AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

19ನೇ ವಯಸ್ಸಿಗೆ ‘ದಂಗಲ್’ ನಟಿ ಸುಹಾಸಿನಿ ಭಟ್ನಾಗರ್ ನಿಧನ

Suhasini Bhatnagar: ‘ದಂಗಲ್’ ಸಿನಿಮಾದಲ್ಲಿ ನಟಿಸಿದ್ದ ಬಾಲಕಿ ಸುಹಾಸಿನಿ ಭಟ್ನಾಗರ್ ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 19 ವರ್ಷ ವಯಸ್ಸಾಗಿತ್ತು.

19ನೇ ವಯಸ್ಸಿಗೆ ‘ದಂಗಲ್’ ನಟಿ ಸುಹಾಸಿನಿ ಭಟ್ನಾಗರ್ ನಿಧನ
ಮಂಜುನಾಥ ಸಿ.
|

Updated on:Feb 17, 2024 | 5:58 PM

Share

ದಂಗಲ್’ (Dangal) ಸಿನಿಮಾದಲ್ಲಿ ಬಾಲನಟಿಯಾಗಿ ನಟಿಸಿದ್ದ ಸುಹಾಸಿನಿ ಭಟ್ನಾಗರ್ ಫೆಬ್ರವರಿ 17 ರಂದು ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 19 ವರ್ಷ ವಯಸ್ಸಾಗಿತ್ತು. ಸುಹಾಸಿನಿ ಅವರು ಕಳೆದ ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಫೆಬ್ರವರಿ 17ರಂದು ನಿಧನ ಹೊಂದಿದ್ದಾರೆ. ಸೂಪರ್ ಹಿಟ್ ಸಿನಿಮಾ ‘ದಂಗಲ್’ನಲ್ಲಿ ಆಮಿರ್ ಖಾನ್​ರ ಪುತ್ರಿಯ ಪಾತ್ರದಲ್ಲಿ ನಟಿಸಿದ್ದರು.

ಹರಿಯಾಣಾದ ಫರೀದಾಬಾದ್​ನವರಾದ ಸುಹಾಸಿನಿ ಭಟ್ನಾಗರ್ ಸಣ್ಣ ವಯಸ್ಸಿನಲ್ಲಿಯೇ ಹಲವು ಜಾಹೀರಾತುಗಳಲ್ಲಿ ನಟಿಸಿದ್ದರು. ಆಮಿರ್ ಖಾನ್ ನಟನೆಯ ‘ದಂಗಲ್’ ಸಿನಿಮಾನಲ್ಲಿ ಬಬಿತಾ ಪೋಗಟ್​ ಎಳೆಯ ವಯಸ್ಸಿನ ಪಾತ್ರದಲ್ಲಿ ನಟಿಸಿದ್ದರು. ‘ದಂಗಲ್’ ಸಿನಿಮಾಕ್ಕೆ ಸುಹಾಸಿಯನ್ನು ಆಯ್ಕೆ ಮಾಡಿದ್ದ ಕಾಸ್ಟಿಂಗ್ ನಿರ್ದೇಶಕ ಮುಖೇಶ್ ಚಬ್ರಾ ಮಾತನಾಡಿ, ‘11 ಸಾವಿರ ಬಾಲಕಿಯರನ್ನು ಆಡಿಷನ್ ಮಾಡಲಾಗಿತ್ತು. ಅದರಲ್ಲಿ ಸುಹಾಸಿನಿ ಬಬಿತಾರ ಸಣ್ಣ ವಯಸ್ಸಿನ ಪಾತ್ರಕ್ಕೆ ಆಯ್ಕೆ ಆಗಿದ್ದರು’ ಎಂದು ನೆನಪು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ ಬಗ್ಗೆ ನಟ ಆಮಿರ್ ಖಾನ್ ಮಾತು, ವಿದ್ಯಾರ್ಥಿಗಳು ಫುಲ್ ಖುಷ್

ಸುಹಾಸಿನಿ ನಿಧನದ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ವ್ಯಕ್ತಪಡಿಸಿರುವ ಆಮಿರ್ ಖಾನ್ ಪ್ರೊಡಕ್ಷನ್ಸ್, ‘ಸುಹಾಸಿನಿಯ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಸುಹಾಸಿನಿಯ ತಾಯಿ ಪೂಜಾ ಹಾಗೂ ಅವರ ಇಡೀ ಕುಟುಂಬಕ್ಕೆ ನಮ್ಮ ತೀವ್ರ ಸಂತಾಪಗಳು. ಸುಹಾಸಿನಿ ಅದ್ಭುತವಾದ ಹುಡುಗಿ, ಬಹಳ ಒಳ್ಳೆಯ ಟೀಂ ಪ್ಲೇಯರ್, ಎಲ್ಲರೊಟ್ಟಿಗೆ ಚೆನ್ನಾಗಿ ಬೆರೆಯುತ್ತಿದ್ದರು. ಅವರಿಲ್ಲದೆ ‘ದಂಗಲ್’ ಅಪೂರ್ಣ ಎನಿಸಿಕೊಳ್ಳುತ್ತದೆ. ಸುಹಾಸಿನಿ ನಮ್ಮ ಎದೆಗಳಲ್ಲಿ ಸ್ಟಾರ್ ಆಗಿ ಎಂದಿಗೂ ನೆಲೆಸಿರುತ್ತಾರೆ’ ಎಂದು ಟ್ವೀಟ್ ಮಾಡಿದ್ದಾರೆ.

ಸುಹಾಸಿನಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾಲಿಗೆ ಗಾಯ ಮಾಡಿಕೊಂಡಿದ್ದಾಗ ಅವರಿಗೆ ನೀಡಲಾದ ಔಷಧದಿಂದ ಪ್ರತಿಕೂಲ ಪ್ರತಿಕ್ರಿಯೆ ಉಂಟಾಗಿ ಅವರು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗುತ್ತಿದೆ. ಕಳೆದ ಕೆಲವು ದಿನಗಳಿಂದಲೂ ಏಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಂತೆ. ಕೊನೆಗೆ ಫೆಬ್ರವರಿ 17ರಂದು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:56 pm, Sat, 17 February 24

ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​
ಏರ್ಪೋಟ್ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿದೆ ಟೋಲ್ ಬೂತ್
ಏರ್ಪೋಟ್ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿದೆ ಟೋಲ್ ಬೂತ್