AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ ಪಡುಕೋಣೆ ಬಗ್ಗೆ ಹೆಚ್ಚಾಯ್ತು ಅಪಪ್ರಚಾರ; ‘ಕಲ್ಕಿ 2’ ಸಿನಿಮಾದಿಂದಲೂ ಔಟ್?

ದೀಪಿಕಾ ಪಡುಕೋಣೆ ಅವರಿಗೆ ಹೊಸ ಅವಕಾಶಗಳು ಸಿಗುವುದನ್ನು ತಪ್ಪಿಸಲು ಕೆಲವರು ಹುನ್ನಾರ ನಡೆಸಿದ್ದಾರೆ. ಆ ಕಾರಣದಿಂದಲೇ ಅವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಅಭಿಮಾನಿಗಳಿಗೆ ಸತ್ಯ ಏನೆಂಬುದು ತಿಳಿದಿದೆ. ‘ಸ್ಪಿರಿಟ್’ ಸಿನಿಮಾ ತಂಡದ ಜೊತೆ ವೈಮನಸ್ಸು ಉಂಟಾದ ಬಳಿಕ ಈ ರೀತಿಯ ಗಾಸಿಪ್​ಗಳು ಹೆಚ್ಚಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ದೀಪಿಕಾ ಪಡುಕೋಣೆ ಬಗ್ಗೆ ಹೆಚ್ಚಾಯ್ತು ಅಪಪ್ರಚಾರ; ‘ಕಲ್ಕಿ 2’ ಸಿನಿಮಾದಿಂದಲೂ ಔಟ್?
Deepika Padukone
ಮದನ್​ ಕುಮಾರ್​
|

Updated on: Jun 08, 2025 | 3:18 PM

Share

ನಟಿ ದೀಪಿಕಾ ಪಡುಕೋಣೆ ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ನಡುವೆ ಕಿರಿಕ್ ಆಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ದೀಪಿಕಾ ಪಡುಕೋಣೆ ಅವರು ಪ್ರಭಾಸ್ (Prabhas) ನಟನೆಯ ‘ಸ್ಪಿರಿಟ್’ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಆಗಬೇಕಿತ್ತು. ಈ ಸಿನಿಮಾಗೆ ಸಂದೀಪ್ ರೆಡ್ಡಿ ವಂಗ (Sandeep Reddy Vanga) ಅವರು ನಿರ್ದೇಶನ ಮಾಡುತ್ತಿದ್ದಾರೆ. ಇನ್ನೂ ಈ ಚಿತ್ರದ ಶೂಟಿಂಗ್ ಆರಂಭ ಆಗಿಲ್ಲ. ಅಷ್ಟರಲ್ಲಾಗಲೇ ನೆಗೆಟಿವ್ ಸುದ್ದಿಗಳು ಕೇಳಿಬರಲು ಆರಂಭಿಸಿವೆ. ಈ ಸಿನಿಮಾದಿಂದ ದೀಪಿಕಾ ಪಡುಕೋಣೆ (Deepika Padukone) ಹೊರನಡೆದಿದ್ದಾರೆ. ಅದರಿಂದಾಗಿ ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್ ಕೂಡ ಅವರ ಕೈ ತಪ್ಪಿದೆ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.

ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅವರು ಪ್ರಮುಖ ಪಾತ್ರ ನಿಭಾಯಿಸಿದ್ದಾರೆ. ಅದರ ಸೀಕ್ವೆಲ್ ಸೆಟ್ಟೇರಲು ಇನ್ನೂ ಸಮಯ ಹಿಡಿಯಲಿದೆ. ಈಗಾಗಲೇ ದೀಪಿಕಾ ಅವರು ‘ಸ್ಪಿರಿಟ್’ ಸಿನಿಮಾ ತಂಡದ ಜೊತೆ ಕಿರಿಕ್ ಮಾಡಿಕೊಂಡಿದ್ದರಿಂದ ಪ್ರಭಾಸ್ ನಟನೆಯ ‘ಕಲ್ಕಿ 2’ ಸಿನಿಮಾ ಕೂಡ ದೀಪಿಕಾ ಕೈ ತಪ್ಪಬಹುದು ಎಂಬುದು ಗಾಸಿಮ್ ಮಂದಿಯ ಲೆಕ್ಕಾಚಾರ.

ಆದರೆ ಇದು ಸಂಪೂರ್ಣ ಗಾಳಿಸುದ್ದಿ ಎನ್ನಲಾಗಿದೆ. ದೀಪಿಕಾ ಪಡುಕೋಣೆ ಬಗ್ಗೆ ಅಪಪ್ರಚಾರ ಮಾಡಬೇಕು ಎಂಬ ಉದ್ದೇಶದಿಂದಲೇ ಕೆಲವರು ಇಂಥ ಸುದ್​ದಿ ಹಬ್ಬಿಸುತ್ತಿದ್ದಾರೆ. ಹಲವು ಸಿನಿಮಾ ತಂಡದ ಜೊತೆ ದೀಪಿಕಾ ಜಗಳ ಮಾಡಿಕೊಂಡರು ಎಂಬ ಸುದ್ದಿ ಹಬ್ಬಿದರೆ ಮುಂದಿನ ದಿನಗಳಲ್ಲಿ ಅವರಿಗೆ ಸಿಗುವ ಆಫರ್ ಕಡಿಮೆ ಆಗುತ್ತವೆ. ಆ ರೀತಿ ಆಗಲಿ ಎಂಬುದು ಕೆಲವರ ಹುನ್ನಾರ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

‘ಕಲ್ಕಿ 2’ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಅವರ ಪಾತ್ರಕ್ಕೆ ಸಂಬಂಧಿಸಿದ ಕಥೆ ಮುಂದುವರಯಲಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಚಿತ್ರತಂಡದಿಂದ ಅವರನ್ನು ಹೊರಗಿಡುವ ಸಾಧ್ಯತೆಯೇ ಇಲ್ಲ. ಅಲ್ಲದೇ, ಈ ಸಿನಿಮಾ ಸೆಟ್ಟೇರಲಿ ಇನ್ನೂ ಸಮಯ ಇದೆ. ಶೂಟಿಂಗ್ ಶುರುವಾಗುವುದಕ್ಕೂ ಮುನ್ನವೇ ಅವರು ಚಿತ್ರತಂಡದ ಜೊತೆ ಕಿರಿಕ್ ಮಾಡಿಕೊಳ್ಳಲು ಹೇಗೆ ಸಾಧ್ಯ ಎಂದು ಅಭಿಮಾನಿಗಳು ದೀಪಿಕಾ ಪರವಾಗಿ ಬ್ಯಾಟ್ ಬೀಸುತ್ತಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್-ಅಟ್ಲಿ ಚಿತ್ರಕ್ಕೆ ದೀಪಿಕಾ ಎಂಟ್ರಿ ಅಧಿಕೃತ; ಪ್ರೋಮೋ ರಿಲೀಸ್

ವೃತ್ತಿ ಜೀವನ ಮತ್ತು ಖಾಸಗಿ ಜೀವನಕ್ಕೆ ಸಮನಾಗಿ ಸಮಯ ನೀಡಲು ದೀಪಿಕಾ ಪಡುಕೋಣೆ ನಿರ್ಧರಿಸಿದ್ದಾರೆ. ಆ ಕಾರಣದಿಂದಲೇ ಅವರು ‘ಸ್ಪಿರಿಟ್’ ಸಿನಿಮಾದ ಸೆಟ್​ನಲ್ಲಿ 8 ಗಂಟೆಗಿಂತ ಹೆಚ್ಚು ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಖಡಕ್ ಆಗಿ ಹೇಳಿದರು. ಅವರ ಈ ಮಾತಿನಿಂದ ಸಂದೀಪ್ ರೆಡ್ಡಿ ವಂಗ ಕೋಪಗೊಂಡಿದ್ದಾರೆ. ಅಲ್ಲಿಂದ ಕಿರಿಕ್ ಆರಂಭ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು