AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ಕೇರಳದಲ್ಲಿ ವಿರೋಧ, ಬಿಡುಗಡೆ ಆಗದಂತೆ ತಡೆಯಲು ಯತ್ನ

The Kerala Story: ಕೇರಳದಲ್ಲಿ ನಡೆದಿದೆ ಎನ್ನಲಾದ ಮತಾಂತರದ ಕತೆಯನ್ನು ಒಳಗೊಂಡ ದಿ ಕೇರಳ ಸ್ಟೋರಿ ಸಿನಿಮಾದ ಬಿಡುಗಡೆಗೆ ಅವಕಾಶ ಕೊಡಬಾರದೆಂದು ಕೇರಳದ ಹಲವು ರಾಜಕೀಯ ಪಕ್ಷಗಳು ಸರ್ಕಾರಕ್ಕೆ ಮನವಿ ಮಾಡಿದೆ.

'ದಿ ಕೇರಳ ಸ್ಟೋರಿ' ಸಿನಿಮಾಕ್ಕೆ ಕೇರಳದಲ್ಲಿ ವಿರೋಧ, ಬಿಡುಗಡೆ ಆಗದಂತೆ ತಡೆಯಲು ಯತ್ನ
ಕೇರಳ ಸ್ಟೋರಿ
ಮಂಜುನಾಥ ಸಿ.
|

Updated on: Apr 29, 2023 | 5:56 PM

Share

ದಿ ಕೇರಳ ಸ್ಟೋರಿ‘ (The Kerala Story) ಸಿನಿಮಾದ ಟ್ರೈಲರ್ ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಅದರ ಬೆನ್ನಲ್ಲೆ ಸಿನಿಮಾದ ವಿರುದ್ಧ ಕೇರಳದಲ್ಲಿ ವಿರೋಧದ ದನಿ ಎದ್ದಿದೆ. ಆಡಳಿತಾರೂಢ ಸಿಪಿಐಎಂ ಸೇರಿದಂತೆ ಕಾಂಗ್ರೆಸ್ (Congress)​ ಇನ್ನಿತರೆ ಪಕ್ಷಗಳು ಸಿನಿಮಾದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಸಿನಿಮಾವು ಕೇರಳದಲ್ಲಿ ಬಿಡುಗಡೆ ಆಗದಂತೆ ತಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಿವೆ. ಸರ್ಕಾರವು ಸಹ ಸಿನಿಮಾದ ಬಿಡುಗಡೆ ತಡೆಯಲು ಕಾನೂನು ಕ್ರಮಗಳನ್ನು ಶೋಧಿಸುತ್ತಿರುವುದಾಗಿ ಹೇಳಿದೆ.

ದಿ ಕೇರಳ ಸ್ಟೋರಿ ಸಿನಿಮಾವು ಕೇರಳದಲ್ಲಿ ನಡೆಯುತ್ತಿರುವ ಮತಾಂತರ ಹಾಗೂ ಯುವತಿಯರ ಮಾನವ ಕಳ್ಳಸಾಗಣೆ ವಿಷಯದ ಮೇಲೆ ಬೆಳಕು ಚೆಲ್ಲಲಿದೆ ಎಂದು ಚಿತ್ರತಂಡ ಹೇಳಿದೆ. ಹೇಗೆ ಕೇರಳದ ಹಿಂದು, ಕ್ರಿಶ್ಚಿಯನ್ ಯುವತಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಅವರನ್ನು ಇಸ್ಲಾಂಗೆ ಮತಾಂತರ ಮಾಡಿಸಿ ಬಳಿಕ ತಾಲಿಬಾನಿಗಳನ್ನಾಗಿ ಬದಲಾಯಿಸುತ್ತಾರೆ ಎಂಬ ಸಿನಿಮಾ ಮಾಡಲಾಗಿದೆ ಎಂದು ನಿರ್ಮಾಪಕ ವಿಫುಲ್ ಶಾ ಈ ಹಿಂದೆ ಹೇಳಿದ್ದರು. ಟ್ರೈಲರ್​ನಲ್ಲಿಯೂ, ಕೇರಳದಲ್ಲಿ 32,000 ಹಿಂದು, ಕ್ರಿಶ್ಚಿಯನ್ ಯುವತಿಯರು ಮಹಿಳೆಯರು ಕಾಣೆಯಾಗಿದ್ದಾರೆ. ಅವರನ್ನು ಲವ್ ಜಿಹಾದಿಗೆ ಬಳಸಿಕೊಳ್ಳಲಾಗಿದೆ, ಮತಾಂತರ ಮಾಡಲಾಗಿದೆ, ಮಾನವ ಕಳ್ಳಸಾಗಣೆ ಮಾಡಿ ಭಯೋತ್ಪಾದನಾ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಸಿನಿಮಾದ ಟ್ರೈಲರ್​ನಲ್ಲಿಯೂ ಹೇಳಲಾಗಿದೆ.

ಕೇರಳವನ್ನು ಕರಾಳವಾಗಿ ತೋರಿಸುವ ‘ದಿ ಕೇರಳ ಸ್ಟೋರಿ’ ಸಿನಿಮಾದ ವಿರುದ್ಧ ಆಡಳಿತಾರೂಢ ಸಿಪಿಐಎಂ ಹಾಗೂ ವಿಪಕ್ಷಗಳಾದ ಕಾಂಗ್ರೆಸ್ ಹಾಗೂ ಇನ್ನಿತರೆ ಕೆಲವು ಪಕ್ಷಗಳು ಮುಗಿಬಿದ್ದಿವೆ. ಕಾಂಗ್ರೆಸ್, ಕೇರಳ ಕಾಂಗ್ರೆಸ್, ಡಿವೈಎಫ್​ಐ, ಸಿಪಿಐಎಂ ಯುವ ಸಂಘ ಇನ್ನಿತರೆ ರಾಜಕೀಯ ಪಕ್ಷಗಳು ಸಂಘಟನೆಗಳು ದಿ ಕೇರಳ ಸ್ಟೋರಿ ಸಿನಿಮಾದ ಬಿಡುಗಡೆಯನ್ನು ತಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಿವೆ. ”ಸಂಘ ಪರಿವಾರವು ಪ್ರಬಲ ಮಾಧ್ಯಮವೊಂದನ್ನು ಬಳಸಿಕೊಂಡು ಸುಳ್ಳುಗಳ ಮೂಲಕ ಕೇರಳಕ್ಕೆ ಅಪಮಾನ ಮಾಡುವ ಕಾರ್ಯವನ್ನು ಮಾಡುತ್ತಿದೆ” ಎಂದು ಸಿಪಿಐಎಂ ಯುವ ಸಂಘ ಆರೋಪಿಸಿದೆ.

ಶುಕ್ರವಾರ, ಕಾಂಗ್ರೆಸ್ ಪಕ್ಷವು ಪ್ರತ್ಯೇಕವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ”ಬರೀ ಸುಳ್ಳುಗಳಿಂದ ತುಂಬಿದ ಹಾಗೂ ಮುಸ್ಲಿಂ ಸಮುದಾಯವನ್ನು ಕೆಟ್ಟದಾಗಿ ಬಿಂಬಿಸಲು ಮಾಡಿರುವ ಪ್ರಯತ್ನದ ಈ ಸಿನಿಮಾದ ಪ್ರದರ್ಶನವನ್ನು ತಡೆಹಿಡಿಯಬೇಕು” ಎಂದು ಒತ್ತಾಯಿಸಿದೆ. ”ಈ ಸಿನಿಮಾ ಸುಳ್ಳುಗಳ ಕಂತೆ, 32,000 ಮಹಿಳೆಯರು ಕಾಣೆಯಾಗಿದ್ದಾರೆ ಎಂದು ಹೇಳಿದ್ದಾರೆ, ಇಂತಹಾ ಹಲವು ಸುಳ್ಳುಗಳು ಈ ಸಿನಿಮಾದಲ್ಲಿವೆ. ನಮ್ಮ ರಾಜ್ಯದ ಘನತೆ ಹಾಳು ಮಾಡುವ ಹಾಗೂ ಒಂದು ಸಮುದಾಯದ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವ ಪ್ರಯತ್ನ ಈ ಸಿನಿಮಾದಲ್ಲಿದೆ. ಇದರ ಹಿಂದೆ ಸಂಘ ಪರಿವಾರ ಇದೆ” ಎಂದು ಕೇರಳ ವಿಪಕ್ಷ ನಾಯಕ ವಿಡಿ ಸತೀಸನ್ ಹೇಳಿದ್ದಾರೆ.

ದಿ ಕೇರಳ ಸ್ಟೋರಿ ಸಿನಿಮಾವನ್ನು ಸುದಿಪ್ತೊ ಸೇನ್ ನಿರ್ದೇಶನ ಮಾಡಿದ್ದು, ನಿರ್ಮಾಣ ಮಾಡಿರುವುದು ವಿಫುಲ್ ಶಾ. ಸಿನಿಮಾದಲ್ಲ ಅದಾ ಶರ್ಮಾ, ಯೋಗಿತಾ ಬಿಹಾನಿ, ಸೋನಿಯಾ ಬಲಾನಿ, ಸಿದಿ ಇದ್ನಾನಿ ನಟಿಸಿದ್ದಾರೆ. ಸಿನಿಮಾವು ಮೇ 5 ರಂದು ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ