AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ನೋಡಿ ಸಿಟ್ಟು ಮಾಡಿಕೊಂಡ ದಗ್ಗುಬಾಟಿ ವೆಂಕಟೇಶ್​ ಅಭಿಮಾನಿಗಳು

Daggubati Venkatesh: ಟಾಲಿವುಡ್​ನಲ್ಲಿ ಸಖತ್​ ಖ್ಯಾತಿ​ ಇರುವಂತಹ ಕಲಾವಿದ ವೆಂಕಟೇಶ್​ ಅವರನ್ನು ಬಾಲಿವುಡ್​ ಚಿತ್ರದಲ್ಲಿ ಈ ರೀತಿಯಾಗಿ ತೋರಿಸಿರುವುದು ಸರಿಯಲ್ಲ ಎಂಬ ಚರ್ಚೆ ಅಭಿಮಾನಿಗಳ ವಲಯದಲ್ಲಿ ನಡೆಯುತ್ತಿದೆ.

Salman Khan: ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ನೋಡಿ ಸಿಟ್ಟು ಮಾಡಿಕೊಂಡ ದಗ್ಗುಬಾಟಿ ವೆಂಕಟೇಶ್​ ಅಭಿಮಾನಿಗಳು
ದಗ್ಗುಬಾಟಿ ವೆಂಕಟೇಶ್, ಸಲ್ಮಾನ್ ಖಾನ್
ಮದನ್​ ಕುಮಾರ್​
|

Updated on:Apr 25, 2023 | 1:24 PM

Share

2023ರ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದ್ದ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ (Kisi Ka Bhai Kisi Ki Jaan) ಚಿತ್ರ ಏಪ್ರಿಲ್​ 21ರಂದು ತೆರೆಕಂಡಿತು. ಅಭಿಮಾನಿಗಳು ನಿರೀಕ್ಷಿಸಿದ ರೀತಿಯಲ್ಲಿ ಈ ಸಿನಿಮಾ ಮೂಡಿಬಂದಿಲ್ಲ. ಆದ್ದರಿಂದ ಪ್ರೇಕ್ಷಕರ ವಲಯದಿಂದ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಲ್ಮಾನ್​ ಖಾನ್​ (Salman Khan) ಅಭಿಮಾನಿಗಳು ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಮೊದಲ ದಿನ ಸಾಧಾರಣ ಕಲೆಕ್ಷನ್​ ಮಾಡಿದ್ದ ಈ ಚಿತ್ರ ನಂತರದ ದಿನಗಳಲ್ಲಿ ಸುಧಾರಣೆ ಕಂಡಿದೆ. ಇದೆಲ್ಲದರ ನಡುವೆ ಟಾಲಿವುಡ್​ ನಟ ದಗ್ಗುಬಾಟಿ ವೆಂಕಟೇಶ್​ (Daggubati Venkatesh) ಅವರ ಅಭಿಮಾನಿಗಳಿಗೆ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ಇಷ್ಟ ಆಗಿಲ್ಲ. ವೆಂಕಟೇಶ್​ ಅವರ ಪಾತ್ರಕ್ಕೆ ಸೂಕ್ತ ಸ್ಥಾನ ಮಾನ ಸಿಕ್ಕಿಲ್ಲ ಎಂಬುದೇ ಇದಕ್ಕೆ ಕಾರಣ. ಹಾಗಾಗಿ ಕೆಲವರು ಸಲ್ಮಾನ್​ ಖಾನ್​ ವಿರುದ್ಧ ಗರಂ ಆಗಿದ್ದಾರೆ.

ಸ್ಟಾರ್​ ಕಲಾವಿದರು ಬೇರೆ ಭಾಷೆಯ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದಾಗ ಸೂಕ್ತ ಸ್ಕ್ರೀನ್​ ಸ್ಪೇಸ್​ ಸಿಗಬೇಕು ಎಂದು ಅಭಿಮಾನಿಗಳು ನಿರೀಕ್ಷಿಸುತ್ತಾರೆ. ಅಲ್ಲದೇ, ಆ ಪಾತ್ರಕ್ಕೆ ಮಹತ್ವ ಇರಬೇಕು ಎಂದು ಕೂಡ ಫ್ಯಾನ್ಸ್ ಬಯಸುತ್ತಾರೆ. ಆದರೆ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ದಗ್ಗುಬಾಟಿ ವೆಂಕಟೇಶ್​ ಅವರ ಪಾತ್ರಕ್ಕೆ ಹೆಚ್ಚು ಸ್ಕೋಪ್​ ಸಿಕ್ಕಿಲ್ಲ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Kisi Ka Bhai Kisi Ki Jaan: ‘ವಯಸ್ಸಾದವರ ಮೇಲೆ ಸಲ್ಮಾನ್​ ಖಾನ್​ ಕೈ ಎತ್ತಲ್ಲ’: ಜಗಪತಿ ಬಾಬು

ಬಹುತೇಕ ದೃಶ್ಯಗಳಲ್ಲಿ ದಗ್ಗುಬಾಟಿ ವೆಂಕಟೇಶ್​ ಅವರ ಬದಲಿಗೆ ಸಲ್ಮಾನ್​ ಖಾನ್ ಅವರೇ ಅಬ್ಬರಿಸಿದ್ದಾರೆ. ಕ್ಲೈಮ್ಯಾಕ್ಸ್​ನಲ್ಲಿ ಸಲ್ಮಾನ್​ ಖಾನ್​ ಒಬ್ಬರೇ ಎಲ್ಲ ವಿಲನ್​ಗಳನ್ನು ಸೆದೆಬಡಿಯುತ್ತಾರೆ. ಟಾಲಿವುಡ್​ನಲ್ಲಿ ಸ್ಟಾರ್​ಡಮ್​ ಇರುವಂತಹ ಕಲಾವಿದ ವೆಂಕಟೇಶ್​ ಅವರನ್ನು ಬಾಲಿವುಡ್​ ಸಿನಿಮಾದಲ್ಲಿ ಈ ರೀತಿಯಾಗಿ ತೋರಿಸಿರುವುದು ಸರಿಯಲ್ಲ ಎಂಬ ಚರ್ಚೆ ಅಭಿಮಾನಿಗಳ ವಲಯದಲ್ಲಿ ನಡೆಯುತ್ತಿದೆ.

ಇದನ್ನೂ ಓದಿ: Salman Khan: ಒಂದು ದಿನದ ಮಟ್ಟಿಗೆ ತಮ್ಮ ಪ್ರೀತಿಯ ವಸ್ತುವನ್ನು ಆಮಿರ್​ ಖಾನ್​ಗೆ ನೀಡಿದ ಸಲ್ಮಾನ್​ ಖಾನ್​

ಈದ್ ಸಂದರ್ಭದಲ್ಲಿ ಸಲ್ಮಾನ್ ಖಾನ್ ಚಿತ್ರಗಳು ರಿಲೀಸ್ ಆಗುವುದು ವಾಡಿಕೆ. ಅದೇ ರೀತಿ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ರಂಜಾನ್ ಸಂದರ್ಭದಲ್ಲಿ (ಏಪ್ರಿಲ್ 21) ರಿಲೀಸ್ ಆಯಿತು. ಮೊದಲ ದಿನ ಈ ಚಿತ್ರ 15 ಕೋಟಿ ರೂಪಾಯಿ ಗಳಿಕೆ ಮಾಡಿತು. ಸಾಮಾನ್ಯವಾಗಿ ಸಲ್ಮಾನ್ ಖಾನ್ ಚಿತ್ರದ ಮೊದಲ ದಿನದ ಗಳಿಕೆ 25 ಕೋಟಿ ರೂಪಾಯಿ ಮೇಲಿರುತ್ತಿತ್ತು. ಹೀಗಾಗಿ, ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಚಿತ್ರದ ಗಳಿಕೆಯನ್ನು ಸಾಧಾರಣ ಗಳಿಕೆ ಎಂದು ಬಾಕ್ಸ್ ಆಫೀಸ್ ಪಂಡಿತರು ಕರೆದರು.

ಶನಿವಾರ (ಏಪ್ರಿಲ್ 23) ಈ ಚಿತ್ರ 25.75 ಕೋಟಿ ರೂಪಾಯಿ ಗಳಿಸಿದೆ. ಭಾನುವಾರ ಚಿತ್ರದ ಗಳಿಕೆ ಮತ್ತಷ್ಟು ಹೆಚ್ಚಿದೆ. ಈ ಸಿನಿಮಾ ಭಾನುವಾರ 26.61 ಕೋಟಿ ರೂಪಾಯಿ ಹಾಗೂ ಸೋಮವಾರ 10.17 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 78.34 ಕೋಟಿ ರೂಪಾಯಿ ದಾಟಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:24 pm, Tue, 25 April 23

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?