್ ಕಪೂರ್ ನಟಿಸುತ್ತಿದ್ದರೆ ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ರಣ್​ಬೀರ್ ಹಾಗೂ ಸಾಯಿ ಪಲ್ಲವಿ ರಾಮ-ಸೀತೆಯ ಪಾತ್ರದಲ್ಲಿರುವ ಕೆಲವು ಚಿತ್ರಗಳು ಸಹ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಈ ಸಿನಿಮಾದ ರಾವಣನ ಪಾತ್ರದಲ್ಲಿ ಯಶ್ ನಟಿಸಲಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಈವರೆಗೆ ಹೊರಬಿದ್ದಿರಲಿಲ್ಲ. ಆದರೆ ಇದೀಗ ಸುದ್ದಿ ಅಧಿಕೃತವಾಗಿದೆ. ಮಾತ್ರವಲ್ಲ ಈ ಸಿನಿಮಾದಲ್ಲಿ ಯಶ್​ ಅವರದ್ದೇ ಪ್ರಧಾನ ಪಾತ್ರ ಎನ್ನಲಾಗಿದೆ.

‘ರಾಮಾಯಣ’ ಸಿನಿಮಾದಲ್ಲಿ ನಟಿಸುತ್ತಿರುವ ನಟ ಆದಿತ್ಯ ದೇಶ್​ಮುಖ್ ಸಂದರ್ಶನವೊಂದರಲ್ಲಿ, ‘ರಾಮಾಯಣ’ ಸಿನಿಮಾದ ಬಗ್ಗೆ ಮಾತನಾಡಿದ್ದು, ಸಿನಿಮಾದ ರಾವಣನ ಪಾತ್ರದಲ್ಲಿ ಯಶ್ ನಟಿಸುತ್ತಿರುವುದಾಗಿ ಖಾತ್ರಿಪಡಿಸಿದ್ದಾರೆ. ಮಾತ್ರವಲ್ಲದೆ ಈಗ ನಿರ್ಮಾಣವಾಗುತ್ತಿರುವ ‘ರಾಮಾಯಣ’ ಸಿನಿಮಾ ರಾಮನ ದೃಷ್ಟಿಕೋನದಿಂದ ಅಲ್ಲ ಬದಲಿಗೆ ರಾವಣನ ದೃಷ್ಟಿಕೋನದಲ್ಲಿ ಕತೆ ನಿರೂಪಣೆಯಾಗಲಿದೆ’ ಎಂದಿದ್ದಾರೆ.

ಇದನ್ನೂ ಓದಿ:ಯಶ್​ ಜತೆ ನಿರ್ದೇಶಕ ಅಟ್ಲಿ ಮಾತುಕತೆ ವಿಡಿಯೋ ವೈರಲ್​; ನೆಟ್ಟಿಗರದ್ದು ಬಗೆಬಗೆ ಲೆಕ್ಕಾಚಾರ

ಈಗ ನಿರ್ಮಾಣವಾಗುತ್ತಿರುವ ರಾಮಾಯಣದಲ್ಲಿ ರಾವಣ ಕೇವಲ ‘ವಿಲನ್’ ಮಾತ್ರವಲ್ಲ ಇಡೀ ರಾಮಾಯಣವನ್ನೇ ರಾವಣನ ದೃಷ್ಟಿಕೋನದಲ್ಲಿ ನೋಡುವ ಪ್ರಯತ್ನ ಮಾಡಲಾಗುತ್ತಿದೆ ಎಂಬುದು ಖಾತ್ರಿಯಾಗಿದೆ. ಅಲ್ಲಿಗೆ ಈ ರಾಮಾಯಣದಲ್ಲಿ ರಾವಣ ‘ನಾಯಕ’ ಆಗಲಿದ್ದಾನೆ ಎಂದು ನಿರೀಕ್ಷಿಸಬಹುದು. ರಾವಣನ ಪಾತ್ರಕ್ಕೆ ‘ಸ್ಕೋಪ್’ ಇರುವ ಕಾರಣಕ್ಕೆ ಯಶ್ ಅಂಥಹಾ ಸ್ಟಾರ್ ಅನ್ನು ಆ ಪಾತ್ರಕ್ಕೆ ನಿರ್ದೇಶಕ ಆರಿಸಿದ್ದಾರೆ ಎಂಬ ಬಗ್ಗೆ ಮೊದಲಿನಿಂದಲೂ ಚರ್ಚೆ ಇತ್ತು. ಈಗ ಅದು ನಿಜವಾಗಿದೆ.

‘ರಾಮಾಯಣ’ ಸಿನಿಮಾವನ್ನು ನಿತೇಶ್ ತಿವಾರಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಕ್ಕೆ ಮಧು ಮಂಟೇನಾ ಮತ್ತು ಅಲ್ಲು ಅರವಿಂದ್ ಬಂಡವಾಳ ಹೂಡುತ್ತಿದ್ದಾರೆ. ಮಾತ್ರವಲ್ಲದೆ ಈ ಸಿನಿಮಾಕ್ಕೆ ಯಶ್ ಸಹ ಬಂಡವಾಳ ಹೂಡಿದ್ದಾರೆ ಎನ್ನಲಾಗುತ್ತಿದೆ. ರಣ್​ಬೀರ್ ಕಪೂರ್, ಸಾಯಿ ಪಲ್ಲವಿ, ಯಶ್ ಜೊತೆಗೆ ಇನ್ನೂ ಕೆಲವು ಜನಪ್ರಿಯ ನಟರು ಸಿನಿಮಾದಲ್ಲಿ ನಟಿಸಲಿದ್ದಾರೆ. ಸಿನಿಮಾದ ಚಿತ್ರೀಕರಣ ಈಗಾಗಲೇ ಚಾಲ್ತಿಯಲ್ಲಿದ್ದು, ಸಿನಿಮಾ 2025 ರಲ್ಲಿ ತೆರೆಗೆ ಬರಲಿದೆ. ‘ರಾಮಾಯಣ’ ಸಿನಿಮಾದ ಜೊತೆಗೆ ಯಶ್ ತಮ್ಮ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದಲ್ಲಿಯೂ ಬ್ಯುಸಿಯಾಗಿದ್ದಾರೆ. ಆ ಸಿನಿಮಾ ಸಹ 2025 ರಲ್ಲಿಯೇ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
‘ಪ್ರಾಮಾಣಿಕತೆ ಇಲ್ಲದವರಿಗೆ ಪ್ರಾಯಶ್ಚಿತ ಇದ್ದೇ ಇರುತ್ತೆ’; ಸುದೀಪ್
‘ಪ್ರಾಮಾಣಿಕತೆ ಇಲ್ಲದವರಿಗೆ ಪ್ರಾಯಶ್ಚಿತ ಇದ್ದೇ ಇರುತ್ತೆ’; ಸುದೀಪ್