ರಣವೀರ್​ ಸಿಂಗ್​ಗೆ ಸರಿಸಾಟಿಯಾಗಿ ಸಂಭಾವನೆ ಕೇಳಿದ ದೀಪಿಕಾ; ಸಿನಿಮಾದಿಂದಲೇ ಪಡುಕೋಣೆ ಔಟ್​

‘ಬೈಜು ಬವ್ರಾ’ ಸಿನಿಮಾದಲ್ಲಿ ರಣವೀರ್​ ಸಿಂಗ್​ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ನಾಯಕಿಯಾಬೇಕಿತ್ತು. ಆದರೆ, ಅವರು ಈ ಚಿತ್ರಕ್ಕೆ ನಾಯಕಿಯಾಗೋಕೆ ನೋ ಎಂದಿದ್ದಾರಂತೆ.

ರಣವೀರ್​ ಸಿಂಗ್​ಗೆ ಸರಿಸಾಟಿಯಾಗಿ ಸಂಭಾವನೆ ಕೇಳಿದ ದೀಪಿಕಾ; ಸಿನಿಮಾದಿಂದಲೇ ಪಡುಕೋಣೆ ಔಟ್​
ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 07, 2021 | 6:34 PM

‘ರಾಮ್​ ಲೀಲಾ’, ‘ಬಾಜಿರಾವ್​ ಮಸ್ತಾನಿ’ ಮತ್ತು ‘ಪದ್ಮಾವತ್’​ ಬಾಲಿವುಡ್​ ಪಾಲಿಗೆ ಸೂಪರ್​ ಹಿಟ್​ ಸಿನಿಮಾಗಳು. ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಮತ್ತು ನಟಿ ದೀಪಿಕಾ ಪಡುಕೋಣೆ ಈ ಚಿತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲ, ದೀಪಿಕಾ ವೃತ್ತಿ ಜೀವನದ ತೂಕವನ್ನು ಈ ಸಿನಿಮಾ ಹೆಚ್ಚಿಸಿತ್ತು. ಇವರು ಮುಂದಿನ ದಿನಗಳಲ್ಲಿ ಮತ್ತೆ ಕೆಲಸ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ರಣವೀರ್​ ಸಿಂಗ್​ಗೆ ಕೊಟ್ಟಷ್ಟೇ ಸಂಭಾವನೆಯನ್ನು ತಮಗೂ ಕೊಡಬೇಕು ಎಂದು ದೀಪಿಕಾ ಹಠ ಹಿಡಿದಿದ್ದರು. ಈ ಕಾರಣಕ್ಕೆ ಅವರು ಸಿನಿಮಾದಿಂದ ಹೊರ ನಡೆದಿದ್ದಾರಂತೆ.

‘ಬೈಜು ಬವ್ರಾ’ ಸಿನಿಮಾದಲ್ಲಿ ರಣವೀರ್​ ಸಿಂಗ್​ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ನಾಯಕಿಯಾಬೇಕಿತ್ತು. ಆದರೆ, ಅವರು ಈ ಚಿತ್ರಕ್ಕೆ ನಾಯಕಿಯಾಗೋಕೆ ನೋ ಎಂದಿದ್ದಾರಂತೆ. ಇದಕ್ಕೆ ಕಾರಣ ಸಂಭಾವನೆ.

ರಣವೀರ್​ ಸಿಂಗ್​ಗೆ ಸರಿಸಾಟಿಯಾಗಿ ದೀಪಿಕಾ ಸಂಭಾವನೆ ಕೇಳಿದ್ದಾರೆ. ಆದರೆ, ಇದಕ್ಕೆ ಸಂಜಯ್​ ಲೀಲಾ ಬನ್ಸಾಲಿ ಒಪ್ಪಿಗೆ ಸೂಚಿಸಿಲ್ಲ. ಈ ಕಾರಣಕ್ಕೆ ದೀಪಿಕಾ ಅವರು ಸಂಯ್​ ಲೀಲಾ ಬನ್ಸಾಲಿ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಕರೀನಾ ಕಪೂರ್​ ಸೀತೆ ಪಾತ್ರ ಮಾಡೋಕೆ 12 ಕೋಟಿ ಬೇಡಿಕೆ ಇಟ್ಟಿದ್ದ ವಿಚಾರ ಸಾಕಷ್ಟು ಸುದ್ದಿಯಾಗಿತ್ತು.

ಇನ್ನು, ಸಂಜಯ್​ ಲೀಲಾ ಬನ್ಸಾಲಿ ಮತ್ತು ದೀಪಿಕಾ ನಡುವೆ ಯಾವುದೂ ಸರಿ ಇಲ್ಲ ಎನ್ನುವ ಬಗ್ಗೆ ಬಾಲಿವುಡ್​ ಅಂಗಳದಲ್ಲಿ ಸುದ್ದಿ ಹರಿದಾಡುತ್ತಿದೆ. ಗಂಗೂಬಾಯಿ ಕಾಠಿಯಾವಾಡಿ ಸಿನಿಮಾವನ್ನು ಸಂಜಯ್​ ಲೀಲ್​ ಬನ್ಸಾಲಿ ನಿರ್ದೇಶವಿದೆ. ಈ ಚಿತ್ರದಲ್ಲಿ ವಿಶೇಷ ಸಾಂಗ್​ ಒಂದರಲ್ಲಿ ನಟಿಸೋಕೆ ದೀಪಿಕಾಗೆ ಬನ್ಸಾಲಿ ಆಫರ್​ ನೀಡಿದ್ದರಂತೆ. ಆದರೆ, ಈ ಆಫರ್​ಅನ್ನು ದೀಪಿಕಾ ಕಡ್ಡಿಮುರಿದಂತೆ ತಿರಸ್ಕರಿಸಿದ್ದಾರೆ. ನಂತರ ‘ಹೀರಾ ಮಂಡಿ’ಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಆಫರ್​ ಕೂಡ ನೀಡಲಾಯಿತಂತೆ. ಆಗಲೂ ದೀಪಿಕಾ ಈ ಆಫರ್​ ತಿರಸ್ಕರಿಸಿದ್ದರು.

ಇದನ್ನೂ ಓದಿ: ಸಂಜಯ್​ ಲೀಲಾ ಬನ್ಸಾಲಿ ಸಿನಿಮಾಗೆ ಗುಡ್​ ಬೈ ಹೇಳಿದ ರಣಬೀರ್​; ಕಾರಣವೇನು?

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ