AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್​ ಸಿಂಗ್​ಗೆ ಸರಿಸಾಟಿಯಾಗಿ ಸಂಭಾವನೆ ಕೇಳಿದ ದೀಪಿಕಾ; ಸಿನಿಮಾದಿಂದಲೇ ಪಡುಕೋಣೆ ಔಟ್​

‘ಬೈಜು ಬವ್ರಾ’ ಸಿನಿಮಾದಲ್ಲಿ ರಣವೀರ್​ ಸಿಂಗ್​ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ನಾಯಕಿಯಾಬೇಕಿತ್ತು. ಆದರೆ, ಅವರು ಈ ಚಿತ್ರಕ್ಕೆ ನಾಯಕಿಯಾಗೋಕೆ ನೋ ಎಂದಿದ್ದಾರಂತೆ.

ರಣವೀರ್​ ಸಿಂಗ್​ಗೆ ಸರಿಸಾಟಿಯಾಗಿ ಸಂಭಾವನೆ ಕೇಳಿದ ದೀಪಿಕಾ; ಸಿನಿಮಾದಿಂದಲೇ ಪಡುಕೋಣೆ ಔಟ್​
ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ
TV9 Web
| Edited By: |

Updated on: Aug 07, 2021 | 6:34 PM

Share

‘ರಾಮ್​ ಲೀಲಾ’, ‘ಬಾಜಿರಾವ್​ ಮಸ್ತಾನಿ’ ಮತ್ತು ‘ಪದ್ಮಾವತ್’​ ಬಾಲಿವುಡ್​ ಪಾಲಿಗೆ ಸೂಪರ್​ ಹಿಟ್​ ಸಿನಿಮಾಗಳು. ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಮತ್ತು ನಟಿ ದೀಪಿಕಾ ಪಡುಕೋಣೆ ಈ ಚಿತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲ, ದೀಪಿಕಾ ವೃತ್ತಿ ಜೀವನದ ತೂಕವನ್ನು ಈ ಸಿನಿಮಾ ಹೆಚ್ಚಿಸಿತ್ತು. ಇವರು ಮುಂದಿನ ದಿನಗಳಲ್ಲಿ ಮತ್ತೆ ಕೆಲಸ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ರಣವೀರ್​ ಸಿಂಗ್​ಗೆ ಕೊಟ್ಟಷ್ಟೇ ಸಂಭಾವನೆಯನ್ನು ತಮಗೂ ಕೊಡಬೇಕು ಎಂದು ದೀಪಿಕಾ ಹಠ ಹಿಡಿದಿದ್ದರು. ಈ ಕಾರಣಕ್ಕೆ ಅವರು ಸಿನಿಮಾದಿಂದ ಹೊರ ನಡೆದಿದ್ದಾರಂತೆ.

‘ಬೈಜು ಬವ್ರಾ’ ಸಿನಿಮಾದಲ್ಲಿ ರಣವೀರ್​ ಸಿಂಗ್​ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ನಾಯಕಿಯಾಬೇಕಿತ್ತು. ಆದರೆ, ಅವರು ಈ ಚಿತ್ರಕ್ಕೆ ನಾಯಕಿಯಾಗೋಕೆ ನೋ ಎಂದಿದ್ದಾರಂತೆ. ಇದಕ್ಕೆ ಕಾರಣ ಸಂಭಾವನೆ.

ರಣವೀರ್​ ಸಿಂಗ್​ಗೆ ಸರಿಸಾಟಿಯಾಗಿ ದೀಪಿಕಾ ಸಂಭಾವನೆ ಕೇಳಿದ್ದಾರೆ. ಆದರೆ, ಇದಕ್ಕೆ ಸಂಜಯ್​ ಲೀಲಾ ಬನ್ಸಾಲಿ ಒಪ್ಪಿಗೆ ಸೂಚಿಸಿಲ್ಲ. ಈ ಕಾರಣಕ್ಕೆ ದೀಪಿಕಾ ಅವರು ಸಂಯ್​ ಲೀಲಾ ಬನ್ಸಾಲಿ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಕರೀನಾ ಕಪೂರ್​ ಸೀತೆ ಪಾತ್ರ ಮಾಡೋಕೆ 12 ಕೋಟಿ ಬೇಡಿಕೆ ಇಟ್ಟಿದ್ದ ವಿಚಾರ ಸಾಕಷ್ಟು ಸುದ್ದಿಯಾಗಿತ್ತು.

ಇನ್ನು, ಸಂಜಯ್​ ಲೀಲಾ ಬನ್ಸಾಲಿ ಮತ್ತು ದೀಪಿಕಾ ನಡುವೆ ಯಾವುದೂ ಸರಿ ಇಲ್ಲ ಎನ್ನುವ ಬಗ್ಗೆ ಬಾಲಿವುಡ್​ ಅಂಗಳದಲ್ಲಿ ಸುದ್ದಿ ಹರಿದಾಡುತ್ತಿದೆ. ಗಂಗೂಬಾಯಿ ಕಾಠಿಯಾವಾಡಿ ಸಿನಿಮಾವನ್ನು ಸಂಜಯ್​ ಲೀಲ್​ ಬನ್ಸಾಲಿ ನಿರ್ದೇಶವಿದೆ. ಈ ಚಿತ್ರದಲ್ಲಿ ವಿಶೇಷ ಸಾಂಗ್​ ಒಂದರಲ್ಲಿ ನಟಿಸೋಕೆ ದೀಪಿಕಾಗೆ ಬನ್ಸಾಲಿ ಆಫರ್​ ನೀಡಿದ್ದರಂತೆ. ಆದರೆ, ಈ ಆಫರ್​ಅನ್ನು ದೀಪಿಕಾ ಕಡ್ಡಿಮುರಿದಂತೆ ತಿರಸ್ಕರಿಸಿದ್ದಾರೆ. ನಂತರ ‘ಹೀರಾ ಮಂಡಿ’ಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಆಫರ್​ ಕೂಡ ನೀಡಲಾಯಿತಂತೆ. ಆಗಲೂ ದೀಪಿಕಾ ಈ ಆಫರ್​ ತಿರಸ್ಕರಿಸಿದ್ದರು.

ಇದನ್ನೂ ಓದಿ: ಸಂಜಯ್​ ಲೀಲಾ ಬನ್ಸಾಲಿ ಸಿನಿಮಾಗೆ ಗುಡ್​ ಬೈ ಹೇಳಿದ ರಣಬೀರ್​; ಕಾರಣವೇನು?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?