ರಣವೀರ್​ ಸಿಂಗ್​-ದೀಪಿಕಾ ಬೇರೆ ಆಗ್ತಾರಾ? ಫ್ಯಾನ್ಸ್​ ಆತಂಕಕ್ಕೆ ಕಾರಣವಾಯ್ತು ಆ ಒಂದು ಟ್ವೀಟ್​

Deepika Padukone | Ranveer Singh: ಈ ವಿಷಯಕ್ಕೆ ರಣವೀರ್​ ಸಿಂಗ್​ ಕಡೆಯಿಂದ ಉತ್ತರ ಸಿಕ್ಕಿದೆ. ಸದ್ಯ ದೀಪಿಕಾ ಪಡುಕೋಣೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ನಿರ್ಮಾಣ ಆಗಿದೆ.

ರಣವೀರ್​ ಸಿಂಗ್​-ದೀಪಿಕಾ ಬೇರೆ ಆಗ್ತಾರಾ? ಫ್ಯಾನ್ಸ್​ ಆತಂಕಕ್ಕೆ ಕಾರಣವಾಯ್ತು ಆ ಒಂದು ಟ್ವೀಟ್​
ರಣವೀರ್ ಸಿಂಗ್, ದೀಪಿಕಾ ಪಡುಕೋಣೆ
Follow us
| Updated By: ಮದನ್​ ಕುಮಾರ್​

Updated on:Sep 29, 2022 | 11:02 AM

ನಟಿ ದೀಪಿಕಾ ಪಡುಕೋಣೆ (Deepika Padukone) ಅವರಿಗೆ ಆರೋಗ್ಯ ಕೈ ಕೊಟ್ಟಿದೆ ಎಂಬ ಸುದ್ದಿ ಇತ್ತೀಚೆಗೆ ಕೇಳಿಬಂತು. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ತಿಳಿದು ಅಭಿಮಾನಿಗಳು ನಿರಾಳರಾಗಿದ್ದಾರೆ. ಅಷ್ಟರಲ್ಲಾಗಲೇ ಇನ್ನೊಂದು ಶಾಕಿಂಗ್​ ವಿಚಾರ ಹರಿದಾಡಲು ಆರಂಭಿಸಿದೆ. ಪತಿ ರಣವೀರ್​ ಸಿಂಗ್ (Ranveer Singh)​ ಜೊತೆಗಿನ ದಾಂಪತ್ಯಕ್ಕೆ ದೀಪಿಕಾ ಅಂತ್ಯ ಹಾಡಬಹುದು ಎಂದು ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಅದಕ್ಕೆಲ್ಲ ಕಾರಣ ಆಗಿರುವುದು ಒಂದೇ ಒಂದು ಟ್ವೀಟ್​. ‘ಬ್ರೇಕಿಂಗ್​! ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ನಡುವೆ ಎಲ್ಲವೂ ಸರಿ ಇಲ್ಲ’ ಎಂದು ಉಮೈರ್​ ಸಂಧು (Umair Sandhu) ಅವರ ಟ್ವಿಟರ್​ ಖಾತೆಯಲ್ಲಿ ಪೋಸ್ಟ್​ ಮಾಡಲಾಗಿದೆ. ಇದನ್ನು ನೋಡಿ ಅಭಿಮಾನಿಗಳಿಗೆ ಶಾಕ್​ ಆಗಿದೆ. ಅಷ್ಟಕ್ಕೂ ಯಾರು ಈ ಉಮೈರ್ ಸಂಧು? ಇಲ್ಲಿದೆ ಮಾಹಿತಿ..

ವಿದೇಶಿ ಸೆನ್ಸಾರ್​ ಮಂಡಳಿಯಲ್ಲಿ ಉಮೈರ್ ಸಂಧು ಸದಸ್ಯನಾಗಿದ್ದಾರೆ. ಭಾರತದ ಸಿನಿಮಾಗಳನ್ನು ಅವರು ವಿಮರ್ಶೆ ಮಾಡುತ್ತಾರೆ. ಆ ಮೂಲಕ ಅವರು ಸೋಶಿಯಲ್​ ಮೀಡಿಯಾದಲ್ಲಿ ಕೊಂಚ ಫೇಮಸ್​ ಆಗಿದ್ದಾರೆ. ಅವರ ಖಾತೆಯನ್ನು ಸಿನಿಪ್ರಿಯರು ಫಾಲೋ ಮಾಡುತ್ತಾರೆ. ಈಗ ಏಕಾಏಕಿ ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ಸಂಸಾರದ ಬಿರುಕಿನ ಬಗ್ಗೆ ಉಮೈರ್ ಸಂಧು ಟ್ವೀಟ್​ ಮಾಡಿರುವುದು ಫ್ಯಾನ್ಸ್​ ಆತಂಕಕ್ಕೆ ಕಾರಣ ಆಗಿದೆ.

ಇದನ್ನೂ ಓದಿ
Image
Ranveer Singh: ಮತ್ತೆ ಬೆತ್ತಲಾಗುವಂತೆ ರಣವೀರ್​ ಸಿಂಗ್​ಗೆ ಬೇಡಿಕೆ; ಈ ಬಾರಿ ಆಹ್ವಾನ ಬಂದಿರೋದು ಪ್ರಾಣಿಗಳಿಗೋಸ್ಕರ
Image
Ranveer Singh: ಬೆತ್ತಲೆ ಫೋಟೋ ಹಂಚಿಕೊಂಡ ರಣವೀರ್​ ಸಿಂಗ್​ ವಿರುದ್ಧ ಕೇಸ್​ ದಾಖಲಿಸಿದ ಮುಂಬೈ ಪೊಲೀಸರು
Image
Alia Bhatt: ‘ರಣವೀರ್​ ಸಿಂಗ್​ ಜತೆ ಏನು ಬೇಕಾದ್ರೂ ಮಾತಾಡ್ತೀನಿ’; ಮದುವೆ ಬಳಿಕ ಆಲಿಯಾ ಭಟ್​ ಅಚ್ಚರಿಯ ಹೇಳಿಕೆ
Image
Ranveer Singh: ರಣವೀರ್​ ಸಿಂಗ್​ ಒಟ್ಟು ಆಸ್ತಿ ಎಷ್ಟು? 2 ಸಿನಿಮಾ ಸೋತ ಮಾತ್ರಕ್ಕೆ ಕರಗಿಲ್ಲ ಸ್ಟಾರ್​ ನಟನ ನೂರಾರು ಕೋಟಿ ಸಂಪತ್ತು

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಈ ಕುರಿತು ರಣವೀರ್ ಸಿಂಗ್​ ಅವರಿಗೆ ನೇರವಾಗಿ ಪ್ರಶ್ನೆ ಮಾಡಲಾಗಿದೆ. ‘ನಾನು ಮತ್ತು ದೀಪಿಕಾ ಪಡುಕೋಣೆ 2012ರಲ್ಲಿ ಡೇಟಿಂಗ್​ ಮಾಡಲು ಆರಂಭಿಸಿದೆವು. 2022ಕ್ಕೆ ಹತ್ತು ವರ್ಷ ಆಯ್ತು’ ಎಂದು ಹೇಳುವ ಮೂಲಕ ತಾವಿಬ್ಬರೂ ಇನ್ನೂ ಅನ್ಯೋನ್ಯವಾಗಿಯೇ ಇದ್ದೇವೆ ಎಂದು ರಣವೀರ್​ ಸಿಂಗ್​ ಹೇಳಿದ್ದಾರೆ. ಆ ಉತ್ತರ ಕೇಳಿ ಅಭಿಮಾನಿಗಳಿಗೆ ಸಮಾಧಾನ ಆಗಿದೆ.

ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ಅವರದ್ದು ಲವ್​ ಕಮ್​ ಅರೇಂಜ್​ ಮ್ಯಾರೇಜ್​ ಹಲವು ವರ್ಷಗಳ ಕಾಲ ಪ್ರೀತಿಸಿದ್ದ ಅವರು 2018ರಲ್ಲಿ ಮದುವೆಯಾದರು. ಇಬ್ಬರೂ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ‘ಪದ್ಮಾವತ್​’, ‘ಬಾಜಿರಾವ್​ ಮಸ್ತಾನಿ’ ಮುಂತಾದ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸುವ ಮೂಲಕವೂ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಈ ವರ್ಷ ರಣವೀರ್​ ಸಿಂಗ್​ ಅವರಿಗೆ ಫಿಲ್ಮ್​ಫೇರ್​ ಪ್ರಶಸ್ತಿ ಸಿಕ್ಕಿತು. ಅದನ್ನು ಸ್ವೀಕರಿಸುವಾಗ ವೇದಿಕೆ ಮೇಲೆ ದೀಪಿಕಾರನ್ನೂ ಕರೆದರು. ‘ನನ್ನ ಯಶಸ್ಸಿನ ಗುಟ್ಟು ನನ್ನ ಪತ್ನಿ ದೀಪಿಕಾ ಪಡುಕೋಣೆ’ ಎಂದು ರಣವೀರ್​ ಹೇಳಿದ್ದ ವಿಡಿಯೋ ತುಣುಕು ವೈರಲ್​ ಆಗಿತ್ತು. ಈಗ ಇಬ್ಬರೂ ಬೇರೆ ಆಗುತ್ತಾರೆ ಎಂದು ಹರಡಿದ ಗಾಸಿಪ್​ಗೆ ಸದ್ಯ ದೀಪಿಕಾ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ನಿರ್ಮಾಣ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:01 am, Thu, 29 September 22

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ