ಮರಣೋತ್ತರ ಪರೀಕ್ಷೆ ವೇಳೆ ಸುಶಾಂತ್ ಸಿಂಗ್ ದೇಹದ ಮೇಲಿತ್ತು ಗಾಯ; ಸತ್ಯ ಮುಚ್ಚಿಟ್ರಾ ವೈದ್ಯರು?

Sushanth Singh Rajput Death Case: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅವರನ್ನು ಕೊಲೆ ಮಾಡಲಾಗಿದೆ ಎಂದು ಕೂಪರ್ ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ರೂಪಕುಮಾರ್ ಶಾ ಆರೋಪಿಸಿದ್ದಾರೆ.

ಮರಣೋತ್ತರ ಪರೀಕ್ಷೆ ವೇಳೆ ಸುಶಾಂತ್ ಸಿಂಗ್ ದೇಹದ ಮೇಲಿತ್ತು ಗಾಯ; ಸತ್ಯ ಮುಚ್ಚಿಟ್ರಾ ವೈದ್ಯರು?
ಸುಶಾಂತ್ ಸಿಂಗ್
Follow us
| Updated By: Digi Tech Desk

Updated on:Dec 26, 2022 | 2:23 PM

ಬಾಲಿವುಡ್ ನಟ ಸುಶಾಂತ್ ಸಿಂಗ್ (Sushant Singh Rajput) ರಜಪೂತ್ ನಿಧನರಾಗಿ ಎರಡೂವರೆ ವರ್ಷ ಕಳೆದಿದೆ. ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ. ಆರಂಭದಲ್ಲಿ ಮುಂಬೈ ಪೊಲೀಸರು ಈ ಪ್ರಕರಣದ ತನಿಖೆ ನಡೆಸಿದ್ದರು. ನಂತರ ಒತ್ತಡ ಹೆಚ್ಚಿದ ಕಾರಣ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಲಾಯಿತು. ಈವರೆಗೆ ತನಿಖೆ ಪೂರ್ಣಗೊಂಡಿಲ್ಲ. ಹೀಗಿರುವಾಗಲೇ ಗಂಭೀರ ಆರೋಪ ಒಂದು ಕೇಳಿ ಬಂದಿದೆ. ‘ಸುಶಾಂತ್ ಸಿಂಗ್ ರಜಪೂತ್ ಅವರದ್ದು ಕೊಲೆ’ ಎಂಬ ಆರೋಪವನ್ನು ಮಾಡಲಾಯಿತು. ಇದಕ್ಕೆ ಈಗ ಪುಷ್ಟಿ ಸಿಕ್ಕಿದೆ. ಸುಶಾಂತ್ ಸಿಂಗ್ ಅವರ ಮರಣೋತ್ತರ ಪರೀಕ್ಷೆಯಲ್ಲಿ ಭಾಗಿಯಾದ ಕೂಪರ್​ ಆಸ್ಪತ್ರೆಯ ಸಿಬ್ಬಂದಿ ಹೇಳಿದ್ದಾರೆ. ಈ ಹೇಳಿಕೆ ಸಂಚಲನ ಮೂಡಿಸಿದೆ.

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅವರನ್ನು ಕೊಲೆ ಮಾಡಲಾಗಿದೆ ಎಂದು ಕೂಪರ್ ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ರೂಪಕುಮಾರ್ ಶಾ ಆರೋಪಿಸಿದ್ದಾರೆ. ‘ಸುಶಾಂತ್ ಶವ ಪತ್ತೆಯಾದಾಗ ಅವರ ದೇಹದ ಮೇಲೆ ಗಾಯಗಳಿದ್ದವು ಮತ್ತು ಅವರ ದೇಹವನ್ನು ಥಳಿಸಲಾಗಿತ್ತು’ ಎಂದು ರೂಪಕುಮಾರ್ ಹೇಳಿದ್ದಾರೆ.

‘ಸುಶಾಂತ್ ಸಿಂಗ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುವಾಗ ನಾನು ಅಲ್ಲಿಯೇ ಇದ್ದೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ವೈದ್ಯರಿಗೆ ಹೇಳಿದ್ದೆ. ಆದರೆ ಯಾರೂ ನನ್ನತ್ತ ಗಮನ ಹರಿಸಲಿಲ್ಲ’ ಎಂದು ಶಾ ಹೇಳಿದ್ದಾರೆ. ಇಷ್ಟು ದಿನ ಈ ವಿಚಾರವನ್ನು ಮುಚ್ಚಿಟ್ಟಿದ್ದೇಕೆ ಎನ್ನುವ ಪ್ರಶ್ನೆಗೂ ಅವರು ಉತ್ತರ ನೀಡಿದ್ದಾರೆ. ‘ಕೆಲಸದಲ್ಲಿ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ನಾವು ಇಷ್ಟು ದಿನ ಅದರ ಬಗ್ಗೆ ಮಾತನಾಡಲಿಲ್ಲ’ ಎಂದು ಅವರು ಹೇಳಿದ್ದಾರೆ.  ಇದರಿಂದ ವೈದ್ಯರು ಸತ್ಯ ಮುಚ್ಚಿಟ್ಟರಾ ಎಂಬ ಅನುಮಾನ ಮೂಡಿದೆ.  ರೂಪಕುಮಾರ್ ಶಾ ಕೂಪರ್ ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಒಂದೂವರೆ ತಿಂಗಳ ಹಿಂದೆ ನಿವೃತ್ತರಾಗಿದ್ದರು.

ಇದನ್ನೂ ಓದಿ
Image
ಪ್ರಭಾವಿ ರಾಜಕಾರಣಿಯಿಂದ ರಿಯಾಗೆ 44 ಬಾರಿ ಕರೆ? ಸುಶಾಂತ್ ಸಿಂಗ್ ಸಾವಿಗೆ ರಾಜಕೀಯದ ಲಿಂಕ್​
Image
Sushant Singh Rajput: ಸುಶಾಂತ್​ ವಾಸಿಸಿದ್ದ ಮನೆ ಇಂದಿಗೂ ಖಾಲಿ; ಬಾಡಿಗೆಗೆ ಬರಲು ಹೆದರುತ್ತಿರುವ ಜನ
Image
ಸುಶಾಂತ್​ ಸಿಂಗ್​ ನೆರೆ ಮನೆಯವನನ್ನು ಅರೆಸ್ಟ್​ ಮಾಡಿದ ಪೊಲೀಸರು; ಇದಕ್ಕಿದೆ ಡ್ರಗ್ಸ್​ ಲಿಂಕ್​

ಇದನ್ನೂ ಓದಿ: Sushant Singh Rajput: ಸುಶಾಂತ್​ ವಾಸಿಸಿದ್ದ ಮನೆ ಇಂದಿಗೂ ಖಾಲಿ; ಬಾಡಿಗೆಗೆ ಬರಲು ಹೆದರುತ್ತಿರುವ ಜನ

ಸಂಚಲನ ಸೃಷ್ಟಿಸಿದ್ದ 44 ಬಾರಿ ಕರೆಯ ವಿಚಾರ

ಸುಶಾಂತ್ ಸಿಂಗ್ ರಜಪೂತ್ ಅವರ ಗರ್ಲ್​ಫ್ರೆಂಡ್ ಆಗಿದ್ದ ರಿಯಾ ಚಕ್ರವರ್ತಿ ಈ ಪ್ರಕರಣದ ಪ್ರಮುಖ ಆರೋಪಿ. ಅವರು ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು. ಸದ್ಯ ಜಾಮೀನು ಪಡೆದು ಅವರು ಹೊರಗಿದ್ದಾರೆ. ತನಿಖೆ ನಡೆಯುವ ಸಂದರ್ಭದಲ್ಲಿ ರಿಯಾಗೆ ‘ಎಯು’ ಹೆಸರಿನ  ವ್ಯಕ್ತಿಯಿಂದ 44 ಬಾರಿ ಕರೆ ಬಂದಿದೆ. ಎಯು ಎಂದರೆ ಆದಿತ್ಯ ಉದ್ಧವ್ ಠಾಕ್ರೆ ಎಂದು ಬಿಹಾರ್ ಪೊಲೀಸರು ಹೇಳಿದ್ದರು. ಇದರಿಂದಾಗಿ ಈ ಪ್ರಕರಣಕ್ಕೆ ಹಾಗೂ ಆದಿತ್ಯ ಠಾಕ್ರೆಗೆ ಲಿಂಕ್ ಆಗಿದೆ.

ಶಿವ ಸೇನೆಯ ಏಕನಾಥ್​ ಶಿಂಧೆ ಬಣದ ಎಂಪಿ ರಾಹುಲ್ ಶೆವಾಲೆ ಅವರು ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದರು. ‘ರಿಯಾ ಚಕ್ರವರ್ತಿ ಅವರು ಎಯು ನಿಂದ 44 ಬಾರಿ ಕರೆ ಸ್ವೀಕರಿಸಿದ್ದಾರೆ. ಎಯು ಎಂದರೆ ಆದಿತ್ಯ ಉದ್ಧವ್ ಠಾಕ್ರೆ ಎಂದು ಬಿಹಾರ ಪೊಲೀಸರು ಹೇಳಿದ್ದಾರೆ. ಸಿಬಿಐ ತನಿಖೆ ಯಾವ ಹಂತದಲ್ಲಿದೆ?’ ಎಂದು ಅವರು ಪ್ರಶ್ನೆ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:47 pm, Mon, 26 December 22

ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು