AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂಬ ಉದ್ಯಮಿಯ ಹೇಳಿಕೆಯನ್ನು ಟೀಕಿಸಿದ ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಅವರು ಎಲ್ ಆ್ಯಂಡ್ ಟಿ ಸಂಸ್ಥೆಯ ಮುಖ್ಯಸ್ಥರಾದ ಎಸ್.ಎನ್. ಸುಬ್ರಮಣ್ಯನ್ ಅವರ ವಾರಕ್ಕೆ 90 ಗಂಟೆ ಕೆಲಸದ ಪ್ರಸ್ತಾಪವನ್ನು ತೀವ್ರವಾಗಿ ಟೀಕಿಸಿದ್ದಾರೆ. ಇದು ಉದ್ಯೋಗಿಗಳ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಅವರು ವಾದಿಸಿದ್ದಾರೆ. ಸುಬ್ರಮಣ್ಯನ್ ಅವರ ಹೇಳಿಕೆಯು ಭಾರೀ ಟೀಕೆಗೆ ಒಳಗಾಗಿದೆ.

ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂಬ ಉದ್ಯಮಿಯ ಹೇಳಿಕೆಯನ್ನು ಟೀಕಿಸಿದ ದೀಪಿಕಾ ಪಡುಕೋಣೆ
ದೀಪಿಕಾ-ಸುಬ್ರಮಣ್ಯನ್
ರಾಜೇಶ್ ದುಗ್ಗುಮನೆ
|

Updated on: Jan 10, 2025 | 12:46 PM

Share

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಮಾನಸಿಕ ಆರೋಗ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುವವರು. ಏನೇ ಆದರೂ ಮಾನಸಿಕ ಆರೋಗ್ಯ ಚೆನ್ನಾಗಿರಬೇಕು ಎಂದು ಹೇಳುತ್ತಾ ಬಂದಿದ್ದಾರೆ. ತಮಗೆ ಖಿನ್ನತೆ ಆದಾಗ ಅದನ್ನು ಓಪನ್ ಆಗಿ ಹೇಳಿಕೊಂಡು ಅನೇಕರಲ್ಲಿ ಜಾಗೃತಿ ಮೂಡಿಸಿದ್ದರು. ಈಗ ಎಲ್ ಆ್ಯಂಡ್ ಟಿ ಸಂಸ್ಥೆಯ ಮುಖ್ಯಸ್ಥ  ಎಸ್​.ಎನ್. ಸುಬ್ರಮಣ್ಯನ್ ಅವರ ‘ಉದ್ಯೋಗಿಗಳು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು’ ಎಂಬ ಹೇಳಿಕೆ ಬಗ್ಗೆ ದೀಪಿಕಾ ಪ್ರತಿಕ್ರಿಯಿಸಿದ್ದಾರೆ.

‘ಭಾನುವಾರವೂ ನಿಮ್ಮಿಂದ ಕೆಲಸ ಮಾಡಿಸಲು ಸಾಧ್ಯವಾಗುತ್ತಿಲ್ಲದಿರುವುದಕ್ಕೆ ನನಗೆ ವಿಷಾದ ಇದೆ. ನಾನು ಭಾನುವಾರವೂ ಕೆಲಸ ಮಾಡುತ್ತೇನೆ. ನೀವೂ ಕೂಡ ಭಾನುವಾರ ಕೆಲಸ ಮಾಡಿದರೆ ನನಗೆ ಹೆಚ್ಚು ಖುಷಿಯಾಗುತ್ತದೆ. ಪ್ರತಿ ಉದ್ಯೋಗಿ ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು’ ಎಂದು ಸುಬ್ರಮಣ್ಯನ್ ಅವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ದೀಪಿಕಾ ಟೀಕಿಸಿದ್ದಾರೆ. ‘ಅವರು ಪರಿಸ್ಥಿತಿಯನ್ನು ಮತ್ತಷ್ಟು ಕೆಟ್ಟದಾಗಿ ಮಾಡಿದ್ದಾರೆ’ ಎಂದಿದ್ದಾರೆ.

ವಾರಕ್ಕೆ 90 ಗಂಟೆ ಕೆಲಸ ಮಾಡುವುದು ಎಂದರೆ ಅದು ಸುಲಭದ ಮಾತಲ್ಲ. ಈ ರೀತಿ ಮಾಡಿದಾಗ ವ್ಯಕ್ತಿಯ ಆರೋಗ್ಯದ ಮೇಲೆ, ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀಳುತ್ತದೆ. ಆ ರೀತಿ ಆಗಬಾರದು ಎಂದು ಅನೇಕರು ಅಭಿಪ್ರಾಯಕೊಟ್ಟಿದ್ದಾರೆ. ಈ ವಿಚಾರದಲ್ಲಿ ದೀಪಿಕಾ ಧ್ವನಿ ಎತ್ತಿದ್ದು ಖುಷಿ ಆಗಿದೆ.

ಈ ಮೊದಲು ಕೂಡ ಸುಬ್ರಮಣ್ಯನ್ ಅವರು ‘ಭಾನುವಾರವೂ ಉದ್ಯೋಗಿಗಳು ಕೆಲಸ ಮಾಡಬೇಕು’ ಎಂದಿದ್ದರು. ಆ ಸಂದರ್ಭದಲ್ಲೂ ದೀಪಿಕಾ ಪ್ರತಿಕ್ರಿಯಿಸಿದ್ದರು. ‘ಇಷ್ಟು ದೊಡ್ಡ ಪೋಸ್ಟ್​ನಲ್ಲಿ ಇರುವವರು ಈ ರೀತಿಯ ಹೇಳಿಕೆ ನೀಡುವುದನ್ನು ನೋಡಿದರೆ ಶಾಕ್ ಆಗುತ್ತದೆ’ ಎಂದು ಹೇಳಿದ್ದರು.  ಭಾನುವಾರವೂ ಕೆಲಸ ಮಾಡಬೇಕು ಎಂದಿದ್ದಲ್ಲದೆ ಸುಬ್ರಮಣ್ಯಮ್ ಅವರು, ‘ಉದ್ಯೋಗಿಗಳು ಮನೆಯಲ್ಲಿದ್ದುಕೊಂಡು ಏನು ಮಾಡುತ್ತಾರೆ’ ಎಂದು ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: ಮಗಳೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಅವರು ಈ ವಿಚಾರವಾಗಿ ಧ್ವನಿ ಎತ್ತಿದ್ದು ಅನೇಕರಿಗೆ ಖುಷಿ ನೀಡಿದೆ. ಬಾಲಿವುಡ್​ನ ಎಲ್ಲರೂ ಈ ರೀತಿಯ ವಿಚಾರ ಬಂದಾಗ ಮುಂದೆ ಬಂದು ಕೆಲಸ ಮಾಡಬೇಕು ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ