AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

252 ಕೋಟಿ ರೂ. ಡ್ರಗ್ ಕೇಸ್​ನಲ್ಲಿ ಶ್ರದ್ಧಾ ಕಪೂರ್ ಹೆಸರು; ಇದೆ ದಾವೂದ್ ಲಿಂಕ್

Drug Case: ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ 252 ಕೋಟಿ ರೂ. ಡ್ರಗ್ಸ್ ಪ್ರಕರಣದಲ್ಲಿ ನಟಿ ಶ್ರದ್ಧಾ ಕಪೂರ್, ಸಿದ್ಧಾಂತ್ ಕಪೂರ್ ಸೇರಿದಂತೆ ಹಲವು ಬಾಲಿವುಡ್ ಸೆಲೆಬ್ರಿಟಿಗಳ ಹೆಸರು ತಳುಕು ಹಾಕಿಕೊಂಡಿದೆ. ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದು, ಶೀಘ್ರ ಶ್ರದ್ಧಾ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. 2022ರ 122 ಕೆಜಿ ಎಂಡಿ ಡ್ರಗ್ಸ್ ವಶ ಪ್ರಕರಣದಿಂದ ಈ ಜಾಲ ಬಯಲಾಗಿದೆ.

252 ಕೋಟಿ ರೂ. ಡ್ರಗ್ ಕೇಸ್​ನಲ್ಲಿ ಶ್ರದ್ಧಾ ಕಪೂರ್ ಹೆಸರು; ಇದೆ ದಾವೂದ್ ಲಿಂಕ್
ಶ್ರದ್ಧಾ ಕಪೂರ್
ರಾಜೇಶ್ ದುಗ್ಗುಮನೆ
|

Updated on: Nov 15, 2025 | 6:59 AM

Share

ಭೂಗತ ಲೋಕದ ಪಾತಕಿ ದಾವೂದ್ ಇಬ್ರಾಹಿಂಗೆ (Dawood Ibrahim) ಸಂಬಂಧಿಸಿದ 252 ಕೋಟಿ ರೂಪಾಯಿ ಡ್ರಗ್ ಕೇಸ್​ನಲ್ಲಿ ನಟಿ ಶ್ರದ್ಧಾ ಕಪೂರ್, ಅವರ ಸಹೋದರ ಸಿದ್ಧಾಂತ್ ಕಪೂರ್ ಸೇರಿದಂತೆ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳ ಹೆಸರು ತಳುಕು ಹಾಕಿಕೊಂಡಿದೆ. ಈ ಪ್ರಕರಣದಲ್ಲಿ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೀಘ್ರವೇ ಶ್ರದ್ಧಾ ಅವರನ್ನು ಕರೆಸಿ ವಿಚಾರಣೆ ನಡೆಸೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ.

ಬಾಲಿವುಡ್​ ಖ್ಯಾತ ನಟಿ ನೋರಾ ಫತೇಹಿ, ಇನ್​ಫ್ಲ್ಯುಯೆನ್ಸರ್ ಓರಿ, ನಿರ್ದೇಶಕರಾದ ಅಬ್ಬಾಸ್-ಮುಸ್ತಾನ್, ಇತ್ತೀಚೆಗೆ ಹತ್ಯೆಗೆ ಒಳಗಾದ ಬಾಬಾ ಸಿದ್ಧಿಕಿ ಅವರ ಪುತ್ರ ಜೇಶನ್ ಸಿದ್ದಿಕಿ ತನಿಖೆಗೆ ಒಳಪಡಬೇಕಿದೆ. ತನಿಖಾಧಿಕಾರಿಗಳ ಪ್ರಕಾರ, ಮುಂಬೈ ಮತ್ತು ದುಬೈನಲ್ಲಿ ಸಲೀಂ ಸೋಹಿಲ್ ಶೇಖ್ ಪಾರ್ಟಿಗಳನ್ನು ಆಯೋಜನೆ ಮಾಡಿದ್ದ. ಈತ ಪರಾರಿಯಾಗಿರುವ ಕಳ್ಳಸಾಗಣೆದಾರ ಸಲೀಂ ಡೋಲಾನ ಆಪ್ತ ಎಂದು ನಂಬಲಾಗಿದೆ. ಸಲೀಂ, ದಾವೂದ್‌ನ ಪ್ರಮುಖ ಸಹಚರರಲ್ಲಿ ಒಬ್ಬ.

ಇತ್ತೀಚೆಗೆ ಮಾದಕ ನಿಗ್ರಹ ದಳದವರು ಕೋರ್ಟ್​ಗೆ ಈ ಬಗ್ಗೆ ರಿಮಾಂಡ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಅವರು ಡ್ರಗ್ ಪಾರ್ಟಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಪಾರ್ಟಿಗಳಲ್ಲಿ ದಾವೂದ್ ಇಬ್ರಾಹಿಂ ಸಹೋದರಿ ದಿವಂಗತ ಹಸೀನಾ ಪಾರ್ಕರ್ ಮಗ ಆಲಿಶ್ ಪಾರ್ಕರ್ ಇದರಲ್ಲಿ ಭಾಗವಹಿಸುತ್ತಿದ್ದ.

ಶೇಖ್ ಹೇಳಿಕೆಗಳನ್ನು ಇನ್ನೂ ಪರಿಶೀಲಿಸಲಾಗಿಲ್ಲ. ಈ ತನಿಖೆ ಪ್ರಾಥಮಿಕ ಹಂತದಲ್ಲಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗತ್ಯವಿದ್ದರೆ ಮಾತ್ರ ಹೆಸರಿಸಲಾದ ಸೆಲೆಬ್ರಿಟಿಗಳನ್ನು ವಿಚಾರಣೆಗೆ ಕರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಲೀಂ ಸೋಹಿಲ್ ಶೇಖ್ ವಿಚಾರಣೆಯಿಂದ ಮತ್ತಷ್ಟು ಸ್ಫೋಟಕ ಮಾಹಿತಿ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಈ ನಟಿಯರ ಮೇಲಿತ್ತು ದಾವೂದ್ ಇಬ್ರಾಹಿಂ ಕಣ್ಣು; ಕೆಲವರು ಕಾಣೆಯೇ ಆದರು..

2022ರಲ್ಲಿ ಮುಂಬೈ ಕ್ರೈಮ್ ಬ್ರ್ಯಾಂಚ್ ಮುಂಬೈ ಸಮೀಪ 122 ಕೆಜಿ ಎಂಡಿ (ಮೆಫೆಡ್ರೋನ್ ಡ್ರಗ್) ವಶಕ್ಕೆ ಪಡೆದಿತ್ತು. ಇದರ ಬೆಲೆ 252 ಕೋಟಿ ರೂಪಾಯಿ ಎನ್ನಲಾಗಿದೆ. ಈ ಪ್ರಕರಣದ ಬೆನ್ನು ಹತ್ತಿದಾಗ ಸಾಕಷ್ಟು ವಿಚಾರಗಳು, ಸಾಕಷ್ಟು ಸೆಲೆಬ್ರಿಟಿಗಳ ಹೆಸರು ತಳುಕು ಹಾಕಿಕೊಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ