AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: 3ನೇ ವೀಕೆಂಡ್​ನಲ್ಲಿ ಮತ್ತೆ ಹೆಚ್ಚಾಯಿತು ‘ದಿ ಕೇರಳ ಸ್ಟೋರಿ’ ಕಮಾಯಿ; ಟೋಟಲ್​ ಕಲೆಕ್ಷನ್​ ಎಷ್ಟು?

The Kerala Story Box Office Collection: ನಟಿ ಅದಾ ಶರ್ಮಾ ಅವರಿಗೆ ‘ದಿ ಕೇರಳ ಸ್ಟೋರಿ’ ಸಿನಿಮಾದಿಂದ ದೊಡ್ಡ ಗೆಲುವು ಸಿಕ್ಕಿದೆ. ನಿರ್ದೇಶಕ ಸುದೀಪ್ತೋ ಸೇನ್​ ಅವರ ಖ್ಯಾತಿ ಕೂಡ ಹೆಚ್ಚಿದೆ.

The Kerala Story: 3ನೇ ವೀಕೆಂಡ್​ನಲ್ಲಿ ಮತ್ತೆ ಹೆಚ್ಚಾಯಿತು ‘ದಿ ಕೇರಳ ಸ್ಟೋರಿ’ ಕಮಾಯಿ; ಟೋಟಲ್​ ಕಲೆಕ್ಷನ್​ ಎಷ್ಟು?
‘ದಿ ಕೇರಳ ಸ್ಟೋರಿ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on:May 21, 2023 | 1:23 PM

Share

ಸತತ ಮೂರನೇ ವೀಕೆಂಡ್​ನಲ್ಲಿ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಅಬ್ಬರಿಸುತ್ತಿದೆ. ಸುದೀಪ್ತೋ ಸೇನ್​ ನಿರ್ದೇಶನ ಮಾಡಿರುವ ಈ ಸಿನಿಮಾ 200 ಕೋಟಿ ರೂಪಾಯಿ ಗಡಿ ಮುಟ್ಟಲು ಕೆಲವೇ ಕೋಟಿ ರೂಪಾಯಿ ಬಾಕಿ ಇದೆ. ಒಟ್ಟು 17 ದಿನಗಳ ಕಾಲ ಈ ಚಿತ್ರ ಅತ್ಯುತ್ತಮವಾಗಿ ಪ್ರದರ್ಶನ ಕಂಡಿದೆ. ಪರಿಣಾಮವಾಗಿ ‘ದಿ ಕೇರಳ ಸ್ಟೋರಿ’ ಸಿನಿಮಾ ದ್ವಿಶಕತ ಬಾರಿಸಲು ಸಜ್ಜಾಗಿದೆ. 16 ದಿನಗಳ ಭರ್ಜರಿ ಪ್ರದರ್ಶನದ ಬಳಿಕ ಈ ಸಿನಿಮಾದ ಒಟ್ಟು ಕಲೆಕ್ಷನ್​ 187.47 ಕೋಟಿ ರೂಪಾಯಿ ಆಗಿದೆ. ನಟಿ ಅದಾ ಶರ್ಮಾ (Adah Sharma) ಅವರಿಗೆ ಈ ಸಿನಿಮಾದಿಂದ ದೊಡ್ಡ ಗೆಲುವು ಸಿಕ್ಕಿದೆ. ನಿರ್ದೇಶಕ ಸುದೀಪ್ತೋ ಸೇನ್​ (Sudipto Sen) ಅವರ ಖ್ಯಾತಿ ಕೂಡ ಹೆಚ್ಚಿದೆ. ಸಿನಿಮಾದಲ್ಲಿ ನಟಿಸಿದ ಎಲ್ಲ ಕಲಾವಿದರಿಗೂ ಬೇಡಿಕೆ ಬಂದಿದೆ.

ಮೊದಲ ವೀಕೆಂಡ್​ನಲ್ಲಿ ಅಬ್ಬರಿಸಿದ ಸಿನಿಮಾ 2ನೇ ವೀಕೆಂಡ್​ನಲ್ಲೂ ಉತ್ತಮ ಫಾರ್ಮ್​ ಕಾಯ್ದುಕೊಂಡರೆ ನಿರ್ಮಾಪಕರಿಗೆ ಖುಷಿ ಆಗುತ್ತದೆ. ‘ದಿ ಕೇರಳ ಸ್ಟೋರಿ’ ಸಿನಿಮಾ 3ನೇ ವೀಕೆಂಡ್​ನಲ್ಲೂ ಹವಾ ಮಾಡುತ್ತಿರುವುದು ಚಿತ್ರತಂಡದ ಸಂತಸಕ್ಕೆ ಕಾರಣ ಆಗಿದೆ. ಈ ಸಿನಿಮಾಗೆ ಪ್ರೇಕ್ಷಕರಿಂದ ಬಾಯಿ ಮಾತಿನ ಪ್ರಚಾರ ಚೆನ್ನಾಗಿ ಸಿಕ್ಕಿದೆ. ಇನ್ನೂ ಕೆಲವು ದಿನಗಳ ಕಾಲ ಚಿತ್ರಮಂದಿರದಲ್ಲಿ ಈ ಸಿನಿಮಾ ಪ್ರದರ್ಶನ ಕಾಣಲಿದೆ.

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

ಇದನ್ನೂ ಓದಿ: ಅಜ್ಜಿಗೆ ‘ದಿ ಕೇರಳ ಸ್ಟೋರಿ’ ಸಿನಿಮಾ ತೋರಿಸಲು ಭಯಬಿದ್ದ ನಟಿ ಅದಾ ಶರ್ಮಾ; ನಂತರ ಏನಾಯ್ತು?

ಕಾರಣಾಂತರಗಳಿಂದ ಈ ಸಿನಿಮಾ ವಿವಾದ ಸೃಷ್ಟಿಸಿತ್ತು. ಕಾಂಟ್ರವರ್ಸಿ ಮಾಡಿಕೊಂಡ ಸಿನಿಮಾದ ಬಗ್ಗೆ ಪ್ರೇಕ್ಷಕರು ಆಸಕ್ತಿ ತೋರಿಸುವುದು ಸಹಜ. ‘ದಿ ಕೇರಳ ಸ್ಟೋರಿ’ ವಿಚಾರದಲ್ಲೂ ಹಾಗೆಯೇ ಆಯಿತು. ಟೀಸರ್​ ರಿಲೀಸ್​ ಆದಾಗಲೇ ಈ ಚಿತ್ರಕ್ಕೆ ಕೆಲವರಿಂದ ಆಕ್ಷೇಪ ವ್ಯಕ್ತವಾಗಿತ್ತು. ಸಿನಿಮಾ ಬಿಡುಗಡೆ ಆದಾಗ ವಿವಾದ​ ಜೋರಾಯಿತು. ಚಿತ್ರಕ್ಕೆ ಪ್ರಚಾರ ಸಿಗಲು ಇದೆಲ್ಲದೂ ಕಾರಣ ಆಯಿತು.

‘ದಿ ಕೇರಳ ಸ್ಟೋರಿ’ ಚಿತ್ರದ ಕಲೆಕ್ಷನ್​ ರಿಪೋರ್ಟ್​:

1ನೇ ದಿನ: 8.03 ಕೋಟಿ ರೂ.

2ನೇ ದಿನ: 11.22 ಕೋಟಿ ರೂ.

3ನೇ ದಿನ: 16.40 ಕೋಟಿ ರೂ.

4ನೇ ದಿನ: 10.07 ಕೋಟಿ ರೂ.

5ನೇ ದಿನ: 11.14 ಕೋಟಿ ರೂ.

6ನೇ ದಿನ: 12 ಕೋಟಿ ರೂ.

7ನೇ ದಿನ: 12.50 ಕೋಟಿ ರೂ.

8ನೇ ದಿನ: 12.23 ಕೋಟಿ ರೂ.

9ನೇ ದಿನ: 19.50 ಕೋಟಿ ರೂ.

10ನೇ ದಿನ: 23.75 ಕೋಟಿ ರೂ.

11ನೇ ದಿನ: 10.30 ಕೋಟಿ ರೂ.

12ನೇ ದಿನ: 9.65 ಕೋಟಿ ರೂ.

13ನೇ ದಿನ: 8.03 ಕೋಟಿ ರೂ.

14ನೇ ದಿನ: 7 ಕೋಟಿ ರೂ.

15ನೇ ದಿನ: 6.60 ಕೋಟಿ ರೂ.

16ನೇ ದಿನ: 9.15 ಕೋಟಿ ರೂ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:56 pm, Sun, 21 May 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?