AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈರಸಿ ಸಿನಿಮಾ ಪ್ರಸಾರಕ್ಕೆ ಸ್ವಂತ ಆ್ಯಪ್ ತಯಾರಿಸಿದ ಖದೀಮ ಈಗ ಪೊಲೀಸ್ ಬಲೆಗೆ

ತನ್ನದೇ ಆ್ಯಪ್ ತಯಾರಿಸಿ, ಅದರ ಮೂಲಕ ಪೈರಸಿ ಸಿನಿಮಾ ಪ್ರಸಾರ ಮಾಡುತ್ತಿದ್ದ ಕಿಡಿಗೇಡಿಯನ್ನು ಬಂಧಿಸಲಾಗಿದೆ. ಈ ಆ್ಯಪ್ ಮೂಲಕ ಆತ ಹಣ ಸಂಪಾದನೆ ಮಾಡುತ್ತಿದ್ದ. ಈಗ ಪೊಲೀಸರ ವಶದಲ್ಲಿದ್ದಾನೆ. ಪೈರಸಿಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಇನ್ನೂ ಅನೇಕರ ಹೆಸರುಗಳು ಹೊರಬರುವ ಸಾಧ್ಯತೆ ದಟ್ಟವಾಗಿದೆ.

ಪೈರಸಿ ಸಿನಿಮಾ ಪ್ರಸಾರಕ್ಕೆ ಸ್ವಂತ ಆ್ಯಪ್ ತಯಾರಿಸಿದ ಖದೀಮ ಈಗ ಪೊಲೀಸ್ ಬಲೆಗೆ
Chhaava Movie Poster
ಮದನ್​ ಕುಮಾರ್​
|

Updated on: Apr 11, 2025 | 7:28 PM

Share

ಚಿತ್ರರಂಗದವರಿಗೆ ಪೈರಸಿ (Piracy) ದೊಡ್ಡ ಪಿಡುಗಾಗಿದೆ. ಕೋಟ್ಯಂತರ ರೂಪಾಯಿ ಬಂಡವಾಳ ಹೂಡಿದ ನಿರ್ಮಾಪಕರಿಗೆ ಪೈರಸಿಯಿಂದ ಸಿಕ್ಕಾಪಟ್ಟೆ ನಷ್ಟ ಆಗುತ್ತದೆ. ಇತ್ತೀಚೆಗೆ ಬಿಡುಗಡೆ ಆದ ಛಾವ, ಸಿಕಂದರ್ ಮುಂತಾದ ಸಿನಿಮಾಗಳ ಕೂಡ ಪೈರಸಿಗೆ ಒಳಗಾದವು. ಇಂಥ ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಸೈಬರ್ ಪೊಲೀಸರು ಸಮರ ಸಾರಿದ್ದಾರೆ. ‘ಛಾವ’ (Chhaava) ಸಿನಿಮಾವನ್ನು ಪೈರಸಿ ಮಾಡಿದ್ದ ಕಿಡಿಗೇಡಿಯನ್ನು ಮುಂಬೈನ ದಕ್ಷಿಣ ವಿಭಾಗದ ಸೈಬರ್ ಪೊಲೀಸರು (Cyber Police) ಬಂಧಿಸಿದ್ದಾರೆ. ತನಿಖೆ ವೇಳೆ ಹಲವು ಶಾಕಿಂಗ್ ವಿಚಾರಗಳು ಬಯಲಾಗಿವೆ. ಆ ಕುರಿತು ಇಲ್ಲಿದೆ ವಿವರ..

ತಮ್ಮ ಸಿನಿಮಾ ಪೈರಸಿ ಆಗಬಾರದು ಎಂಬ ಕಾರಣಕ್ಕೆ ನಿರ್ಮಾಣ ಸಂಸ್ಥೆಯವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ‘ಅಗಸ್ಟ್ ಎಂಟರ್​ಟೇನ್ಮೆಂಟ್​ ಕಂಪನಿ’ ನೀಡಿದ ದೂರಿನ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಸಾಗರ್ ಮಾಣಿಕ್ ರಂಧಾವನ್ ಎಂಬಾತನನ್ನು ಬಂಧಿಸಿದ್ದಾರೆ. ಸಿನಿಮಾಗಳನ್ನು ಪೈರಸಿ ಮಾಡಲು ಈತ ವ್ಯವಸ್ಥಿತವಾಗಿ ಜಾಲ ರೂಪಸಿಕೊಂಡಿದ್ದಾನೆ ಎಂಬುದು ತಿಳಿದು ಬಂದಿದೆ.

ಈತ ತಮ್ಮದೇ ಆ್ಯಪ್ ತಯಾರಿಸಿಕೊಂಡಿದ್ದ. ಅದರಲ್ಲಿ ಪೈರಸಿ ಸಿನಿಮಾಗಳ ಪ್ರಸಾರ ಮಾಡಿ ಹಣ ಗಳಿಸುತ್ತಿದ್ದ. ‘ಛಾವ’ ಸಿನಿಮಾವನ್ನು ಕೂಡ ಇದೇ ಆ್ಯಪ್​ನಲ್ಲಿ ಪ್ರಸಾರ ಮಾಡಿದ್ದ ಎನ್ನಲಾಗಿದೆ. ಸದ್ಯಕ್ಕೆ ಈತ ಪೊಲೀಸ್ ವಶದಲ್ಲಿ ಇದ್ದಾನೆ. ತನಿಖೆ ಮುಂದುವರಿಯುತ್ತಿದೆ. ಸಮಗ್ರ ತನಿಖೆ ಬಳಿಕ ಪೈರಸಿ ಜಾಲದಲ್ಲಿರುವ ಇನ್ನೂ ಹಲವರ ಹೆಸರುಗಳು ಹೊರಬರುವ ನಿರೀಕ್ಷೆ ಇದೆ.

ಇದನ್ನೂ ಓದಿ
Image
‘ಛಾವ’ ಪ್ರದರ್ಶನದ ವೇಳೆ ಚಿತ್ರಮಂದಿರದ ಒಳಗೆ ಬೆಂಕಿ; ಕಾರಣ ತಿಳಿಸಿದ ಪೊಲೀಸರು
Image
‘ಛಾವ’ ಎಫೆಕ್ಟ್: ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನದ ವಿಷಯ ಸೇರಿಸಲು ಒತ್ತಾಯ
Image
ಛಾವ ಸಿನಿಮಾ ದೃಶ್ಯ ಹಾಗೂ ಕುಂಭಮೇಳ ಕಾಲ್ತುಳಿತದ ಬಗ್ಗೆ ಸ್ವರಾ ಭಾಸ್ಕರ್ ಟೀಕೆ
Image
‘ಛಾವ’ ಸಿನಿಮಾ ಪ್ರದರ್ಶನದ ವೇಳೆ ಚಿತ್ರಮಂದಿರದ ಪರದೆ ಹರಿದು ಹಾಕಿದ ಕುಡುಕ

ಫೆಬ್ರವರಿ 14ರಿಂದ ಮಾರ್ಚ್ 20ರ ತನಕ ‘ಛಾವ’ ಸಿನಿಮಾದ 1818 ಪೈರಸಿ ಲಿಂಕ್​ಗ್ಳು ಹರಿದಾಡಿವೆ. ವಾಟ್ಸಪ್, ಟೆಲಿಗ್ರಾಮ್, ಇನ್​ಸ್ಟಾಗ್ರಾಮ್ ಸೇರಿದಂತೆ ಹಲವು ಸೋಶಿಯಲ್ ಮೀಡಿಯಾ ಮೂಲಕ ಪೈರಸಿ ಲಿಂಕ್​ ಕಳಿಸಲಾಗಿದೆ. ಇದರಿಂದಾಗಿ ಚಿತ್ರದ ನಿರ್ಮಾಪಕರಿಗೆ ಕೋಟ್ಯಂತರ ರೂಪಾಯಿ ನಷ್ಟ ಆಗಿದೆ. ಆದ್ದರಿಂದ ನಿರ್ಮಾಪಕರು ದೂರು ನೀಡಿದ್ದಾರೆ. ಅದರ ಅನ್ವಯ ಈಗ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಪೈರಸಿಯಿಂದ ವಾರ್ಷಿಕ 20 ಸಾವಿರ ಕೋಟಿ ನಷ್ಟ, ಪೈರಸಿ ಎದುರಿಸಲು ಕಠಿಣ ಕ್ರಮ

ಇತ್ತೀಚೆಗೆ ತೆರೆಕಂಡ ‘ಸಿಕಂದರ್’ ಸಿನಿಮಾ ಕೂಡ ಪೈರಸಿ ಕಾಟಕ್ಕೆ ಬಲಿಯಾಯಿತು. ಆದ್ದರಿಂದ ಸಲ್ಮಾನ್ ಖಾನ್ ಅವರ ಅಭಿಮಾನಿಗಳಿಗೆ ಬೇಸರ ಆಯಿತು. ‘ಛಾವ’ ಸಿನಿಮಾವನ್ನು ಪೈರಸಿ ಮಾಡಿದ ಖದೀಮರನ್ನು ಬಂಧಿಸಿದ ರೀತಿಯೇ ‘ಸಿಕಂದರ್’ ಚಿತ್ರದ ಪೈರಸಿಗೆ ಕಾರಣ ಆದವರನ್ನೂ ಅರೆಸ್ಟ್ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ