AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್-ರಣವೀರ್​ನ ತಂದೆ ತಾಯಿಗೆ ಹೋಲಿಸಿದ್ದ ದೀಪಿಕಾ ಪಡುಕೋಣೆ

2015ರಲ್ಲಿ 'ತಮಾಷಾ' ಚಿತ್ರದ ಪ್ರಚಾರದ ವೇಳೆ, ರಣಬೀರ್ ಮತ್ತು ರಣವೀರ್‌ರಲ್ಲಿ ಯಾರು ಉತ್ತಮ ನಟ ಎಂದು ದೀಪಿಕಾ ಅವರನ್ನು ಕೇಳಲಾಯಿತು. ಬುದ್ಧಿವಂತಿಕೆಯಿಂದ ಅವರು ಉತ್ತರ ನೀಡಿದ್ದರು. ದೀಪಿಕಾ ಇಬ್ಬರನ್ನೂ ಮೆಚ್ಚಿದರು. ಆ ಪ್ರಕ್ರಿಯೆ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ವೈರಲ್ ಆಗುತ್ತಿದೆ .

ರಣಬೀರ್-ರಣವೀರ್​ನ ತಂದೆ ತಾಯಿಗೆ ಹೋಲಿಸಿದ್ದ ದೀಪಿಕಾ ಪಡುಕೋಣೆ
ದೀಪಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: May 05, 2025 | 8:07 AM

Share

ಖ್ಯಾತ ಹಿಂದಿ ಸಿನಿಮಾ ನಟಿ ದೀಪಿಕಾ ಪಡುಕೋಣೆ (Deepika Padukone) ಅವರ ನಟನೆ ಅದ್ಭುತವಾಗಿದ್ದು, ಯಾರಿಗೂ ಅದರ ಬಗ್ಗೆ ಯಾವುದೇ ಸಂದೇಹವಿಲ್ಲ. ಆದರೆ ದೀಪಿಕಾ ತಮ್ಮ ನಟನೆಗಾಗಿ ಮಾತ್ರ ಸುದ್ದಿಯಲ್ಲಿ ಇರುವುದಿಲ್ಲ. ಜೊತೆಗೆ ಬೇರೆ ಕಾರಣಗಳಿಂದ ಸಾಕಷ್ಟು ಸುದ್ದಿ ಆಗುತ್ತಾರೆ. ಅವರು ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಸಂದರ್ಶನಗಳನ್ನು ನೀಡುತ್ತಾ ಇರುತ್ತಾರೆ. ಈಗ ಅವರು ನೀಡಿದ ಹಳೆಯ ಹೇಳಿಕೆ ಒಂದು ವೈರಲ್ ಆಗಿ ಗಮನ ಸೆಳೆದಿದೆ.

ದೀಪಿಕಾ ಪಡುಕೋಣೆ 2018ರಲ್ಲಿ ರಣವೀರ್ ಸಿಂಗ್ ಅವರನ್ನು ವಿವಾಹವಾದರು. ಇದಕ್ಕೂ ಮೊದಲು ಅವರು ರಣಬೀರ್ ಕಪೂರ್ ಜೊತೆ ರಿಲೇಶನ್​ಶಿಪ್​ನಲ್ಲಿ ಇದ್ದರು. ರಣಬೀರ್ ಮತ್ತು ದೀಪಿಕಾ ಅವರ ಪ್ರೇಮಕಥೆ ಸಾಕಷ್ಟು ಸುದ್ದಿಯಲ್ಲಿತ್ತು. ಆದರೆ ಬ್ರೇಕಪ್ ನಂತರ, ರಣವೀರ್ ದೀಪಿಕಾರ ಜೀವನದಲ್ಲಿ ಬಂದರು ಮತ್ತು ನಂತರ ಇಬ್ಬರೂ ವಿವಾಹವಾದರು. ಆದರೆ ಬ್ರೇಕ್ ಅಪ್ ಹೊರತಾಗಿಯೂ, ದೀಪಿಕಾ ರಣಬೀರ್ ಕಪೂರ್ ಜೊತೆ ಕಾಣಿಸಿಕೊಂಡಿದ್ದಾರೆ. ಒಂದು ಹಂತದಲ್ಲಿ, ರಣವೀರ್ ಮತ್ತು ರಣಬೀರ್ ಇಬ್ಬರಲ್ಲಿ ಯಾರು ಉತ್ತಮ ನಟ ಎಂದು ದೀಪಿಕಾ ಅವರನ್ನು ಕೇಳಲಾಯಿತು. ಆಗ ದೀಪಿಕಾ ಏನು ಉತ್ತರಿಸಿದ್ದರು ಎಂಬುದನ್ನು ನೋಡೋಣ.

ಈ ಘಟನೆ ರಣಬೀರ್ ಕಪೂರ್ ಮತ್ತು ದೀಪಿಕಾ ಪಡುಕೋಣೆ 2015 ರ ತಮ್ಮ ಚಲನಚಿತ್ರ ‘ತಮಾಷಾ’ ಪ್ರಚಾರದಲ್ಲಿದ್ದಾಗ ನಡೆದಿದೆ . ದೀಪಿಕಾ ರಣಬೀರ್ ಜೊತೆಗಿನ ಸಂಬಂಧ ಮುರಿದುಕೊಂಡು ರಣವೀರ್ ಸಿಂಗ್ ಜೊತೆ ಡೇಟಿಂಗ್ ಮಾಡುತ್ತಿದ್ದ ಸಮಯವಿದು. ತಮಾಷಾ ಚಿತ್ರದ ಪ್ರಚಾರದ ಸಮಯದಲ್ಲಿ, ರಣಬೀರ್ ಕಪೂರ್ ಮತ್ತು ರಣವೀರ್ ಸಿಂಗ್ ಇವರಲ್ಲಿ ಯಾರು ಉತ್ತಮ ನಟ ಎಂದು ನೀವು ಪರಿಗಣಿಸುತ್ತೀರಿ ಎಂದು ಕೇಳಲಾಯಿತು.

ಇದನ್ನೂ ಓದಿ
Image
ಅಪಘಾತದ ಬಳಿಕ ಬದಲಾಯಿತು ನಾನಿ ಬದುಕು; ಅಂದು ಆಗಿದ್ದೇನು?
Image
ಖ್ಯಾತ ನಿರ್ಮಾಪಕನ ಜೊತೆ ಪೋಸ್ ಕೊಟ್ಟ ಶ್ರೀಲೀಲಾ; ಕೇಳಿಬಂತು ಹೊಸ ಗಾಸಿಪ್
Image
ಸಾರಾ ತೆಂಡೂಲ್ಕರ್​ಗೆ ಹೊಸ ಬಾಯ್​ಫ್ರೆಂಡ್; ಸ್ಟಾರ್ ನಟನ ಜೊತೆ ಡೇಟಿಂಗ್?
Image
‘ಲವ್ ಎಟ್ ಫಸ್ಟ್​ ಸೈಟ್’: ಕರ್ಣನ ನೋಡಿ ನಿಧಿಗೆ ಲವ್; ಹೇಗಿದೆ ನೋಡಿ ಹೊಸ ಪ್ರ

ದೀಪಿಕಾ ಈ ಪ್ರಶ್ನೆಗೆ ಬಹಳ ಬುದ್ಧಿವಂತಿಕೆಯಿಂದ ಉತ್ತರಿಸಿದರು. ಅವರು ಯಾವುದೇ ನಟನ ಹೆಸರನ್ನು ಹೇಳಲಿಲ್ಲ. ಆದರೆ ಇಬ್ಬರೂ ಉತ್ತಮರು ಎಂದು ಅವರು ಹೇಳಿದ್ದರು. ‘ನಿನ್ನ ತಾಯಿಯನ್ನು ಇಷ್ಟಪಡುತ್ತೀಯಾ ಅಥವಾ ನಿನ್ನ ತಂದೆಯನ್ನು ಇಷ್ಟಪಡುತ್ತೀಯಾ ಎಂದು ಹೇಳುತ್ತಿರುವಂತೆ ಇದೆ’ ಎಂದು ನಟಿ ಹೇಳಿದ್ದರು.

ಇದನ್ನೂ ಓದಿ: ‘ಸ್ಪಿರಿಟ್’ ಚಿತ್ರಕ್ಕೆ ಪ್ರಭಾಸ್​ಗೆ ಜೊತೆಯಾಗಲಿದ್ದಾರೆ ದೀಪಿಕಾ ಪಡುಕೋಣೆ?

ದೀಪಿಕಾಳ ಈ ಉತ್ತರದ ನಂತರ, ಪ್ರೇಕ್ಷಕರಿಂದ ಒಬ್ಬರು ತಾಯಿ ಯಾರು ಎಂದು ಕೇಳಿದರು. ಇದಕ್ಕೆ ರಣಬೀರ್ ತಕ್ಷಣ ತಮಾಷೆಯಾಗಿ, ‘ನಾನು ತಂದೆಯಾಗಲು ಬಯಸುತ್ತೇನೆ’ ಎಂದು ಉತ್ತರಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು