AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಾನಿ ಸ್ಕ್ರಿಪ್ಟ್ ಬಗ್ಗೆ ಆಮಿರ್ ಖಾನ್ ಅಸಮಾಧಾನ; ನಿಂತಿತು ದೊಡ್ಡ ಪ್ರಾಜೆಕ್ಟ್

ಖ್ಯಾತ ನಿರ್ದೇಶಕ ರಾಜಮೌಳಿ ಮತ್ತು ರಾಜ್​ಕುಮಾರ್ ಹಿರಾನಿ ಇಬ್ಬರೂ ದಾದಾಸಾಹೇಬ್ ಫಾಲ್ಕೆ ಬಯೋಪಿಕ್ ನಿರ್ದೇಶಿಸಲು ಮುಂದಾಗಿದ್ದರು. ಆದರೆ, ಜೂನಿಯರ್ ಎನ್​ಟಿಆರ್ ನಟಿಸಬೇಕಿದ್ದ ರಾಜಮೌಳಿ ಅವರ ಯೋಜನೆಯನ್ನು ಫಾಲ್ಕೆ ಕುಟುಂಬ ವಿರೋಧಿಸಿತು. ಮತ್ತೊಂದೆಡೆ, ಆಮಿರ್ ಖಾನ್‌ಗೆ ಸ್ಕ್ರಿಪ್ಟ್ "ಡ್ರೈ" ಎನಿಸಿದ್ದರಿಂದ ಹಿರಾನಿ ಅವರ ಸಿನಿಮಾ ಕೂಡ ನಿಂತಿದೆ.

ಹಿರಾನಿ ಸ್ಕ್ರಿಪ್ಟ್ ಬಗ್ಗೆ ಆಮಿರ್ ಖಾನ್ ಅಸಮಾಧಾನ; ನಿಂತಿತು ದೊಡ್ಡ ಪ್ರಾಜೆಕ್ಟ್
ಹಿರಾನಿ-ಆಮಿರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 12, 2025 | 10:44 AM

Share

ಖ್ಯಾತ ನಿರ್ದೇಶಕ ಎಸ್​ಎಸ್ ರಾಜಮೌಳಿ ಅವರು ‘ದಾದಾಸಹೇಬ್ ಫಾಲ್ಕೆ’ ಸಿನಿಮಾನ ನಿರ್ದೇಶನ ಮಾಡುವ ಬದಲು ಅದನ್ನು ಪ್ರೆಸೆಂಟ್ ಮಾಡಲು ಮುಂದಾದರು. ಈ ಚಿತ್ರವನ್ನು ನಿತಿನ್ ಕಕ್ಕರ್ ನಿರ್ದೇಶನ ಮಾಡಬೇಕಿತ್ತು. ಈ ಚಿತ್ರದಲ್ಲಿ ದಾದಾಸಾಹೇಬ್ ಫಾಲ್ಕೆ ಪಾತ್ರದಲ್ಲಿ ಜೂನಿಯರ್ ಎನ್​ಟಿಆರ್ ನಟಿಸಬೇಕಿತ್ತು. ಈಗ ಸಿನಿಮಾ ನಿಂತಿದೆ ಎಂಬ ಸುದ್ದಿಯು ಹರಿದಾಡಿದೆ.  ಹೀಗಿರುವಾಗಲೇ ಹಿರಾನಿ ನಿರ್ದೇಶನ ಮಾಡಬೇಕಿದ್ದ ಚಿತ್ರವೂ ನಿಂತಿದೆಯಂತೆ.

ದಾದಾಸಾಹೇಬ್ ಫಾಲ್ಕೆ ಸಿನಿಮಾ ಮಾಡುವ ವಿಚಾರದಲ್ಲಿ ಸ್ಪರ್ಧೆ ಏರ್ಪಟ್ಟಿತ್ತು ಎಂದರೂ ತಪ್ಪಾಗಲಾರದು. ನಿತಿನ್ ಅವರು ಹೇಗೆ ಈ ಸಿನಿಮಾ ಮಾಡಲು ಆಸಕ್ತಿ ತೋರಿಸಿದ್ದರೋ ಬಾಲಿವುಡ್ ನಿರ್ದೇಶಕ ರಾಜ್​ಕುಮಾರ್ ಹಿರಾನಿ ಇದೇ ವಿಷಯ ಇಟ್ಟುಕೊಂಡು ಬಯೋಪಿಕ್ ಮಾಡಲು ನಿರ್ಧರಿಸಿದ್ದರು. ಈ ಚಿತ್ರಕ್ಕೆ ಆಮಿರ್ ಖಾನ್ ಹೀರೋ. ಆದರೆ, ಈಗ ಈ ಚಿತ್ರವೂ ಈಗ ನಿಂತಿದೆಯಂತೆ.

ಫಾಲ್ಕೆ ಕುಟುಂಬ ರಾಜ್​ಕುಮಾರ್ ಹಿರಾನಿ ಪರವಾಗಿ ನಿಂತಿತ್ತು. ಅವರ ಸಿನಿಮಾನ ಕುಟುಂಬ ಬೆಂಬಲಿಸಿತ್ತು. ರಾಜಮೌಳಿ ವರ್ಷನ್​ಗೆ ಕುಟುಂಬ ವಿರೋಧ ಹೊರಹಾಕಿತ್ತು. ಹೀಗಾಗಿ, ರಾಜಮೌಳಿ ಸಿನಿಮಾ ನಿಂತಿದೆ ಎನ್ನಲಾಗಿದೆ. ಈಗ ಹಿರಾನಿ ಸಿನಿಮಾ, ಸ್ಕ್ರಿಪ್ಟ್ ಕಾರಣದಿಂದ ನಿಂತು ಹೋಗಿದೆ ಎನ್ನಲಾಗುತ್ತಿದೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ.

ಇಂದಿನ ಜಗತ್ತಿನಲ್ಲಿ ಸಿನಿಮಾನ ಮನರಂಜನೆ ದೃಷ್ಟಿಯಿಂದ ಮಾತ್ರ ನೋಡಲಾಗುತ್ತಿದೆ. ಬಯೋಪಿಕ್ ಮಾಡುವುದಾದರೂ ಅಲ್ಲಿ ಮಸಾಲೆ ಬೇಕು. ರಾಜ್​ಕುಮಾರ್ ಹಿರಾನಿ ಮಾಡಿಕೊಂಡ ಸ್ಕ್ರಿಪ್ಟ್ ಆಮಿರ್​ಗೆ ಡ್ರೈ ಎನಿಸಿದೆಯಂತೆ. ರಾಜ್​ಕುಮಾರ್ ಹಿರಾನಿ ಸಿನಿಮಾಗಳಲ್ಲಿ ಹಾಸ್ಯ ಪ್ರಧಾನ ಆಗಿರುತ್ತವೆ. ಆದರೆ, ಈ ಸ್ಕ್ರಿಪ್ಟ್​ನಲ್ಲಿ ಅದು ಕಾಣಿಸದ ಕಾರಣ, ಸಿನಿಮಾದಿಂದ ಹಿಂದೆ ಸರಿಯುವ ನಿರ್ಧಾರಕ್ಕೆ ಆಮಿರ್ ಬಂದಿದ್ದಾರಂತೆ. ಇದರಿಂದ ಚಿತ್ರ ನಿಂತಿದೆ ಎನ್ನಲಾಗಿದೆ. ಈಗ ರಾಜಮೌಳಿ ಅವರು ಫಾಲ್ಕೆ ಕುಟುಂಬವನ್ನು ಸಂಪರ್ಕಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಯೂಟ್ಯೂಬ್​​​ನಲ್ಲಿ ಸಿನಿಮಾ ಬಿಡುಗಡೆ ಮಾಡಿ ಗೆದ್ದರೇ ಆಮಿರ್ ಖಾನ್, ಗಳಿಸಿದ್ದೆಷ್ಟು?

ಆಮಿರ್ ಖಾನ್ ಹಾಗೂ ಹಿರಾನಿ ‘3 ಈಡಿಯಟ್ಸ್ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇದರ ಜೊತೆಗೆ ‘ಪಿಕೆ’ ಸಿನಿಮಾ ಕೂಡ ಮಾಡಿದ್ದರು. ಎರಡೂ ಸಿನಿಮಾಗಳು ಸೂಪರ್ ಹಿಟ್ ಆದವು. ಈ ಎನರ್ಜಿಯನ್ನು ಮ್ಯಾಚ್ ಮಾಡಲು ಮತ್ತೊಮ್ಮೆ ಸಾಧ್ಯವಾಗೋದು ಅನುಮಾನವೇ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ