AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: 3ನೇ ವೀಕೆಂಡ್​ನಲ್ಲಿ ಮತ್ತೆ ಹೆಚ್ಚಾಯಿತು ‘ದಿ ಕೇರಳ ಸ್ಟೋರಿ’ ಕಮಾಯಿ; ಟೋಟಲ್​ ಕಲೆಕ್ಷನ್​ ಎಷ್ಟು?

The Kerala Story Box Office Collection: ನಟಿ ಅದಾ ಶರ್ಮಾ ಅವರಿಗೆ ‘ದಿ ಕೇರಳ ಸ್ಟೋರಿ’ ಸಿನಿಮಾದಿಂದ ದೊಡ್ಡ ಗೆಲುವು ಸಿಕ್ಕಿದೆ. ನಿರ್ದೇಶಕ ಸುದೀಪ್ತೋ ಸೇನ್​ ಅವರ ಖ್ಯಾತಿ ಕೂಡ ಹೆಚ್ಚಿದೆ.

The Kerala Story: 3ನೇ ವೀಕೆಂಡ್​ನಲ್ಲಿ ಮತ್ತೆ ಹೆಚ್ಚಾಯಿತು ‘ದಿ ಕೇರಳ ಸ್ಟೋರಿ’ ಕಮಾಯಿ; ಟೋಟಲ್​ ಕಲೆಕ್ಷನ್​ ಎಷ್ಟು?
‘ದಿ ಕೇರಳ ಸ್ಟೋರಿ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on:May 21, 2023 | 1:23 PM

Share

ಸತತ ಮೂರನೇ ವೀಕೆಂಡ್​ನಲ್ಲಿ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಅಬ್ಬರಿಸುತ್ತಿದೆ. ಸುದೀಪ್ತೋ ಸೇನ್​ ನಿರ್ದೇಶನ ಮಾಡಿರುವ ಈ ಸಿನಿಮಾ 200 ಕೋಟಿ ರೂಪಾಯಿ ಗಡಿ ಮುಟ್ಟಲು ಕೆಲವೇ ಕೋಟಿ ರೂಪಾಯಿ ಬಾಕಿ ಇದೆ. ಒಟ್ಟು 17 ದಿನಗಳ ಕಾಲ ಈ ಚಿತ್ರ ಅತ್ಯುತ್ತಮವಾಗಿ ಪ್ರದರ್ಶನ ಕಂಡಿದೆ. ಪರಿಣಾಮವಾಗಿ ‘ದಿ ಕೇರಳ ಸ್ಟೋರಿ’ ಸಿನಿಮಾ ದ್ವಿಶಕತ ಬಾರಿಸಲು ಸಜ್ಜಾಗಿದೆ. 16 ದಿನಗಳ ಭರ್ಜರಿ ಪ್ರದರ್ಶನದ ಬಳಿಕ ಈ ಸಿನಿಮಾದ ಒಟ್ಟು ಕಲೆಕ್ಷನ್​ 187.47 ಕೋಟಿ ರೂಪಾಯಿ ಆಗಿದೆ. ನಟಿ ಅದಾ ಶರ್ಮಾ (Adah Sharma) ಅವರಿಗೆ ಈ ಸಿನಿಮಾದಿಂದ ದೊಡ್ಡ ಗೆಲುವು ಸಿಕ್ಕಿದೆ. ನಿರ್ದೇಶಕ ಸುದೀಪ್ತೋ ಸೇನ್​ (Sudipto Sen) ಅವರ ಖ್ಯಾತಿ ಕೂಡ ಹೆಚ್ಚಿದೆ. ಸಿನಿಮಾದಲ್ಲಿ ನಟಿಸಿದ ಎಲ್ಲ ಕಲಾವಿದರಿಗೂ ಬೇಡಿಕೆ ಬಂದಿದೆ.

ಮೊದಲ ವೀಕೆಂಡ್​ನಲ್ಲಿ ಅಬ್ಬರಿಸಿದ ಸಿನಿಮಾ 2ನೇ ವೀಕೆಂಡ್​ನಲ್ಲೂ ಉತ್ತಮ ಫಾರ್ಮ್​ ಕಾಯ್ದುಕೊಂಡರೆ ನಿರ್ಮಾಪಕರಿಗೆ ಖುಷಿ ಆಗುತ್ತದೆ. ‘ದಿ ಕೇರಳ ಸ್ಟೋರಿ’ ಸಿನಿಮಾ 3ನೇ ವೀಕೆಂಡ್​ನಲ್ಲೂ ಹವಾ ಮಾಡುತ್ತಿರುವುದು ಚಿತ್ರತಂಡದ ಸಂತಸಕ್ಕೆ ಕಾರಣ ಆಗಿದೆ. ಈ ಸಿನಿಮಾಗೆ ಪ್ರೇಕ್ಷಕರಿಂದ ಬಾಯಿ ಮಾತಿನ ಪ್ರಚಾರ ಚೆನ್ನಾಗಿ ಸಿಕ್ಕಿದೆ. ಇನ್ನೂ ಕೆಲವು ದಿನಗಳ ಕಾಲ ಚಿತ್ರಮಂದಿರದಲ್ಲಿ ಈ ಸಿನಿಮಾ ಪ್ರದರ್ಶನ ಕಾಣಲಿದೆ.

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

ಇದನ್ನೂ ಓದಿ: ಅಜ್ಜಿಗೆ ‘ದಿ ಕೇರಳ ಸ್ಟೋರಿ’ ಸಿನಿಮಾ ತೋರಿಸಲು ಭಯಬಿದ್ದ ನಟಿ ಅದಾ ಶರ್ಮಾ; ನಂತರ ಏನಾಯ್ತು?

ಕಾರಣಾಂತರಗಳಿಂದ ಈ ಸಿನಿಮಾ ವಿವಾದ ಸೃಷ್ಟಿಸಿತ್ತು. ಕಾಂಟ್ರವರ್ಸಿ ಮಾಡಿಕೊಂಡ ಸಿನಿಮಾದ ಬಗ್ಗೆ ಪ್ರೇಕ್ಷಕರು ಆಸಕ್ತಿ ತೋರಿಸುವುದು ಸಹಜ. ‘ದಿ ಕೇರಳ ಸ್ಟೋರಿ’ ವಿಚಾರದಲ್ಲೂ ಹಾಗೆಯೇ ಆಯಿತು. ಟೀಸರ್​ ರಿಲೀಸ್​ ಆದಾಗಲೇ ಈ ಚಿತ್ರಕ್ಕೆ ಕೆಲವರಿಂದ ಆಕ್ಷೇಪ ವ್ಯಕ್ತವಾಗಿತ್ತು. ಸಿನಿಮಾ ಬಿಡುಗಡೆ ಆದಾಗ ವಿವಾದ​ ಜೋರಾಯಿತು. ಚಿತ್ರಕ್ಕೆ ಪ್ರಚಾರ ಸಿಗಲು ಇದೆಲ್ಲದೂ ಕಾರಣ ಆಯಿತು.

‘ದಿ ಕೇರಳ ಸ್ಟೋರಿ’ ಚಿತ್ರದ ಕಲೆಕ್ಷನ್​ ರಿಪೋರ್ಟ್​:

1ನೇ ದಿನ: 8.03 ಕೋಟಿ ರೂ.

2ನೇ ದಿನ: 11.22 ಕೋಟಿ ರೂ.

3ನೇ ದಿನ: 16.40 ಕೋಟಿ ರೂ.

4ನೇ ದಿನ: 10.07 ಕೋಟಿ ರೂ.

5ನೇ ದಿನ: 11.14 ಕೋಟಿ ರೂ.

6ನೇ ದಿನ: 12 ಕೋಟಿ ರೂ.

7ನೇ ದಿನ: 12.50 ಕೋಟಿ ರೂ.

8ನೇ ದಿನ: 12.23 ಕೋಟಿ ರೂ.

9ನೇ ದಿನ: 19.50 ಕೋಟಿ ರೂ.

10ನೇ ದಿನ: 23.75 ಕೋಟಿ ರೂ.

11ನೇ ದಿನ: 10.30 ಕೋಟಿ ರೂ.

12ನೇ ದಿನ: 9.65 ಕೋಟಿ ರೂ.

13ನೇ ದಿನ: 8.03 ಕೋಟಿ ರೂ.

14ನೇ ದಿನ: 7 ಕೋಟಿ ರೂ.

15ನೇ ದಿನ: 6.60 ಕೋಟಿ ರೂ.

16ನೇ ದಿನ: 9.15 ಕೋಟಿ ರೂ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:56 pm, Sun, 21 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್