AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಾನಿ ಸ್ಕ್ರಿಪ್ಟ್ ಬಗ್ಗೆ ಆಮಿರ್ ಖಾನ್ ಅಸಮಾಧಾನ; ನಿಂತಿತು ದೊಡ್ಡ ಪ್ರಾಜೆಕ್ಟ್

ಖ್ಯಾತ ನಿರ್ದೇಶಕ ರಾಜಮೌಳಿ ಮತ್ತು ರಾಜ್​ಕುಮಾರ್ ಹಿರಾನಿ ಇಬ್ಬರೂ ದಾದಾಸಾಹೇಬ್ ಫಾಲ್ಕೆ ಬಯೋಪಿಕ್ ನಿರ್ದೇಶಿಸಲು ಮುಂದಾಗಿದ್ದರು. ಆದರೆ, ಜೂನಿಯರ್ ಎನ್​ಟಿಆರ್ ನಟಿಸಬೇಕಿದ್ದ ರಾಜಮೌಳಿ ಅವರ ಯೋಜನೆಯನ್ನು ಫಾಲ್ಕೆ ಕುಟುಂಬ ವಿರೋಧಿಸಿತು. ಮತ್ತೊಂದೆಡೆ, ಆಮಿರ್ ಖಾನ್‌ಗೆ ಸ್ಕ್ರಿಪ್ಟ್ "ಡ್ರೈ" ಎನಿಸಿದ್ದರಿಂದ ಹಿರಾನಿ ಅವರ ಸಿನಿಮಾ ಕೂಡ ನಿಂತಿದೆ.

ಹಿರಾನಿ ಸ್ಕ್ರಿಪ್ಟ್ ಬಗ್ಗೆ ಆಮಿರ್ ಖಾನ್ ಅಸಮಾಧಾನ; ನಿಂತಿತು ದೊಡ್ಡ ಪ್ರಾಜೆಕ್ಟ್
ಹಿರಾನಿ-ಆಮಿರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 12, 2025 | 10:44 AM

Share

ಖ್ಯಾತ ನಿರ್ದೇಶಕ ಎಸ್​ಎಸ್ ರಾಜಮೌಳಿ ಅವರು ‘ದಾದಾಸಹೇಬ್ ಫಾಲ್ಕೆ’ ಸಿನಿಮಾನ ನಿರ್ದೇಶನ ಮಾಡುವ ಬದಲು ಅದನ್ನು ಪ್ರೆಸೆಂಟ್ ಮಾಡಲು ಮುಂದಾದರು. ಈ ಚಿತ್ರವನ್ನು ನಿತಿನ್ ಕಕ್ಕರ್ ನಿರ್ದೇಶನ ಮಾಡಬೇಕಿತ್ತು. ಈ ಚಿತ್ರದಲ್ಲಿ ದಾದಾಸಾಹೇಬ್ ಫಾಲ್ಕೆ ಪಾತ್ರದಲ್ಲಿ ಜೂನಿಯರ್ ಎನ್​ಟಿಆರ್ ನಟಿಸಬೇಕಿತ್ತು. ಈಗ ಸಿನಿಮಾ ನಿಂತಿದೆ ಎಂಬ ಸುದ್ದಿಯು ಹರಿದಾಡಿದೆ.  ಹೀಗಿರುವಾಗಲೇ ಹಿರಾನಿ ನಿರ್ದೇಶನ ಮಾಡಬೇಕಿದ್ದ ಚಿತ್ರವೂ ನಿಂತಿದೆಯಂತೆ.

ದಾದಾಸಾಹೇಬ್ ಫಾಲ್ಕೆ ಸಿನಿಮಾ ಮಾಡುವ ವಿಚಾರದಲ್ಲಿ ಸ್ಪರ್ಧೆ ಏರ್ಪಟ್ಟಿತ್ತು ಎಂದರೂ ತಪ್ಪಾಗಲಾರದು. ನಿತಿನ್ ಅವರು ಹೇಗೆ ಈ ಸಿನಿಮಾ ಮಾಡಲು ಆಸಕ್ತಿ ತೋರಿಸಿದ್ದರೋ ಬಾಲಿವುಡ್ ನಿರ್ದೇಶಕ ರಾಜ್​ಕುಮಾರ್ ಹಿರಾನಿ ಇದೇ ವಿಷಯ ಇಟ್ಟುಕೊಂಡು ಬಯೋಪಿಕ್ ಮಾಡಲು ನಿರ್ಧರಿಸಿದ್ದರು. ಈ ಚಿತ್ರಕ್ಕೆ ಆಮಿರ್ ಖಾನ್ ಹೀರೋ. ಆದರೆ, ಈಗ ಈ ಚಿತ್ರವೂ ಈಗ ನಿಂತಿದೆಯಂತೆ.

ಫಾಲ್ಕೆ ಕುಟುಂಬ ರಾಜ್​ಕುಮಾರ್ ಹಿರಾನಿ ಪರವಾಗಿ ನಿಂತಿತ್ತು. ಅವರ ಸಿನಿಮಾನ ಕುಟುಂಬ ಬೆಂಬಲಿಸಿತ್ತು. ರಾಜಮೌಳಿ ವರ್ಷನ್​ಗೆ ಕುಟುಂಬ ವಿರೋಧ ಹೊರಹಾಕಿತ್ತು. ಹೀಗಾಗಿ, ರಾಜಮೌಳಿ ಸಿನಿಮಾ ನಿಂತಿದೆ ಎನ್ನಲಾಗಿದೆ. ಈಗ ಹಿರಾನಿ ಸಿನಿಮಾ, ಸ್ಕ್ರಿಪ್ಟ್ ಕಾರಣದಿಂದ ನಿಂತು ಹೋಗಿದೆ ಎನ್ನಲಾಗುತ್ತಿದೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ.

ಇಂದಿನ ಜಗತ್ತಿನಲ್ಲಿ ಸಿನಿಮಾನ ಮನರಂಜನೆ ದೃಷ್ಟಿಯಿಂದ ಮಾತ್ರ ನೋಡಲಾಗುತ್ತಿದೆ. ಬಯೋಪಿಕ್ ಮಾಡುವುದಾದರೂ ಅಲ್ಲಿ ಮಸಾಲೆ ಬೇಕು. ರಾಜ್​ಕುಮಾರ್ ಹಿರಾನಿ ಮಾಡಿಕೊಂಡ ಸ್ಕ್ರಿಪ್ಟ್ ಆಮಿರ್​ಗೆ ಡ್ರೈ ಎನಿಸಿದೆಯಂತೆ. ರಾಜ್​ಕುಮಾರ್ ಹಿರಾನಿ ಸಿನಿಮಾಗಳಲ್ಲಿ ಹಾಸ್ಯ ಪ್ರಧಾನ ಆಗಿರುತ್ತವೆ. ಆದರೆ, ಈ ಸ್ಕ್ರಿಪ್ಟ್​ನಲ್ಲಿ ಅದು ಕಾಣಿಸದ ಕಾರಣ, ಸಿನಿಮಾದಿಂದ ಹಿಂದೆ ಸರಿಯುವ ನಿರ್ಧಾರಕ್ಕೆ ಆಮಿರ್ ಬಂದಿದ್ದಾರಂತೆ. ಇದರಿಂದ ಚಿತ್ರ ನಿಂತಿದೆ ಎನ್ನಲಾಗಿದೆ. ಈಗ ರಾಜಮೌಳಿ ಅವರು ಫಾಲ್ಕೆ ಕುಟುಂಬವನ್ನು ಸಂಪರ್ಕಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಯೂಟ್ಯೂಬ್​​​ನಲ್ಲಿ ಸಿನಿಮಾ ಬಿಡುಗಡೆ ಮಾಡಿ ಗೆದ್ದರೇ ಆಮಿರ್ ಖಾನ್, ಗಳಿಸಿದ್ದೆಷ್ಟು?

ಆಮಿರ್ ಖಾನ್ ಹಾಗೂ ಹಿರಾನಿ ‘3 ಈಡಿಯಟ್ಸ್ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇದರ ಜೊತೆಗೆ ‘ಪಿಕೆ’ ಸಿನಿಮಾ ಕೂಡ ಮಾಡಿದ್ದರು. ಎರಡೂ ಸಿನಿಮಾಗಳು ಸೂಪರ್ ಹಿಟ್ ಆದವು. ಈ ಎನರ್ಜಿಯನ್ನು ಮ್ಯಾಚ್ ಮಾಡಲು ಮತ್ತೊಮ್ಮೆ ಸಾಧ್ಯವಾಗೋದು ಅನುಮಾನವೇ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ