AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಸಿನಿಮಾ, ರಣ್​ಬೀರ್ ಕಪೂರ್ ಅಲ್ಲ, ಯಶ್ ‘ನಾಯಕ’

ರಣ್​ಬೀರ್ ಕಪೂರ್ ನಾಯಕನಾಗಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಇದೇ ಸಿನಿಮಾದಲ್ಲಿ ನಟಿಸುತ್ತಿರುವ ನಟರೊಬ್ಬರು ಸಿನಿಮಾ ಬಗ್ಗೆ ದೊಡ್ಡ ಅಪ್​ಡೇಟ್​ ಬಿಟ್ಟುಕೊಟ್ಟಿದ್ದಾರೆ. ಸಿನಿಮಾದಲ್ಲಿ ನಾಯಕ ರಣ್​ಬೀರ್ ಅಲ್ಲ ಬದಲಿಗೆ ಯಶ್ ಅಂತೆ!

‘ರಾಮಾಯಣ’ ಸಿನಿಮಾ, ರಣ್​ಬೀರ್ ಕಪೂರ್ ಅಲ್ಲ, ಯಶ್ ‘ನಾಯಕ’
ಮಂಜುನಾಥ ಸಿ.
|

Updated on: Jul 16, 2024 | 11:29 AM

Share

‘ರಾಮಾಯಣ’ ಕುರಿತ ದೊಡ್ಡ ಪ್ರಾಜೆಕ್ಟ್ ಒಂದು ಹಿಂದಿಯಲ್ಲಿ ಈಗಾಗಲೇ ಸೆಟ್ಟೇರಿದೆ. ಶ್ರೀರಾಮನ ಪಾತ್ರದಲ್ಲಿ ರಣ್​ಬೀರ್ ಕಪೂರ್ ನಟಿಸುತ್ತಿದ್ದರೆ ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ರಣ್​ಬೀರ್ ಹಾಗೂ ಸಾಯಿ ಪಲ್ಲವಿ ರಾಮ-ಸೀತೆಯ ಪಾತ್ರದಲ್ಲಿರುವ ಕೆಲವು ಚಿತ್ರಗಳು ಸಹ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಈ ಸಿನಿಮಾದ ರಾವಣನ ಪಾತ್ರದಲ್ಲಿ ಯಶ್ ನಟಿಸಲಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಈವರೆಗೆ ಹೊರಬಿದ್ದಿರಲಿಲ್ಲ. ಆದರೆ ಇದೀಗ ಸುದ್ದಿ ಅಧಿಕೃತವಾಗಿದೆ. ಮಾತ್ರವಲ್ಲ ಈ ಸಿನಿಮಾದಲ್ಲಿ ಯಶ್​ ಅವರದ್ದೇ ಪ್ರಧಾನ ಪಾತ್ರ ಎನ್ನಲಾಗಿದೆ.

‘ರಾಮಾಯಣ’ ಸಿನಿಮಾದಲ್ಲಿ ನಟಿಸುತ್ತಿರುವ ನಟ ಆದಿತ್ಯ ದೇಶ್​ಮುಖ್ ಸಂದರ್ಶನವೊಂದರಲ್ಲಿ, ‘ರಾಮಾಯಣ’ ಸಿನಿಮಾದ ಬಗ್ಗೆ ಮಾತನಾಡಿದ್ದು, ಸಿನಿಮಾದ ರಾವಣನ ಪಾತ್ರದಲ್ಲಿ ಯಶ್ ನಟಿಸುತ್ತಿರುವುದಾಗಿ ಖಾತ್ರಿಪಡಿಸಿದ್ದಾರೆ. ಮಾತ್ರವಲ್ಲದೆ ಈಗ ನಿರ್ಮಾಣವಾಗುತ್ತಿರುವ ‘ರಾಮಾಯಣ’ ಸಿನಿಮಾ ರಾಮನ ದೃಷ್ಟಿಕೋನದಿಂದ ಅಲ್ಲ ಬದಲಿಗೆ ರಾವಣನ ದೃಷ್ಟಿಕೋನದಲ್ಲಿ ಕತೆ ನಿರೂಪಣೆಯಾಗಲಿದೆ’ ಎಂದಿದ್ದಾರೆ.

ಇದನ್ನೂ ಓದಿ:ಯಶ್​ ಜತೆ ನಿರ್ದೇಶಕ ಅಟ್ಲಿ ಮಾತುಕತೆ ವಿಡಿಯೋ ವೈರಲ್​; ನೆಟ್ಟಿಗರದ್ದು ಬಗೆಬಗೆ ಲೆಕ್ಕಾಚಾರ

ಈಗ ನಿರ್ಮಾಣವಾಗುತ್ತಿರುವ ರಾಮಾಯಣದಲ್ಲಿ ರಾವಣ ಕೇವಲ ‘ವಿಲನ್’ ಮಾತ್ರವಲ್ಲ ಇಡೀ ರಾಮಾಯಣವನ್ನೇ ರಾವಣನ ದೃಷ್ಟಿಕೋನದಲ್ಲಿ ನೋಡುವ ಪ್ರಯತ್ನ ಮಾಡಲಾಗುತ್ತಿದೆ ಎಂಬುದು ಖಾತ್ರಿಯಾಗಿದೆ. ಅಲ್ಲಿಗೆ ಈ ರಾಮಾಯಣದಲ್ಲಿ ರಾವಣ ‘ನಾಯಕ’ ಆಗಲಿದ್ದಾನೆ ಎಂದು ನಿರೀಕ್ಷಿಸಬಹುದು. ರಾವಣನ ಪಾತ್ರಕ್ಕೆ ‘ಸ್ಕೋಪ್’ ಇರುವ ಕಾರಣಕ್ಕೆ ಯಶ್ ಅಂಥಹಾ ಸ್ಟಾರ್ ಅನ್ನು ಆ ಪಾತ್ರಕ್ಕೆ ನಿರ್ದೇಶಕ ಆರಿಸಿದ್ದಾರೆ ಎಂಬ ಬಗ್ಗೆ ಮೊದಲಿನಿಂದಲೂ ಚರ್ಚೆ ಇತ್ತು. ಈಗ ಅದು ನಿಜವಾಗಿದೆ.

‘ರಾಮಾಯಣ’ ಸಿನಿಮಾವನ್ನು ನಿತೇಶ್ ತಿವಾರಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಕ್ಕೆ ಮಧು ಮಂಟೇನಾ ಮತ್ತು ಅಲ್ಲು ಅರವಿಂದ್ ಬಂಡವಾಳ ಹೂಡುತ್ತಿದ್ದಾರೆ. ಮಾತ್ರವಲ್ಲದೆ ಈ ಸಿನಿಮಾಕ್ಕೆ ಯಶ್ ಸಹ ಬಂಡವಾಳ ಹೂಡಿದ್ದಾರೆ ಎನ್ನಲಾಗುತ್ತಿದೆ. ರಣ್​ಬೀರ್ ಕಪೂರ್, ಸಾಯಿ ಪಲ್ಲವಿ, ಯಶ್ ಜೊತೆಗೆ ಇನ್ನೂ ಕೆಲವು ಜನಪ್ರಿಯ ನಟರು ಸಿನಿಮಾದಲ್ಲಿ ನಟಿಸಲಿದ್ದಾರೆ. ಸಿನಿಮಾದ ಚಿತ್ರೀಕರಣ ಈಗಾಗಲೇ ಚಾಲ್ತಿಯಲ್ಲಿದ್ದು, ಸಿನಿಮಾ 2025 ರಲ್ಲಿ ತೆರೆಗೆ ಬರಲಿದೆ. ‘ರಾಮಾಯಣ’ ಸಿನಿಮಾದ ಜೊತೆಗೆ ಯಶ್ ತಮ್ಮ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದಲ್ಲಿಯೂ ಬ್ಯುಸಿಯಾಗಿದ್ದಾರೆ. ಆ ಸಿನಿಮಾ ಸಹ 2025 ರಲ್ಲಿಯೇ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ