ರೆಕಾರ್ಡ್ ಮಾಡುತ್ತಿದ್ದಾಗ ಸಿಟ್ಟಲ್ಲಿ ಕ್ಯಾಮೆರಾಗೆ ಪಂಚ್ ಕೊಟ್ಟ ದೀಪಿಕಾ ಪಡುಕೋಣೆ

ರಣವೀರ್ ಸಿಂಗ್ ಹಾಗೂ ದೀಪಿಕಾ ಪಡಿಕೋಣೆ ಅನ್ಯೋನ್ಯವಾಗಿದ್ದಾರೆ. ಆದರೆ, ಇನ್​ಸ್ಟಾಗ್ರಾಮ್​ನಲ್ಲಿ ವಿವಾಹದ ಫೋಟೋ ಡಿಲೀಟ್ ಮಾಡಿದ್ದರಿಂದ ಸಹಜವಾಗಿಯೇ ಚರ್ಚೆಗಳು ನಡೆದಿದ್ದವು. ಈ ಬಗ್ಗೆ ದೀಪಿಕಾ ಪಡುಕೋಣೆ ಅವರು ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ. ಆದರೆ, ರಣವೀರ್ ಹಾಗೂ ದೀಪಿಕಾ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ರೆಕಾರ್ಡ್ ಮಾಡುತ್ತಿದ್ದಾಗ ಸಿಟ್ಟಲ್ಲಿ ಕ್ಯಾಮೆರಾಗೆ ಪಂಚ್ ಕೊಟ್ಟ ದೀಪಿಕಾ ಪಡುಕೋಣೆ
ದೀಪಿಕಾ ಪಡುಕೋಣೆ
Follow us
| Updated By: ರಾಜೇಶ್ ದುಗ್ಗುಮನೆ

Updated on: May 09, 2024 | 12:24 PM

ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ದೊಡ್ಡ ಮಟ್ಟದ ಖ್ಯಾತಿ ಪಡೆದಿದ್ದಾರೆ. ಅವರು ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದ್ದರು. ಇದಕ್ಕೆ ಕಾರಣ ಆಗಿದ್ದು ರಣವೀರ್ ಸಿಂಗ್ ನಡೆ. ಮದುವೆ ಫೋಟೋಗಳನ್ನು ಡಿಲೀಟ್ ಮಾಡೋ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಇವರ ಮಧ್ಯೆ ಯಾವುದೂ ಸರಿ ಇಲ್ಲ ಎಂದು ಹೇಳಲಾಗಿತ್ತು. ಆದರೆ, ಈಗ ವಿಮಾನ ನಿಲ್ದಾಣದಲ್ಲಿ ಇವರು ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಎಲ್ಲಾ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.

ರಣವೀರ್ ಸಿಂಗ್ ಹಾಗೂ ದೀಪಿಕಾ ಪಡಿಕೋಣೆ ಅನ್ಯೋನ್ಯವಾಗಿದ್ದಾರೆ. ಆದರೆ, ಇನ್​ಸ್ಟಾಗ್ರಾಮ್​ನಲ್ಲಿ ವಿವಾಹದ ಫೋಟೋ ಡಿಲೀಟ್ ಮಾಡಿದ್ದರಿಂದ ಸಹಜವಾಗಿಯೇ ಚರ್ಚೆಗಳು ನಡೆದಿದ್ದವು. ಈ ಬಗ್ಗೆ ದೀಪಿಕಾ ಪಡುಕೋಣೆ ಅವರು ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ. ಆದರೆ, ರಣವೀರ್ ಹಾಗೂ ದೀಪಿಕಾ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಇದರಿಂದ ಮೂಡಿದ್ದ ಎಲ್ಲ ಅನುಮಾನಗಳಿಗೆ ತೆರೆ ಬಿದ್ದಿದೆ.

ಲೂಸ್ ಡ್ರೆಸ್ ಹಾಕಿ ದೀಪಿಕಾ ಕಾಣಿಸಿಕೊಂಡಿದ್ದಾರೆ. ಇದರಿಂದ ಅವರ ಬೇಬಿ ಬಂಪ್ ಹೈಲೈಟ್ ಆಗಿಲ್ಲ. ನಡೆದು ಬರುವಾಗ ಅವರು ಕ್ಯಾಮೆರಾಗೆ ಪಂಚ್ ಕೊಟ್ಟಿದ್ದಾರೆ. ದೀಪಿಕಾ ಸಿಟ್ಟಿನಿಂದ ಈ ರೀತಿ ಮಾಡಿದ್ದಾರೆ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಸೆಲೆಬ್ರಿಟಿಗಳ ಫೋಟೋ ತೆಗೆಯಲು ಪಾಪರಾಜಿಗಳು ಮುಂದಾಗುತ್ತಾರೆ. ಇದರಿಂದ ಸೆಲೆಬ್ರಿಟಿಗಳಿಗೆ ಕಿರಿಕಿರಿ ಆಗುತ್ತದೆ. ದೀಪಿಕಾಗೂ ಹಾಗೆಯೇ ಆಗಿದೆ ಎನ್ನಲಾಗಿದೆ.

ರಣವೀರ್ ಸಿಂಗ್ ಅವರು ಕೇವಲ ಮದುವೆ ಫೋಟೋ ಮಾತ್ರವಲ್ಲ. 2023ರಕ್ಕಿಂತ ಮೊದಲು ಪೋಸ್ಟ್ ಮಾಡಿದ ಎಲ್ಲಾ ಫೋಟೋಗಳನ್ನು ಅವರು ಹೈಡ್ ಮಾಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಇನ್ನಷ್ಟೇ ರಿವೀಲ್ ಮಾಡಬೇಕಿದೆ.

ಇದನ್ನೂ ಓದಿ: ಮಗು ಹುಟ್ಟೋ ಸಮಯದಲ್ಲಿ ಇದೆಂಥಾ ಜಗಳ? ಅನುಮಾನ ಮೂಡಿಸಿತು ರಣವೀರ್ ನಡೆ

ರಣವೀರ್ ಸಿಂಗ್ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಡಾನ್ 3’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಇದರ ಜೊತೆಗೆ ಅವರು ಪತ್ನಿಯ ಆರೈಕೆಯಲ್ಲೂ ಬ್ಯುಸಿ ಇದ್ದಾರೆ. ಅವರು ಇತ್ತೀಚೆಗೆ ಪತ್ನಿ ಜೊತೆ ಸುತ್ತಾಟ ಮಾಡಿದ್ದರು. ದೀಪಿಕಾ ಪಡುಕೋಣೆ ಅವರು ಈಗಾಗಲೇ ಒಪ್ಪಿಕೊಂಡ ಎಲ್ಲಾ ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ. ಈಗ ತಮ್ಮ ಆರೋಗ್ಯದ ಬಗ್ಗೆ ಅವರು ಹೆಚ್ಚು ಗಮನ ಹರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ