AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂಬ ಉದ್ಯಮಿಯ ಹೇಳಿಕೆಯನ್ನು ಟೀಕಿಸಿದ ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಅವರು ಎಲ್ ಆ್ಯಂಡ್ ಟಿ ಸಂಸ್ಥೆಯ ಮುಖ್ಯಸ್ಥರಾದ ಎಸ್.ಎನ್. ಸುಬ್ರಮಣ್ಯನ್ ಅವರ ವಾರಕ್ಕೆ 90 ಗಂಟೆ ಕೆಲಸದ ಪ್ರಸ್ತಾಪವನ್ನು ತೀವ್ರವಾಗಿ ಟೀಕಿಸಿದ್ದಾರೆ. ಇದು ಉದ್ಯೋಗಿಗಳ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಅವರು ವಾದಿಸಿದ್ದಾರೆ. ಸುಬ್ರಮಣ್ಯನ್ ಅವರ ಹೇಳಿಕೆಯು ಭಾರೀ ಟೀಕೆಗೆ ಒಳಗಾಗಿದೆ.

ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂಬ ಉದ್ಯಮಿಯ ಹೇಳಿಕೆಯನ್ನು ಟೀಕಿಸಿದ ದೀಪಿಕಾ ಪಡುಕೋಣೆ
ದೀಪಿಕಾ-ಸುಬ್ರಮಣ್ಯನ್
ರಾಜೇಶ್ ದುಗ್ಗುಮನೆ
|

Updated on: Jan 10, 2025 | 12:46 PM

Share

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಮಾನಸಿಕ ಆರೋಗ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುವವರು. ಏನೇ ಆದರೂ ಮಾನಸಿಕ ಆರೋಗ್ಯ ಚೆನ್ನಾಗಿರಬೇಕು ಎಂದು ಹೇಳುತ್ತಾ ಬಂದಿದ್ದಾರೆ. ತಮಗೆ ಖಿನ್ನತೆ ಆದಾಗ ಅದನ್ನು ಓಪನ್ ಆಗಿ ಹೇಳಿಕೊಂಡು ಅನೇಕರಲ್ಲಿ ಜಾಗೃತಿ ಮೂಡಿಸಿದ್ದರು. ಈಗ ಎಲ್ ಆ್ಯಂಡ್ ಟಿ ಸಂಸ್ಥೆಯ ಮುಖ್ಯಸ್ಥ  ಎಸ್​.ಎನ್. ಸುಬ್ರಮಣ್ಯನ್ ಅವರ ‘ಉದ್ಯೋಗಿಗಳು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು’ ಎಂಬ ಹೇಳಿಕೆ ಬಗ್ಗೆ ದೀಪಿಕಾ ಪ್ರತಿಕ್ರಿಯಿಸಿದ್ದಾರೆ.

‘ಭಾನುವಾರವೂ ನಿಮ್ಮಿಂದ ಕೆಲಸ ಮಾಡಿಸಲು ಸಾಧ್ಯವಾಗುತ್ತಿಲ್ಲದಿರುವುದಕ್ಕೆ ನನಗೆ ವಿಷಾದ ಇದೆ. ನಾನು ಭಾನುವಾರವೂ ಕೆಲಸ ಮಾಡುತ್ತೇನೆ. ನೀವೂ ಕೂಡ ಭಾನುವಾರ ಕೆಲಸ ಮಾಡಿದರೆ ನನಗೆ ಹೆಚ್ಚು ಖುಷಿಯಾಗುತ್ತದೆ. ಪ್ರತಿ ಉದ್ಯೋಗಿ ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು’ ಎಂದು ಸುಬ್ರಮಣ್ಯನ್ ಅವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ದೀಪಿಕಾ ಟೀಕಿಸಿದ್ದಾರೆ. ‘ಅವರು ಪರಿಸ್ಥಿತಿಯನ್ನು ಮತ್ತಷ್ಟು ಕೆಟ್ಟದಾಗಿ ಮಾಡಿದ್ದಾರೆ’ ಎಂದಿದ್ದಾರೆ.

ವಾರಕ್ಕೆ 90 ಗಂಟೆ ಕೆಲಸ ಮಾಡುವುದು ಎಂದರೆ ಅದು ಸುಲಭದ ಮಾತಲ್ಲ. ಈ ರೀತಿ ಮಾಡಿದಾಗ ವ್ಯಕ್ತಿಯ ಆರೋಗ್ಯದ ಮೇಲೆ, ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀಳುತ್ತದೆ. ಆ ರೀತಿ ಆಗಬಾರದು ಎಂದು ಅನೇಕರು ಅಭಿಪ್ರಾಯಕೊಟ್ಟಿದ್ದಾರೆ. ಈ ವಿಚಾರದಲ್ಲಿ ದೀಪಿಕಾ ಧ್ವನಿ ಎತ್ತಿದ್ದು ಖುಷಿ ಆಗಿದೆ.

ಈ ಮೊದಲು ಕೂಡ ಸುಬ್ರಮಣ್ಯನ್ ಅವರು ‘ಭಾನುವಾರವೂ ಉದ್ಯೋಗಿಗಳು ಕೆಲಸ ಮಾಡಬೇಕು’ ಎಂದಿದ್ದರು. ಆ ಸಂದರ್ಭದಲ್ಲೂ ದೀಪಿಕಾ ಪ್ರತಿಕ್ರಿಯಿಸಿದ್ದರು. ‘ಇಷ್ಟು ದೊಡ್ಡ ಪೋಸ್ಟ್​ನಲ್ಲಿ ಇರುವವರು ಈ ರೀತಿಯ ಹೇಳಿಕೆ ನೀಡುವುದನ್ನು ನೋಡಿದರೆ ಶಾಕ್ ಆಗುತ್ತದೆ’ ಎಂದು ಹೇಳಿದ್ದರು.  ಭಾನುವಾರವೂ ಕೆಲಸ ಮಾಡಬೇಕು ಎಂದಿದ್ದಲ್ಲದೆ ಸುಬ್ರಮಣ್ಯಮ್ ಅವರು, ‘ಉದ್ಯೋಗಿಗಳು ಮನೆಯಲ್ಲಿದ್ದುಕೊಂಡು ಏನು ಮಾಡುತ್ತಾರೆ’ ಎಂದು ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: ಮಗಳೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಅವರು ಈ ವಿಚಾರವಾಗಿ ಧ್ವನಿ ಎತ್ತಿದ್ದು ಅನೇಕರಿಗೆ ಖುಷಿ ನೀಡಿದೆ. ಬಾಲಿವುಡ್​ನ ಎಲ್ಲರೂ ಈ ರೀತಿಯ ವಿಚಾರ ಬಂದಾಗ ಮುಂದೆ ಬಂದು ಕೆಲಸ ಮಾಡಬೇಕು ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ