AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶವವಾಗಿ ಪತ್ತೆಯಾದ ಡ್ಯಾನ್ಸರ್; ರಿತೇಶ್ ದೇಶಮುಖ್ ಸಿನಿಮಾ ಶೂಟಿಂಗ್ ವೇಳೆ ಅವಘಡ

‘ರಾಜಾ ಶಿವಾಜಿ’ ಸಿನಿಮಾದ ಚಿತ್ರೀಕರಣದ ವೇಳೆ ದುರ್ಘಟನೆ ನಡೆದಿದೆ. ಶೂಟಿಂಗ್ ವೇಳೆ ಡ್ಯಾನ್ಸರ್ ಒಬ್ಬರು ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಎರಡು ದಿನಗಳ ಬಳಿಕ ಅವರ ಶವ ಪತ್ತೆಯಾಗಿದೆ. ರಿತೇಶ್ ದೇಶಮುಖ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಡ್ಯಾನ್ಸರ್ ಸಾವಿನ ನಂತರ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ.

ಶವವಾಗಿ ಪತ್ತೆಯಾದ ಡ್ಯಾನ್ಸರ್; ರಿತೇಶ್ ದೇಶಮುಖ್ ಸಿನಿಮಾ ಶೂಟಿಂಗ್ ವೇಳೆ ಅವಘಡ
Riteish Deshmukh
ಮದನ್​ ಕುಮಾರ್​
|

Updated on: Apr 25, 2025 | 9:23 PM

Share

ಸಿನಿಮಾದ ಶೂಟಿಂಗ್ ವೇಳೆ ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು. ಅಪಾಯಕಾರಿ ಲೊಕೇಷನ್​ಗಳಲ್ಲಿ ಚಿತ್ರೀಕರಣ ಮಾಡುವಾಗ ಸ್ವಲ್ಪ ಮೈಮರೆತರೂ ಪ್ರಾಣಕ್ಕೆ ಹಾನಿ ಆಗುತ್ತದೆ. ಈ ಮೊದಲು ಅನೇಕ ಚಿತ್ರತಂಡಗಳು ಇದರಿಂದ ಸಂಕಷ್ಟಕ್ಕೆ ಸಿಲುಕಿದ್ದುಂಟು. ಈಗ ರಿತೇಶ್ ದೇಶಮುಖ್ (Riteish Deshmukh) ನಟನೆಯ ‘ರಾಜಾ ಶಿವಾಜಿ’ ಸಿನಿಮಾತಂಡದಲ್ಲಿ ಕೂಡ ಇಂಥದ್ದೇ ಅವಘಡ ಸಂಭವಿಸಿದೆ. 26 ವರ್ಷದ ಡ್ಯಾನ್ಸರ್ (Dancer) ಒಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. 2 ದಿನಗಳ ಕಳೆದ ಬಳಿಕ ಅವರ ಶವ ಪತ್ತೆ ಆಗಿದೆ. ಈ ಅವಘಡ ಸಂಭವಿಸಿದ ಬಳಿಕ ‘ರಾಜಾ ಶಿವಾಜಿ’ (Raja Shivaji) ಚಿತ್ರದ ಶೂಟಿಂಗ್ ನಿಲ್ಲಿಸಲಾಗಿದೆ.

ಎರಡು ದಿನಗಳ ಹಿಂದೆ ಸತಾರಾ ಜಿಲ್ಲೆಯಲ್ಲಿ ‘ರಾಜಾ ಶಿವಾಜಿ’ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿತ್ತು. ಕೃಷ್ಣ ಮತ್ತು ವೆನ್ನಾ ನದಿಯ ಸಂಗಮದಲ್ಲಿ ಶೂಟಿಂಗ್ ನಡೆಯುತ್ತಿತ್ತು. ಈ ಚಿತ್ರೀಕರಣದಲ್ಲಿ ಡ್ಯಾನ್ಸರ್ ಸೌರಭ್ ಶರ್ಮಾ ಕೂಡ ಭಾಗಿಯಾಗಿದ್ದರು. ಶೂಟಿಂಗ್ ವೇಳೆ ಕೃಷ್ಣ ನದಿ ಬಳಿ ತೆರಳಿದ ಸೌರಭ್ ಅವರು ಕೊಚ್ಚಿಕೊಂಡು ಹೋದರು. 2 ದಿನಗಳ ನಂತರ ಅವರು ಶವವಾಗಿ ಪತ್ತೆಯಾಗಿದ್ದಾರೆ.

‘ರಾಜಾ ಶಿವಾಜಿ’ ಸಿನಿಮಾದ ಚಿತ್ರೀಕರಣಕ್ಕಾಗಿ ಡ್ಯಾನ್ಸರ್​ಗಳು ಬಣ್ಣದ ಪೌಡರ್ ಹಚ್ಚಿಕೊಂಡಿದ್ದರು. ಅದನ್ನು ತೊಳೆದುಕೊಳ್ಳಲು ಡ್ಯಾನ್ಸರ್ ಸೌರಭ್ ಅವರು ಕೃಷ್ಣ ನದಿಗೆ ಇಳಿದಿದ್ದರು. ಆಗ ಅವರು ಆಯ ತಪ್ಪಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಕೂಡಲೇ ರಕ್ಷಣಾ ತಂಡಕ್ಕೆ ಮಾಹಿತಿ ನೀಡಲಾಯಿತು. ಆದರೂ ಕೂಡ ಸೌರಭ್ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ
Image
ಅಂಗಾಗ ದಾನ ಮಾಡುವ ಘೋಷಣೆ ಮಾಡಿದ ಜೆನಿಲಿಯಾ-ರಿತೇಷ್
Image
ಬೆಂಗಳೂರು ಲಿಫ್ಟ್​ನಲ್ಲಿ ಆದ ಆ ಘಟನೆಯನ್ನು ರಿತೇಶ್ ಎಂದಿಗೂ ಮರೆಯಲ್ಲ
Image
ಮತ್ತೊಮ್ಮೆ ತೆಲುಗು ಸಿನಿಮಾ ಆಯ್ದುಕೊಂಡ ರಿತೇಶ್ ದೇಶ್​ಮುಖ್
Image
Riteish Deshmukh: ‘ನಾನು ಅಂಥ ಸಿನಿಮಾಗಳನ್ನು ಮಾಡಿದ್ದೀನಿ, ಆದರೆ ನಾಚಿಕೆ ಅನಿಸಿಲ್ಲ’: ರಿತೇಶ್​ ದೇಶಮುಖ್​ ನೇರನುಡಿ

ಇದನ್ನೂ ಓದಿ: ನಟಿ ಜೆನಿಲಿಯಾ ಮತ್ತೆ ಪ್ರೆಗ್ನೆಂಟ್​ ಎಂದವರಿಗೆ ಉತ್ತರ ಕೊಟ್ಟ ರಿತೇಶ್​

ಅಪಘಾತದಿಂದ ಸೌರಭ್ ಶರ್ಮಾ ಸಾವು ಸಂಭವಿಸಿದೆ ಎಂದು ಸತಾರಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಈ ದುರ್ಘಟನೆ ನಡೆದಿದ್ದರಿಂದ ‘ರಾಜಾ ಶಿವಾಜಿ’ ಸಿನಿಮಾದ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ. ರಿತೇಶ್ ದೇಶಮುಖ್ ಅವರೇ ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಅವರ ಒಡೆತನದ ‘ಮುಂಬೈ ಫಿಲ್ಮ್ ಕಂಪನಿ’ ಮೂಲಕ ಈ ಚಿತ್ರ ನಿರ್ಮಾಣ ಆಗುತ್ತಿದೆ.

ಮರಾಠ ರಾಜ ಛತ್ರಪತಿ ಶಿವಾಜಿ ಜೀವನದ ವಿವರಗಳನ್ನು ಆಧರಿಸಿ ‘ರಾಜಾ ಶಿವಾಜಿ’ ಸಿನಿಮಾ ಮೂಡಿಬರುತ್ತಿದೆ. ಮುಖ್ಯಪಾತ್ರದಲ್ಲಿ ರಿತೇಶ್ ದೇಶಮುಖ್ ನಟಿಸುತ್ತಿದ್ದಾರೆ. ಭಾಗ್ಯಶ್ರೀ ಕೂಡ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹಿಂದಿ ಮತ್ತು ಮರಾಠಿಯಲ್ಲಿ ‘ರಾಜಾ ಶಿವಾಜಿ’ ಚಿತ್ರ ಸಿದ್ಧವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?