AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮರ್ಶೆಯಲ್ಲಿ ಸೋತ ‘ಕೂಲಿ’ಗೆ ಮೊದಲ ಆಘಾತ ಕೊಟ್ಟ ಪ್ರೇಕ್ಷಕ

‘ಕೂಲಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಗಳಿಸಲು ವಿಫಲವಾಗಿದೆ. ಮೊದಲ ದಿನ ಭಾರಿ ಗಳಿಕೆ ಮಾಡಿದ್ದ ಚಿತ್ರ, ವಾರದ ದಿನಗಳಲ್ಲಿ ತೀವ್ರ ಕುಸಿತ ಕಂಡಿದೆ. ರಜನಿಕಾಂತ್, ಆಮೀರ್ ಖಾನ್, ಉಪೇಂದ್ರ ಮತ್ತು ರಚಿತಾ ರಾಮ್ ಅಭಿನಯದ ಈ ಚಿತ್ರದ ಗಳಿಕೆ ಕುಸಿತಕ್ಕೆ ನೆಗೆಟಿವ್ ವಿಮರ್ಶೆಗಳೂ ಕಾರಣ ಎನ್ನಲಾಗುತ್ತಿದೆ.

ವಿಮರ್ಶೆಯಲ್ಲಿ ಸೋತ ‘ಕೂಲಿ’ಗೆ ಮೊದಲ ಆಘಾತ ಕೊಟ್ಟ ಪ್ರೇಕ್ಷಕ
ರಜನಿಕಾಂತ್
ರಾಜೇಶ್ ದುಗ್ಗುಮನೆ
|

Updated on: Aug 20, 2025 | 6:55 AM

Share

ಸಿನಿಮಾ ಉತ್ತಮವಾಗಿದ್ದರೆ ಅದು ವಾರಾಂತ್ಯ ಇರಲಿ ಅಥವಾ ವಾರದ ದಿನ ಇರಲಿ ಜನರು ಸಿನಿಮಾ ನೋಡಿಯೇ ನೋಡುತ್ತಾರೆ ಎಂಬುದಕ್ಕೆ ‘ಸು ಫ್ರಮ್ ಸೋ’ ಉತ್ತಮ ಉದಾಹರಣೆ. ಈ ಸಿನಿಮಾ ಮೊದಲ ಭಾನುವಾರ ಎಷ್ಟು ಗಳಿಕೆ ಮಾಡಿತ್ತೋ ಅದಕ್ಕೆ ಸರಿ ಸಮವಾಗಿ ವಾರದ ದಿನಗಳಲ್ಲೂ ಕಲೆಕ್ಷನ್ ಮಾಡಿತ್ತು. ಇನ್ನು, ಸಿನಿಮಾ ವಿಮರ್ಶೆಯಲ್ಲಿ ಸೋತರೆ ಆ ಚಿತ್ರದ ಅಬ್ಬರ ಇರೋದು ವಾರಾಂತ್ಯದಲ್ಲಿ ಮಾತ್ರ ಎಂಬುದಕ್ಕೆ ‘ಕೂಲಿ’ ಸಿನಿಮಾ (Coolie Movie) ಉತ್ತಮ ಉದಾಹರಣೆ. ಈ ಚಿತ್ರಕ್ಕೆ ಮೊದಲ ಆಘಾತ ಉಂಟಾಗಿದೆ.

‘ಕೂಲಿ’ ಸಿನಿಮಾದಲ್ಲಿ ರಜನಿಕಾಂತ್, ಆಮಿರ್ ಖಾನ್, ಉಪೇಂದ್ರ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಲೋಕೇಶ್ ಕನಗರಾಜ್ ನಿರ್ದೇಶನ ಇದೆ. ಕನ್ನಡದ ರಚಿತಾ ರಾಮ್ ಕೂಡ ಸಿನಿಮಾದಲ್ಲಿ ನೆಗೆಟಿವ್ ಶೇಡ್​ನ ಪಾತ್ರ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಆ ನಿರೀಕ್ಷೆಯನ್ನು ಸಿನಿಮಾ ತಲುಪಿಲ್ಲ.

‘ಕೂಲಿ’ ಸಿನಿಮಾ ಮೊದಲ ದಿನ ಕಲೆಕ್ಷನ್ ಮಾಡಿದ್ದು 65 ಕೋಟಿ ರೂಪಾಯಿ. ಭಾನುವಾರ ಈ ಗಳಿಕೆ 35 ಕೋಟಿ ರೂಪಾಯಿಗೆ ಇಳಿದಿತ್ತು. ಸೋಮವಾರ 12 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಮಂಗಳವಾರದ ಗಳಿಕೆ ಒಂದಂಕಿಗೆ ಬಂದಿದೆ. ಈ ಚಿತ್ರ ಆಗಸ್ಟ್ 19ರಂದು ಕೇವಲ 9.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದು ಚಿತ್ರಕ್ಕೆ ತೀವ್ರ ಹಿನ್ನಡೆ ತಂದಿದೆ. ಚಿತ್ರದ ಒಟ್ಟಾರೆ ಕಲೆಕ್ಷನ್ 216 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ
Image
ಅಂದು ಹೇಳಿದ್ದು ನಿಜವಾಯ್ತು; ಮಹೇಶ್ ಬಾಬು ಹಳೆಯ ಹೇಳಿಕೆ ವೈರಲ್
Image
ತೀವ್ರವಾಗಿ ಕುಸಿದ ‘ಕೂಲಿ’ ಕಲೆಕ್ಷನ್; ಒಂದಂಕಿಗೆ ಬಂತು ‘ವಾರ್ 2’ ಗಳಿಕೆ
Image
ಬಿಗ್ ಬಾಸ್​ಗೆ ಎಂಟ್ರಿ ಕೊಡಲಿದೆ ಸೆನ್ಸೇಷನ್ ಸೃಷ್ಟಿಸಿದ ಜೋಡಿ
Image
ಬಸ್ ಓಡಿಸಿದ ಬಾಲಯ್ಯ; ಮುಖದಲ್ಲಿರೋ ಭಯ ನೋಡಿದ್ರೆ ಯಾರೂ ಕೂರೋ ಧೈರ್ಯ ಮಾಡಲ್ಲ

ಇದನ್ನೂ ಓದಿ: ತೀವ್ರವಾಗಿ ಕುಸಿದ ‘ಕೂಲಿ’ ಕಲೆಕ್ಷನ್; ಒಂದಂಕಿಗೆ ಬಂತು ‘ವಾರ್ 2’ ಗಳಿಕೆ

‘ಕೂಲಿ’ ಸಿನಿಮಾದ ಗಳಿಕೆ ಹೀಗೆಯೇ ಮುಂದುವರಿದರೆ ದೊಡ್ಡ ಮಟ್ಟದ ಕಲೆಕ್ಷನ್ ಮಾಡೋದು ಅನುಮಾನ ಎನ್ನಲಾಗುತ್ತಿದೆ. ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಗರಿಷ್ಠ 500-600 ಕೋಟಿ ರೂಪಾಯಿ ಗಳಿಸಲು ಮಾತ್ರ ಸಾಧ್ಯವಾಗಬಹುದು ಎಂದು ಅನೇಕರು ಊಹಿಸಿದ್ದಾರೆ. ವಾರಾಂತ್ಯದಲ್ಲಿ ಹಾಗೂ ಗಣೇಶ ಚತುರ್ಥಿ ರಜೆಯ ಸಂದರ್ಭದಲ್ಲಿ ಸಿನಿಮಾ ಎಷ್ಟು ಕಲೆಕ್ಷನ್ ಮಾಡುತ್ತದೆ ಎಂಬುದರ ಮೇಲೆ ಸಿನಿಮಾದ ಒಟ್ಟಾರೆ ಗಲ್ಲಾ ಪೆಟ್ಟಿಗೆಯ ಗಳಿಕೆ ನಿರ್ಧಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ