Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹ ಆದ ಐದು ವರ್ಷದ ಬಳಿಕ ಮದುವೆ ವಿಡಿಯೋ ರಿವೀಲ್ ಮಾಡಿದ ದೀಪಿಕಾ-ರಣವೀರ್

‘ಕಾಫಿ ವಿತ್ ಕರಣ್’ ಎಂಟನೇ ಸೀಸನ್​ನ ಮೊದಲ ಎಪಿಸೋಡ್ ಹಾಟ್​​ಸ್ಟಾರ್​ನಲ್ಲಿ ರಿಲೀಸ್ ಆಗಿದೆ. ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಮೊದಲ ಬಾರಿಗೆ ಈ ಶೋಗೆ ಆಗಮಿಸಿದ್ದಾರೆ. ಈ ಎಪಿಸೋಡ್​ನಲ್ಲಿ ತಮ್ಮ ಲವ್ ಸ್ಟೋರಿ ಬಗ್ಗೆ ಈ ದಂಪತಿ ಹೇಳಿಕೊಂಡಿದ್ದಾರೆ.

ವಿವಾಹ ಆದ ಐದು ವರ್ಷದ ಬಳಿಕ ಮದುವೆ ವಿಡಿಯೋ ರಿವೀಲ್ ಮಾಡಿದ ದೀಪಿಕಾ-ರಣವೀರ್
ರಣವೀರ್-ದೀಪಿಕಾ
Follow us
ರಾಜೇಶ್ ದುಗ್ಗುಮನೆ
|

Updated on: Oct 26, 2023 | 11:04 AM

ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ (Deepika Padukone) 2018ರ ನವೆಂಬರ್ 14ರಂದು ಇಟಲಿಯಲ್ಲಿ ಮದುವೆ ಆದರು. ಇವರ ಮದುವೆ ನಡೆದು ಐದು ವರ್ಷ ಆಗಿದೆ. ಆದರೆ, ಇಲ್ಲಿಯವರೆಗೆ ಇವರು ವಿವಾಹದ ವಿಡಿಯೋ ರಿವೀಲ್ ಮಾಡಿರಲಿಲ್ಲ. ಇದಕ್ಕಾಗಿ ಫ್ಯಾನ್ಸ್ ಕಾಯುತ್ತಲೇ ಇದ್ದರು. ಇದೇ ಮೊದಲ ಬಾರಿಗೆ ಇವರ ಮದುವೆ ವಿಡಿಯೋ ರಿವೀಲ್ ಆಗಿದೆ. ‘ಕಾಫಿ ವಿತ್ ಕರಣ್ ಸೀಸನ್ 8’ರಲ್ಲಿ ವಿವಾಹದ ವಿಡಿಯೋ ಬಿಡುಗಡೆ ಮಾಡಲಾಗಿದೆ. ತಮ್ಮ ಲವ್​ ಸ್ಟೋರಿ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

‘ಕಾಫಿ ವಿತ್ ಕರಣ್’ ಎಂಟನೇ ಸೀಸನ್​ನ ಮೊದಲ ಎಪಿಸೋಡ್ ಹಾಟ್​​ಸ್ಟಾರ್​ನಲ್ಲಿ ರಿಲೀಸ್ ಆಗಿದೆ. ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಮೊದಲ ಬಾರಿಗೆ ಈ ಶೋಗೆ ಆಗಮಿಸಿದ್ದಾರೆ. ಈ ಎಪಿಸೋಡ್​ನಲ್ಲಿ ತಮ್ಮ ಲವ್ ಸ್ಟೋರಿ ಬಗ್ಗೆ ಈ ದಂಪತಿ ಹೇಳಿಕೊಂಡಿದ್ದಾರೆ. ಸದ್ಯ ಈ ಎಪಿಸೋಡ್ ಗಮನ ಸೆಳೆಯುತ್ತಿದೆ. ಈ ಎಪಿಸೋಡ್​ನಲ್ಲಿ ಮದುವೆ ವಿಡಿಯೋ ರಿವೀಲ್ ಆಗಿದೆ.

ವಿವಾಹದ ವಿಡಿಯೋದಲ್ಲಿ ರಣವೀರ್ ಸಿಂಗ್ ಹಾಗೂ ದೀಪಿಕಾ ಬಗ್ಗೆ ಕುಟುಂಬದವರು ಮಾತನಾಡಿದ್ದಾರೆ. ರಣವೀರ್ ಸಿಂಗ್ ಅವರು ಸಖತ್ ಎನರ್ಜಿಟಿಕ್ ಆಗಿರುತ್ತಾರೆ. ರಣವೀರ್ ಕುಟುಂಬದಲ್ಲಿ ಇರುವವರು ಎಲ್ಲರೂ ಸೈಲೆಂಟ್ ಅಂತೆ. ಆದರೆ, ರಣವೀರ್ ಮಾತ್ರ ಈ ರೀತಿ ವರ್ತಿಸುತ್ತಾರಂತೆ. ‘ನಾನು ದೀಪಿಕಾನ ಮದುವೆ ಆಗುತ್ತೇನೆ’ ಎಂದು ರಣವೀರ್ ಸಿಂಗ್ ಹೇಳಿದ್ದರಂತೆ. ನಂತರ ಇದು ನಿಜವಾಯಿತು. ಇಬ್ಬರೂ ಸಾಂಪ್ರದಾಯಿಕವಾಗಿ ಹಸೆಮಣೆ ಏರಿದ್ದಾರೆ.

ಇದನ್ನೂ ಓದಿ: ‘ಡಾನ್​ 3’ಗೆ ರಣವೀರ್ ಸಿಂಗ್ ಎಂಟ್ರಿ; ಶಾರುಖ್ ಖಾನ್ ಹೊರ ನಡೆದ ವಿಚಾರ ಖಚಿತವಾಯ್ತು

ರಣವೀರ್ ಸಿಂಗ್ ಹಾಗೂ ದೀಪಿಕಾ ಇಟಲಿಯಲ್ಲಿ ಮದುವೆ ಆದರು. ಆ ಬಳಿಕ ಬೆಂಗಳೂರು ಹಾಗೂ ಮುಂಬೈನಲ್ಲಿ ರಿಸೆಪ್ಷನ್ ಆಯೋಜನೆ ಮಾಡಲಾಗಿತ್ತು. ಇವರ ಮದುವೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗಿದೆ. ಈ ದಂಪತಿ ತಮ್ಮ ತಮ್ಮ ವೃತ್ತಿ ಬದುಕಿನಲ್ಲಿ ಬ್ಯುಸಿ ಆಗಿದ್ದಾರೆ. ಇವರನ್ನು ಮತ್ತೆ ತೆರೆಮೇಲೇ ಒಟ್ಟಾಗಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್
ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್