AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ-ರಣವೀರ್ ಮಧ್ಯೆ ಯಾವುದೂ ಸರಿ ಇಲ್ಲ ಎಂದವರಿಗೆಲ್ಲ ಬಿತ್ತು ಬಲವಾದ ಏಟು

Deepika Padukone Pregnancy: ದೀಪಿಕಾ-ರಣವೀರ್ ಸಂಸಾರ ಸರಿ ಇಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಈ ಎಲ್ಲಾ ಊಹಾಪೋಹಗಳಿಗೆ ಉತ್ತರ ನೀಡುವಂತೆ ದಂಪತಿಗಳು ತಮ್ಮ ಎರಡನೇ ಮಗುವಿನ ಆಗಮನದ ಸುದ್ದಿಯನ್ನು ಘೋಷಿಸಿದ್ದಾರೆ. ಸೆಲೆಬ್ರಿಟಿಗಳ ಜೀವನವನ್ನು ಕೇವಲ ಬಾಹ್ಯ ಸಂಗತಿಗಳಿಂದ ನಿರ್ಧರಿಸಬಾರದು ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆ.

ದೀಪಿಕಾ-ರಣವೀರ್ ಮಧ್ಯೆ ಯಾವುದೂ ಸರಿ ಇಲ್ಲ ಎಂದವರಿಗೆಲ್ಲ ಬಿತ್ತು ಬಲವಾದ ಏಟು
ರಣವೀರ್​-ದೀಪಿಕಾ
ರಾಜೇಶ್ ದುಗ್ಗುಮನೆ
|

Updated on: Apr 20, 2026 | 7:00 AM

Share

‘ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಸಂಸಾರ ಸರಿ ಇಲ್ಲ’-ಹೀಗೊಂದು ವಿಷಯ ಇತ್ತೀಚೆಗೆ ಬಲವಾಗಿ ಚರ್ಚೆ ಆಗಿತ್ತು. ಇದಕ್ಕೆ ಕಾರಣವೂ ಇದೆ. ರಣವೀರ್ ಸಿಂಗ್ ಅವರು ‘ಧುರಂಧರ್ 2’ ಯಶಸ್ಸಿನ ಅಲೆಯಲ್ಲಿ ತೇಲಿದರೂ ದೀಪಿಕಾ ಪಡುಕೋಣೆ ಸೋಶಿಯಲ್ ಮೀಡಿಯಾದಲ್ಲಿ ಖುಷಿ ಹೊರಹಾಕಿರಲಿಲ್ಲ. ಇದು ಚರ್ಚೆಗೆ ಕಾರಣ ಆಗಿತ್ತು. ರಣವೀರ್-ದೀಪಿಕಾ ದೂರ ಆಗುತ್ತಾರೆ ಎಂದೆಲ್ಲ ಮಾತನಾಡಿಕೊಂಡಿದ್ದೇ ಬಂತು. ಆದರೆ, ಹಾಗಾಗಲೇ ಇಲ್ಲ. ದೀಪಿಕಾ (Deepika Padukone) ಎರಡನೇ ಬಾರಿಗೆ ತಾಯಿ ಆಗುತ್ತಿರುವುದಾಗಿ ಘೋಷಿಸಿದ್ದಾರೆ. ಇವರ ಸಂಬಂಧ ಸರಿ ಇಲ್ಲ ಎಂದವರಿಗೆಲ್ಲ ಭಾರೀ ಮುಖಭಂಗ ಆಗಿದೆ.

ದೀಪಿಕಾ ಎಡಪಂಕ್ತೀಯ ಸಿದ್ಧಾಂತಗಳನ್ನು ನಂಬುತ್ತಾರೆ. ಅದಕ್ಕೆ ಈ ಮೊದಲು ಅವರು ಜೆಎನ್​ಯು ಯುನಿವರ್ಸಿಟಿಗೆ ತೆರಳಿ ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತಮ್ಮ ಬೆಂಬಲ ಕೊಟ್ಟಿದ್ದರು. ರಣವೀರ್ ಸಿಂಗ್ ಅವರು ಇತ್ತೀಚೆಗೆ ಆರ್​​ಎಸ್​ಎಸ್ ಕಚೇರಿಗೆ ತೆರಳಿದ್ದರು. ಈ ಘಟನೆಯಿಂದ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಅವರ ಸಿದ್ಧಾಂತ ಬೇರೆ ಎಂಬುದು ಅಭಿಮಾನಿಗಳಿಗೆ ಸ್ಪಷ್ಟವಾಗಿದೆ. ಆದರೆ, ಇದು ಅವರ ಸಂಸಾರದ ಮೇಲೆ ಯಾವುದೇ ಪರಿಣಾಮ ಬಿರಿಲ್ಲ.

ದೀಪಿಕಾ ಹಾಗೂ ರಣವೀರ್ ಅವರನ್ನು ಇಷ್ಟಪಡದ ಕೆಲವರು ಇತ್ತೀಚೆಗೆ ಬಾಯಿಗೆ ಬಂದಂತೆ ಮಾತನಾಡಿದ್ದರು. ‘ರಣವೀರ್-ದೀಪಿಕಾ ಸಿದ್ಧಾಂತ, ಆಲೋಚನೆಗಳು ಹೊಂದಿಕೆ ಆಗುತ್ತಿಲ್ಲ. ಇವರು ಬೇರೆ ಆಗುತ್ತಾರೆ’ ಎಂದೆಲ್ಲ ಕೆಲವರು ವದಂತಿ ಹಬ್ಬಿಸಿದ್ದು ಇದೆ. ಆದರೆ, ಇದು ಸುಳ್ಳು ಎಂಬುದು ಈಗ ಸ್ಪಷ್ಟವಾಗಿದೆ. ಈ ರೀತಿಯ ಸುದ್ದಿ ಹಬ್ಬಿಸಿದವರಿಗೆ ದೀಪಿಕಾ ದೊಡ್ಡ ಏಟು ಕೊಟ್ಟಿದ್ದಾರೆ. ಎಲ್ಲಾ ಸೆಲೆಬ್ರಿಟಿಗಳು ಎಲ್ಲಾ ವಿಷಯವನ್ನೂ ಹೇಳಿಕೊಳ್ಳುವುದಿಲ್ಲ. ಹಾಗಂದ ಮಾತ್ರಕ್ಕೆ ಅವರ ಜೀವನ ಸರಿ ಇಲ್ಲ ಎಂದು ನಿರ್ಧರಿಸಬಾರದು. ರಣವೀರ್-ದೀಪಿಕಾ ಪ್ರಕರಣ ಇದಕ್ಕೆ ಒಳ್ಳೆಯ ಉದಾಹರಣೆ.

ಇದನ್ನೂ ಓದಿ: ದೀಪಿಕಾ ಪಡುಕೋಣೆ ಮತ್ತೆ ಪ್ರೆಗ್ನೆಂಟ್; 2ನೇ ಮಗುವಿನ ನಿರೀಕ್ಷೆಯಲ್ಲಿ ರಣವೀರ್ ಸಿಂಗ್

ದೀಪಿಕಾ ಹಾಗೂ ರಣವೀರ್ ಅವರು ಭಾನುವಾರ ಪ್ರೆಗ್ನೆನ್ಸಿ ಘೋಷಣೆ ಮಾಡಿದರು. ಮಗಳು ದುವಾ ಬಳಿ ಪ್ರೆಗ್ನೆನ್ಸಿ ಕಿಟ್ ಹಿಡಿಸಿ ಈ ವಿಷಯ ಅಭಿಮಾನಿಗಳಿಗೆ ತಿಳಿಸಿದರು.  ಈಗ ದೀಪಿಕಾ ಎರಡನೇ ಬಾರಿಗೆ ತಾಯಿ ಆಗುತ್ತಿದ್ದು ಎಲ್ಲರೂ ಶುಭ ಕೋರುತ್ತಿದ್ದಾರೆ. ಅವರು ಮೊದಲು ಒಪ್ಪಿಕೊಂಡ ಸಿನಿಮಾ ಕೆಲಸ ಪೂರ್ಣಗೊಳಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!