AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ ಪಡುಕೋಣೆ ಬಗ್ಗೆ ಹೆಚ್ಚಾಯ್ತು ಅಪಪ್ರಚಾರ; ‘ಕಲ್ಕಿ 2’ ಸಿನಿಮಾದಿಂದಲೂ ಔಟ್?

ದೀಪಿಕಾ ಪಡುಕೋಣೆ ಅವರಿಗೆ ಹೊಸ ಅವಕಾಶಗಳು ಸಿಗುವುದನ್ನು ತಪ್ಪಿಸಲು ಕೆಲವರು ಹುನ್ನಾರ ನಡೆಸಿದ್ದಾರೆ. ಆ ಕಾರಣದಿಂದಲೇ ಅವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಅಭಿಮಾನಿಗಳಿಗೆ ಸತ್ಯ ಏನೆಂಬುದು ತಿಳಿದಿದೆ. ‘ಸ್ಪಿರಿಟ್’ ಸಿನಿಮಾ ತಂಡದ ಜೊತೆ ವೈಮನಸ್ಸು ಉಂಟಾದ ಬಳಿಕ ಈ ರೀತಿಯ ಗಾಸಿಪ್​ಗಳು ಹೆಚ್ಚಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ದೀಪಿಕಾ ಪಡುಕೋಣೆ ಬಗ್ಗೆ ಹೆಚ್ಚಾಯ್ತು ಅಪಪ್ರಚಾರ; ‘ಕಲ್ಕಿ 2’ ಸಿನಿಮಾದಿಂದಲೂ ಔಟ್?
Deepika Padukone
ಮದನ್​ ಕುಮಾರ್​
|

Updated on: Jun 08, 2025 | 3:18 PM

Share

ನಟಿ ದೀಪಿಕಾ ಪಡುಕೋಣೆ ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ನಡುವೆ ಕಿರಿಕ್ ಆಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ದೀಪಿಕಾ ಪಡುಕೋಣೆ ಅವರು ಪ್ರಭಾಸ್ (Prabhas) ನಟನೆಯ ‘ಸ್ಪಿರಿಟ್’ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಆಗಬೇಕಿತ್ತು. ಈ ಸಿನಿಮಾಗೆ ಸಂದೀಪ್ ರೆಡ್ಡಿ ವಂಗ (Sandeep Reddy Vanga) ಅವರು ನಿರ್ದೇಶನ ಮಾಡುತ್ತಿದ್ದಾರೆ. ಇನ್ನೂ ಈ ಚಿತ್ರದ ಶೂಟಿಂಗ್ ಆರಂಭ ಆಗಿಲ್ಲ. ಅಷ್ಟರಲ್ಲಾಗಲೇ ನೆಗೆಟಿವ್ ಸುದ್ದಿಗಳು ಕೇಳಿಬರಲು ಆರಂಭಿಸಿವೆ. ಈ ಸಿನಿಮಾದಿಂದ ದೀಪಿಕಾ ಪಡುಕೋಣೆ (Deepika Padukone) ಹೊರನಡೆದಿದ್ದಾರೆ. ಅದರಿಂದಾಗಿ ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್ ಕೂಡ ಅವರ ಕೈ ತಪ್ಪಿದೆ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.

ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅವರು ಪ್ರಮುಖ ಪಾತ್ರ ನಿಭಾಯಿಸಿದ್ದಾರೆ. ಅದರ ಸೀಕ್ವೆಲ್ ಸೆಟ್ಟೇರಲು ಇನ್ನೂ ಸಮಯ ಹಿಡಿಯಲಿದೆ. ಈಗಾಗಲೇ ದೀಪಿಕಾ ಅವರು ‘ಸ್ಪಿರಿಟ್’ ಸಿನಿಮಾ ತಂಡದ ಜೊತೆ ಕಿರಿಕ್ ಮಾಡಿಕೊಂಡಿದ್ದರಿಂದ ಪ್ರಭಾಸ್ ನಟನೆಯ ‘ಕಲ್ಕಿ 2’ ಸಿನಿಮಾ ಕೂಡ ದೀಪಿಕಾ ಕೈ ತಪ್ಪಬಹುದು ಎಂಬುದು ಗಾಸಿಮ್ ಮಂದಿಯ ಲೆಕ್ಕಾಚಾರ.

ಆದರೆ ಇದು ಸಂಪೂರ್ಣ ಗಾಳಿಸುದ್ದಿ ಎನ್ನಲಾಗಿದೆ. ದೀಪಿಕಾ ಪಡುಕೋಣೆ ಬಗ್ಗೆ ಅಪಪ್ರಚಾರ ಮಾಡಬೇಕು ಎಂಬ ಉದ್ದೇಶದಿಂದಲೇ ಕೆಲವರು ಇಂಥ ಸುದ್​ದಿ ಹಬ್ಬಿಸುತ್ತಿದ್ದಾರೆ. ಹಲವು ಸಿನಿಮಾ ತಂಡದ ಜೊತೆ ದೀಪಿಕಾ ಜಗಳ ಮಾಡಿಕೊಂಡರು ಎಂಬ ಸುದ್ದಿ ಹಬ್ಬಿದರೆ ಮುಂದಿನ ದಿನಗಳಲ್ಲಿ ಅವರಿಗೆ ಸಿಗುವ ಆಫರ್ ಕಡಿಮೆ ಆಗುತ್ತವೆ. ಆ ರೀತಿ ಆಗಲಿ ಎಂಬುದು ಕೆಲವರ ಹುನ್ನಾರ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

‘ಕಲ್ಕಿ 2’ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಅವರ ಪಾತ್ರಕ್ಕೆ ಸಂಬಂಧಿಸಿದ ಕಥೆ ಮುಂದುವರಯಲಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಚಿತ್ರತಂಡದಿಂದ ಅವರನ್ನು ಹೊರಗಿಡುವ ಸಾಧ್ಯತೆಯೇ ಇಲ್ಲ. ಅಲ್ಲದೇ, ಈ ಸಿನಿಮಾ ಸೆಟ್ಟೇರಲಿ ಇನ್ನೂ ಸಮಯ ಇದೆ. ಶೂಟಿಂಗ್ ಶುರುವಾಗುವುದಕ್ಕೂ ಮುನ್ನವೇ ಅವರು ಚಿತ್ರತಂಡದ ಜೊತೆ ಕಿರಿಕ್ ಮಾಡಿಕೊಳ್ಳಲು ಹೇಗೆ ಸಾಧ್ಯ ಎಂದು ಅಭಿಮಾನಿಗಳು ದೀಪಿಕಾ ಪರವಾಗಿ ಬ್ಯಾಟ್ ಬೀಸುತ್ತಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್-ಅಟ್ಲಿ ಚಿತ್ರಕ್ಕೆ ದೀಪಿಕಾ ಎಂಟ್ರಿ ಅಧಿಕೃತ; ಪ್ರೋಮೋ ರಿಲೀಸ್

ವೃತ್ತಿ ಜೀವನ ಮತ್ತು ಖಾಸಗಿ ಜೀವನಕ್ಕೆ ಸಮನಾಗಿ ಸಮಯ ನೀಡಲು ದೀಪಿಕಾ ಪಡುಕೋಣೆ ನಿರ್ಧರಿಸಿದ್ದಾರೆ. ಆ ಕಾರಣದಿಂದಲೇ ಅವರು ‘ಸ್ಪಿರಿಟ್’ ಸಿನಿಮಾದ ಸೆಟ್​ನಲ್ಲಿ 8 ಗಂಟೆಗಿಂತ ಹೆಚ್ಚು ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಖಡಕ್ ಆಗಿ ಹೇಳಿದರು. ಅವರ ಈ ಮಾತಿನಿಂದ ಸಂದೀಪ್ ರೆಡ್ಡಿ ವಂಗ ಕೋಪಗೊಂಡಿದ್ದಾರೆ. ಅಲ್ಲಿಂದ ಕಿರಿಕ್ ಆರಂಭ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್