AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ ಪಡುಕೋಣೆ ಬಿಕಿನಿ ಫೋಟೋಗಳು ಲೀಕ್​; ಶಾರುಖ್​ ಕೂಡ ಇದ್ದಾರೆ ಅಂತ ಪತ್ತೆಹಚ್ಚಿದ ಫ್ಯಾನ್ಸ್​

ದೀಪಿಕಾ ಪಡುಕೋಣೆ ಅವರನ್ನು ಬಿಕಿನಿ ಗೆಟಪ್​ನಲ್ಲಿ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ತುಂಬ ಹಾಟ್​ ಆಗಿ ಕಾಣಿಸುತ್ತಿದ್ದಾರೆ ಎಂದು ಅನೇಕರು ಹೇಳಿದ್ದಾರೆ.

ದೀಪಿಕಾ ಪಡುಕೋಣೆ ಬಿಕಿನಿ ಫೋಟೋಗಳು ಲೀಕ್​; ಶಾರುಖ್​ ಕೂಡ ಇದ್ದಾರೆ ಅಂತ ಪತ್ತೆಹಚ್ಚಿದ ಫ್ಯಾನ್ಸ್​
ದೀಪಿಕಾ ಪಡುಕೋಣೆ
Follow us
TV9 Web
| Updated By: ಮದನ್​ ಕುಮಾರ್​

Updated on:Mar 18, 2022 | 8:45 AM

ಸಿನಿಮಾ ಶೂಟಿಂಗ್​ ಮಾಡುವಾಗ ಎಷ್ಟು ಸಾಧ್ಯವೋ ಅಷ್ಟು ಗೌಪ್ಯತೆ ಕಾಪಾಡಿಕೊಳ್ಳಲಾಗುತ್ತದೆ. ಯಾವುದೇ ದೃಶ್ಯವೂ ಲೀಕ್​ ಆಗಬಾರದು ಎಂದು ನಿರ್ದೇಶಕರು ಎಚ್ಚರಿಕೆ ವಹಿಸುತ್ತಾರೆ. ಆದರೆ ಕೆಲವೊಮ್ಮೆ ಅವರ ಕೈ ಮೀರಿ ಫೋಟೋ ಮತ್ತು ವಿಡಿಯೋಗಳು ಲೀಕ್​ ಆಗಿಬಿಡುತ್ತವೆ. ಈಗ ‘ಪಠಾಣ್​’ (Pathaan Movie) ಚಿತ್ರತಂಡಕ್ಕೆ ಹಾಗೆಯೇ ಆಗಿದೆ. ವಿದೇಶದ ಲೊಕೇಷನ್​ಗಳನ್ನು ಈ ಸಿನಿಮಾದ ಶೂಟಿಂಗ್​ ಮಾಡಲಾಗುತ್ತಿದೆ. ಶಾರುಖ್​ ಖಾನ್​ (Shah Rukh Khan) ಈ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದು, ಅವರಿಗೆ ದೀಪಿಕಾ ಪಡುಕೋಣೆ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಶಾರುಖ್​ ಖಾನ್​ ಅವರು ಫೋಟೋಗಳು ಲೀಕ್​ ಆಗಿದ್ದವು. ಈಗ ದೀಪಿಕಾ ಪಡುಕೋಣೆ (Deepika Padukone) ಫೋಟೋಸ್​ ವೈರಲ್​ ಆಗಿವೆ. ಶೂಟಿಂಗ್​ ಸಂದರ್ಭದಲ್ಲಿ ಬಿಕಿನಿ ಧರಿಸಿ ಓಡಾಡುತ್ತಿರುವ ಅವರ ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದ ಅನೇಕ ಖಾತೆಗಳಲ್ಲಿ ಹಂಚಿಕೊಳ್ಳಲಾಗಿದೆ. ಇವುಗಳನ್ನು ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ. ಆದರೆ ಚಿತ್ರತಂಡಕ್ಕೆ ಬೇಸರ ಆಗಿದೆ. ‘ಪಠಾಣ್​’ ಚಿತ್ರದ ಮೇಲೆ ಅಭಿಮಾನಿಗಳಿಗೆ ದೊಡ್ಡಮಟ್ಟದ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡುತ್ತಿದ್ದಾರೆ. ಜಾನ್​ ಅಬ್ರಾಹಂ ಕೂಡ ಈ ಸಿನಿಮಾದಲ್ಲಿ ಒಂದು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಆ ಕಾರಣದಿಂದಲೂ ‘ಪಠಾಣ್​’ ಬಗ್ಗೆ ನಿರೀಕ್ಷೆ ಹೆಚ್ಚಿದೆ.

ಸ್ಪೇನ್​ನಲ್ಲಿ ಶೂಟಿಂಗ್​ ನಡೆಯುತ್ತಿರುವಾಗ ದೀಪಿಕಾ ಪಡುಕೋಣೆ ಅವರು ಬಿಕಿನಿ ಧರಿಸಿ ಕ್ಯಾಮೆರಾ ಎದುರಿಸಿದ್ದಾರೆ. ಇದು ‘ಪಠಾಣ್​’ ಸಿನಿಮಾದ ಹಾಡಿನ ಶೂಟಿಂಗ್​ ಎಂದು ಕೂಡ ಹೇಳಲಾಗುತ್ತಿದೆ. ಹಲವು ಫೋಟೋಗಳು ಲೀಕ್​ ಆಗಿವೆ. ದೀಪಿಕಾ ಪಡುಕೋಣೆ ಅವರನ್ನು ಬಿಕಿನಿ ಗೆಟಪ್​ನಲ್ಲಿ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಹಿನ್ನೆಲೆಯಲ್ಲಿ ಶಾರುಖ್​ ಖಾನ್​ ಕೂಡ ಇದ್ದಾರೆ ಎಂದು ಫ್ಯಾನ್ಸ್ ಪತ್ತೆ ಹಚ್ಚಿದ್ದಾರೆ. ದೀಪಿಕಾ ತುಂಬ ಹಾಟ್​ ಆಗಿ ಕಾಣಿಸುತ್ತಿದ್ದಾರೆ ಎಂದು ಅನೇಕರು ಹೇಳಿದ್ದಾರೆ. ‘ನಮಗೆ ಕಿಂಗ್​ಫಿಶರ್​ ಕ್ಯಾಲೆಂಡರ್​’ ನೆನಪಾಗುತ್ತಿದೆ ಎಂದು ಒಂದಷ್ಟು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ದೀಪಿಕಾ ಅವರ ನಟಿ ಆಗುವುದಕ್ಕೂ ಮುನ್ನ ಮಾಡೆಲ್​ ಆಗಿದ್ದರು. ಆಗ ಕಿಂಗ್​ಫಿಶರ್​ ಕ್ಯಾಲೆಂಡರ್​ಗಳ ಮೂಲಕ ಅವರು ಫೇಮಸ್​ ಆಗಿದ್ದರು. ಅದನ್ನು ಈಗ ಫ್ಯಾನ್ಸ್ ನೆನಪು ಮಾಡಿಕೊಂಡಿದ್ದಾರೆ.

ಶಾರುಖ್​ ಖಾನ್​ ಗೆಟಪ್​ ಕೂಡ ಲೀಕ್​:

ಸತತ ಸೋಲಿನಿಂದ ಕಂಗೆಟ್ಟಿರುವ ಶಾರುಖ್​ ಖಾನ್ ಅವರಿಗೆ ‘ಪಠಾಣ್​’ ಸಿನಿಮಾದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಅದಕ್ಕಾಗಿ ಅವರು ಬಾಡಿ ಟ್ರಾನ್ಸ್​ಫಾರ್ಮೆಷನ್​ ಕೂಡ ಮಾಡಿಕೊಂಡಿದ್ದಾರೆ. 8 ಪ್ಯಾಕ್​ ಆ್ಯಬ್ಸ್​ ಮೂಲಕ ಗಮನ ಸೆಳೆಯುತ್ತಿದ್ದಾರೆ. ಆದರೆ ಆ ಫೋಟೋಗಳು ಕೂಡ ಲೀಕ್​ ಆಗಿವೆ. ಇತ್ತೀಚೆಗಷ್ಟೇ ‘ಪಠಾಣ್’​ ಚಿತ್ರದ ಟೀಸರ್​ ಬಿಡುಗಡೆ ಆಗಿತ್ತು. ಅದರಲ್ಲಿ ದೀಪಿಕಾ ಪಡುಕೋಣೆ ಮತ್ತು ಜಾನ್​ ಅಬ್ರಾಹಂ ಅವರು ಕಾಣಿಸಿಕೊಂಡಿದ್ದರು. ಶಾರುಖ್​ ಖಾನ್​ ಅವರ ಹಿನ್ನೆಲೆ ಧ್ವನಿ ಮಾತ್ರ ಕೇಳಿಸಿತ್ತು. ಆದರೆ ಲುಕ್​ ಬಹಿರಂಗ ಆಗಿರಲಿಲ್ಲ. ಅದ್ದೂರಿಯಾಗಿ ಲುಕ್​ ರಿವೀಲ್​ ಮಾಡಬೇಕು ಎಂಬುದು ಚಿತ್ರತಂಡದ ಪ್ಲ್ಯಾನ್​ ಆಗಿರುತ್ತದೆ. ಆದರೆ ಅದಕ್ಕೂ ಮುನ್ನವೇ ಈ ರೀತಿ ಫೋಟೋ ವೈರಲ್ ಆಗಿದೆ. ಕೆಲವರು ಈ ಲುಕ್ ನೋಡಿ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ:

‘ಗೆಹರಾಯಿಯಾ’ ಪಾತ್ರವನ್ನು ಅರಗಿಸಿಕೊಳ್ಳಲು ನನ್ನ ಕುಟುಂಬಕ್ಕೆ ಕಷ್ಟವಾಗಿತ್ತು ಎಂದ ದೀಪಿಕಾ ಪಡುಕೋಣೆ

‘ಎಷ್ಟೇ ಮೈ ತೋರಿಸಿದರೂ ಈ ಕೆಟ್ಟ ಸಿನಿಮಾ ಗೆಲ್ಲಲ್ಲ’; ದೀಪಿಕಾ ಚಿತ್ರದ ಬಗ್ಗೆ ಕಂಗನಾ ಖಡಕ್​ ವಿಮರ್ಶೆ

Published On - 8:08 am, Fri, 18 March 22

ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ