AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ನಟನೆಯ ‘ಪಠಾಣ್​’ ರಿಲೀಸ್ ​ಡೇಟ್​ ಬಗ್ಗೆ ಹೊಸ ಅಪ್​ಡೇಟ್​ ನೀಡಿದ ದೀಪಿಕಾ ಪಡುಕೋಣೆ

ಶಾರುಖ್​ ಖಾನ್​ ಈಗಾಗಲೇ ಸಿನಿಮಾದ ಶೂಟಿಂಗ್​ ಪೂರ್ಣಗೊಳಿಸಬೇಕಿತ್ತು. ಆದರೆ, ಅವರಿಗೆ ಸಾಕಷ್ಟು ಸಮಸ್ಯೆಗಳು ಉಂಟಾದವು. ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಡ್ರಗ್​ ಕೇಸ್​ನಲ್ಲಿ ಜೈಲು ಸೇರಿದರು. ಇದು ಶಾರುಖ್​ ಚಿಂತೆಯನ್ನು ಹೆಚ್ಚಿಸಿತ್ತು.

ಶಾರುಖ್​ ನಟನೆಯ ‘ಪಠಾಣ್​’ ರಿಲೀಸ್ ​ಡೇಟ್​ ಬಗ್ಗೆ ಹೊಸ ಅಪ್​ಡೇಟ್​ ನೀಡಿದ ದೀಪಿಕಾ ಪಡುಕೋಣೆ
ದೀಪಿಕಾ-ಶಾರುಖ್​
TV9 Web
| Edited By: |

Updated on: Feb 04, 2022 | 6:00 AM

Share

ಸಿದ್ದಾರ್ಥ್​ ಆನಂದ್ ನಿರ್ದೇಶನ ಮಾಡುತ್ತಿರುವ ‘ಪಠಾಣ್​’ ಚಿತ್ರದ (Pathan Movie) ಮೂಲಕ ಶಾರುಖ್​ ಖಾನ್​ (Shah Rukh Khan) ಕಂಬ್ಯಾಕ್​ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದಿಂದ ಅವರು ದೊಡ್ಡ ಮಟ್ಟದ ಯಶಸ್ಸನ್ನು​ ನಿರೀಕ್ಷಿಸುತ್ತಿದ್ದಾರೆ. ಒಂದೊಮ್ಮೆ ಈ ಚಿತ್ರ ಸೂಪರ್​ ಹಿಟ್​ ಆದರೆ, ಬಾಲಿವುಡ್​ನಲ್ಲಿ ಕಿಂಗ್​ ಖಾನ್​ ನೆಲೆ ಮತ್ತಷ್ಟು ಗಟ್ಟಿಯಾಗಲಿದೆ. ಹಾಗಾದರೆ, ಈ ಸಿನಿಮಾ ತೆರೆಗೆ ಬರೋದು ಯಾವಾಗ? ಆ ಪ್ರಶ್ನೆಗೆ ಚಿತ್ರತಂಡದಿಂದ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ. ರಿಲೀಸ್​ ಡೇಟ್​ ಹಾಗಿರಲಿ, ಸಿನಿಮಾ ತಂಡದಿಂದ ಯಾವುದೇ ಪೋಸ್ಟರ್​ ಬಿಡುಗಡೆ ಆಗಿಲ್ಲ. ಈಗ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ (Deepika Padukone) ಸಿನಿಮಾ ರಿಲೀಸ್​ ದಿನಾಂಕದ ಬಗ್ಗೆ ಮಾತನಾಡಿದ್ದಾರೆ.

2013ರಲ್ಲಿ ತೆರೆಗೆ ಬಂದಿದ್ದ ಶಾರುಖ್​ ನಟನೆಯ ‘ಚೆನ್ನೈ ಎಕ್ಸ್​ಪ್ರೆಸ್’​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅವರ ಅಭಿನಯದ ‘ಹ್ಯಾಪಿ ನ್ಯೂ ಇಯರ್’ ಚಿತ್ರ​ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದ್ದರೂ, ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿತ್ತು. ಇದಾದ ನಂತರ ತೆರೆಕಂಡ ಅವರ ನಟನೆಯ ಎಲ್ಲಾ ಚಿತ್ರಗಳೂ ನೆಲ ಕಚ್ಚಿದ್ದವು. ಈಗ ಶಾರುಖ್​ ‘ಪಠಾಣ್’​ ಸಿನಿಮಾ ಮೂಲಕ ಮತ್ತೆ ತೆರೆ ಮೇಲೆ ಬರಲು ಸಿದ್ಧರಾಗಿದ್ದಾರೆ. ಈ ಸಿನಿಮಾ ಈ ವರ್ಷದ ಕೊನೆಯಲ್ಲಿ ತೆರೆಗೆ ಬರುವ ನಿರೀಕ್ಷೆ ಇದೆ.

ಶಾರುಖ್​ ಖಾನ್​ ಈಗಾಗಲೇ ಸಿನಿಮಾದ ಶೂಟಿಂಗ್​ ಪೂರ್ಣಗೊಳಿಸಬೇಕಿತ್ತು. ಆದರೆ, ಅವರಿಗೆ ಸಾಕಷ್ಟು ಸಮಸ್ಯೆಗಳು ಉಂಟಾದವು. ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಡ್ರಗ್​ ಕೇಸ್​ನಲ್ಲಿ ಜೈಲು ಸೇರಿದರು. ಇದು ಶಾರುಖ್​ ಚಿಂತೆಯನ್ನು ಹೆಚ್ಚಿಸಿತ್ತು. ಜಾಮೀನು ನೀಡಿ ಮಗನನ್ನು ಹೊರಗೆ ಕರೆ ತರುವವರೆಗೂ ಅವರು ಮನೆಯಲ್ಲೇ ಇದ್ದರು. ಎಲ್ಲವೂ ಸರಿಯಾಯಿತು ಎನ್ನುವಾಗಲೇ ಕೊವಿಡ್ ಮೂರನೇ ಅಲೆ ಕಾಣಿಸಿಕೊಂಡಿತ್ತು. ಹೀಗಾಗಿ, ‘ಪಠಾಣ್​’ ಕೆಲಸಗಳು ವಿಳಂಬವಾದವು. ಈಗ ಸಿನಿಮಾ ತಂಡ ವೇಗವಾಗಿ ಕೆಲಸಗಳನ್ನು ಪೂರ್ಣಗೊಳಿಸುತ್ತಿದೆ.

‘ನಾವು ‘ಪಠಾಣ್​’ ಸಿನಿಮಾ ಕೆಲಸಗಳನ್ನು ಮುಗಿಸುವ ಹಂತಕ್ಕೆ ಬಂದಿದ್ದೇವೆ. ಈ ವರ್ಷದ ಕೊನೆಯಲ್ಲಿ ಸಿನಿಮಾ ತೆರೆಗೆ ತರುವ ಆಲೋಚನೆ ಇದೆ. ಒಂದು ಹಂತದ ಶೂಟಿಂಗ್​ ಮಾತ್ರ ಬಾಕಿ ಇದೆ’ ಎಂದಿದ್ದಾರೆ ದೀಪಿಕಾ. ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್​ಪ್ರೆಸ್​’ ಹಾಗೂ ‘ಹ್ಯಾಪಿ ನ್ಯೂ ಇಯರ್​’ ಚಿತ್ರದಲ್ಲಿ ಈ ಜೋಡಿ ಒಟ್ಟಾಗಿ ನಟಿಸಿದೆ. ಈಗ ‘ಪಠಾಣ್​’ ಮೂಲಕ ಈ ಜೋಡಿ ಮತ್ತೆ ಒಂದಾಗುತ್ತಿದೆ. ಜಾನ್ ಅಬ್ರಹಾಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಗೆಹರಾಯಿಯಾ’ ಸಿನಿಮಾದ ಪ್ರಚಾರಕಾರ್ಯದಲ್ಲಿ ದೀಪಿಕಾ ಬ್ಯುಸಿ ಆಗಿದ್ದಾರೆ.

ಶಾರುಖ್​ ಖಾನ್​ ಕೊನೆಯದಾಗಿ ಕಾಣಿಸಿಕೊಂಡಿದ್ದು 2018ರಲ್ಲಿ ತೆರೆಕಂಡಿದ್ದ ‘ಜೀರೋ’ ಚಿತ್ರದಲ್ಲಿ. ಈ ಸಿನಿಮಾ ಮಕಾಡೆ ಮಲಗಿತ್ತು. ಕತ್ರಿನಾ ಕೈಫ್​, ಅನುಷ್ಕಾ ಶರ್ಮಾ ಕೂಡ ಸಿನಿಮಾದಲ್ಲಿ ನಟಿಸುತ್ತಿದ್ದರು. ಅಟ್ಲೀ ನಿರ್ದೇಶನದ ಸಿನಿಮಾದಲ್ಲೂ ಶಾರುಖ್​ ನಟಿಸಿದ್ದರು. ಈ ಸಿನಿಮಾದಲ್ಲಿ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು 160 ದಿನದ ಕಾಲ್​ಶೀಟ್​ ನೀಡಿದ್ದಾರೆ ಎಂದು ವರದಿ ಆಗಿದೆ. ರಾಜ್​ಕುಮಾರ್ ಹಿರಾನಿ ನಿರ್ದೇಶನದ ಚಿತ್ರದಲ್ಲೂ ಶಾರುಖ್​ ನಟಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಆರ್ಯನ್​ ಭೇಟಿ ಮಾಡಿದ  ಶಾರುಖ್​ ಖಾನ್ ತೆಗೆದುಕೊಂಡ್ರು ಕಠಿಣ ನಿರ್ಧಾರ; ಪರಿಣಾಮ ಯಾರ ಮೇಲೆ?

ಪುರುಷರ ಟಾಯ್ಲೆಟ್​ಗೆ ನುಗ್ಗಿದ್ದ ದೀಪಿಕಾ ಪಡುಕೋಣೆ-ಆಲಿಯಾ ಭಟ್​; ಇದರ ಹಿಂದಿದೆ ಅಚ್ಚರಿಯ ಕಥೆ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ