Deepika Padukone: ಆ ಸಂದರ್ಭದಲ್ಲಿ ನನ್ನ ಗುರುತೇ ಸಿಗುತ್ತಿರಲಿಲ್ಲ; ಜೀವನದ ಅತ್ಯಂತ ಕಷ್ಟದ ದಿನಗಳನ್ನು ನೆನೆದ ದೀಪಿಕಾ

Covid 19: ಕೊವಿಡ್ 19 ಬಾಲಿವುಡ್ ತಾರೆಯರನ್ನೂ ಬಿಟ್ಟಿಲ್ಲ. ಖ್ಯಾತ ನಟಿಯರೂ ಸೇರಿದಂತೆ ಹಲವರಲ್ಲಿ ಕಾಣಿಸಿಕೊಂಡು ಅವರನ್ನು ತಲ್ಲಣಗೊಳಿಸಿದೆ. ಇತ್ತೀಚೆಗೆ ನಟಿ ದೀಪಿಕಾ ಪಡುಕೋಣೆ ಈ ಕುರಿತು ಮಾತನಾಡಿದ್ದಾರೆ.

Deepika Padukone: ಆ ಸಂದರ್ಭದಲ್ಲಿ ನನ್ನ ಗುರುತೇ ಸಿಗುತ್ತಿರಲಿಲ್ಲ; ಜೀವನದ ಅತ್ಯಂತ ಕಷ್ಟದ ದಿನಗಳನ್ನು ನೆನೆದ ದೀಪಿಕಾ
ದೀಪಿಕಾ ಪಡುಕೋಣೆ
Follow us
| Updated By: shivaprasad.hs

Updated on: Jan 08, 2022 | 9:22 AM

ಇತ್ತೀಚೆಗೆ ಹಲವು ಬಾಲಿವುಡ್ ತಾರೆಯರಿಗೆ ಸೋಂಕು ಕಾಣಿಸಿಕೊಂಡಿತ್ತು. ಕೆಲವರು ಆಸ್ಪತ್ರೆಗೂ ದಾಖಲಾಗಿದ್ದು, ಅಭಿಮಾನಿಗಳ ಚಿಂತೆಗೆ ಕಾರಣವಾಗಿತ್ತು. ಆದರೆ ಅದೃಷ್ಟವಶಾತ್ ಈ ಬಾರಿ ಸೋಂಕಿನ ಪ್ರಭಾವ ಎರಡನೇ ಅಲೆಯಷ್ಟು ತೀವ್ರವಾಗಿಲ್ಲ. ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ (Deepika Padukone) ಎರಡನೇ ಅಲೆಯ ಸಂದರ್ಭದಲ್ಲಿ ಸೋಂಕಿಗೆ ತುತ್ತಾಗಿದ್ದರು. ದೀಪಿಕಾ ತಂದೆ ಪ್ರಕಾಶ್ (Prakash), ತಾಯಿ ಉಜ್ಜಲಾ ಹಾಗೂ ಸೋದರಿ ಅನಿಶಾ ಕೂಡ ಸೋಂಕಿಗೆ ತುತ್ತಾಗಿದ್ದರು. ಇತ್ತೀಚೆಗೆ ಸಂದರ್ಶನವೊಂದರಲ್ಲಿ ದೀಪಿಕಾ ಆ ಸಂದರ್ಭದಲ್ಲಿ ಪರಿಸ್ಥಿತಿ ಎಷ್ಟು ಭೀಕರವಾಗಿತ್ತು ಎನ್ನುವುದನ್ನು ವಿವರಿಸಿದ್ದಾರೆ. ಸೋಂಕಿಗೆ ತುತ್ತಾಗಿದ್ದ ಸಂದರ್ಭದಲ್ಲಿ ದೈಹಿಕವಾಗಿ ತನ್ನ ಗುರುತೇ ಸಿಗುತ್ತಿರಲಿಲ್ಲ. ತಲೆಯೂ ಓಡುತ್ತಿರಲಿಲ್ಲ. ಜೀವನದ ಅತ್ಯಂತ ಕಷ್ಟದ ದಿನಗಳು ಅವಾಗಿದ್ದವು ಎಂದು ದೀಪಿಕಾ ಹೇಳಿಕೊಂಡಿದ್ದಾರೆ. ಈ ಸಂಕಷ್ಟದ ಪರಿಸ್ಥಿತಿ ದಾಟಿ ಮತ್ತೆ ಮೊದಲಿನಂತಾಗಲು ದೀಪಿಕಾಗೆ ಬರೋಬ್ಬರಿ ಎರಡು ತಿಂಗಳ ವಿಶ್ರಾಂತಿ ಬೇಕಾಯಿತಂತೆ.

ಇತ್ತೀಚೆಗೆ ಫಿಲ್ಮ್ ಕಂಪಾನಿಯನ್ ಜತೆ ಮಾತನಾಡಿದ ದೀಪಿಕಾ, ಕೊವಿಡ್ ತಮ್ಮನ್ನು ಹೇಗೆ ಬಾಧಿಸಿತ್ತು ಎಂಬುದನ್ನು ವಿವರಿಸಿದ್ದಾರೆ. ‘‘ಕೊವಿಡ್ ನಂತರ ದೈಹಿಕವಾಗಿ ನಾನು ಸಂಪೂರ್ಣ ಬದಲಾಗಿದ್ದೆ. ಔಷಧಿಗಳನ್ನು ತೆಗದುಕೊಂಡ ಪರಿಣಾಮ ನನ್ನನ್ನು ಗುರುತಿಸಲು ಕೂಡ ಸಾಧ್ಯವಾಗುತ್ತಿರಲಿಲ್ಲ. ಕೊರೊನಾವೇ ವಿಚಿತ್ರ, ಅದಕ್ಕೆ ತುತ್ತಾದರೆ ನಮ್ಮ ದೇಹ ಹಾಗೂ ಮನಸ್ಸು ಕೂಡ ಬಹಳ ಬದಲಾಗುತ್ತದೆ’’ ಎಂದಿದ್ದಾರೆ.

ಸಂದರ್ಶನದಲ್ಲಿ ದೀಪಿಕಾ ಮತ್ತೊಂದು ವಿಚಾರ ಹಂಚಿಕೊಂಡಿದ್ದಾರೆ. ಕೊರೊನಾ ಸಂದರ್ಭದ ಅನಾರೋಗ್ಯಕ್ಕಿಂತ ಕೊರೊನಾ ನಂತರದ ಸಮಸ್ಯೆಗಳು ತಮ್ಮನ್ನು ತಲ್ಲಣಗೊಳಿಸಿತು ಎಂದಿದ್ದಾರೆ. ‘‘ನನಗೆ ಸೋಂಕು ಕಾಣಿಸಿಕೊಂಡಾಗ ಅಷ್ಟೇನೂ ಸಮಸ್ಯೆಯಾಗಲಿಲ್ಲ. ಆದರೆ ನಂತರದಲ್ಲಿ ಸುಮಾರು ಎರಡು ತಿಂಗಳ ಕಾಲ ನನ್ನ ಮನಸ್ಸು, ಯೋಚನೆ ಯಾವುದೂ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಆ ದಿನಗಳು ಜೀವನದ ಬಹಳ ಕಷ್ಟದ ದಿನಗಳಾಗಿದ್ದವು’’ ಎಂದು ಹೇಳಿಕೊಂಡಿದ್ದಾರೆ.

ಪ್ರಸ್ತುತ ಬಾಲಿವುಡ್ ತಾರೆಯರು ಹಾಗೂ ವಿವಿಧ ರಂಗದ ಪ್ರಮುಖರಿಗೆ ಸೋಂಕು ತಗುಲುತ್ತಿರುವುದರ ಹಿನ್ನೆಲೆಯಲ್ಲಿ ದೀಪಿಕಾ ಮಾತು ಮಹತ್ವ ಪಡೆದಿದೆ. ಚಿತ್ರಗಳ ವಿಷಯಕ್ಕೆ ಬಂದರೆ ದೀಪಿಕಾ ‘ಗೆಹ್ರಾಯಿಯಾನ್’ ಚಿತ್ರದ ಬಿಡುಗಡೆಗೆ ಕಾಯುತ್ತಿದ್ದಾರೆ. ಶಕುನ್ ಬಾತ್ರಾ ನಿರ್ದೇಶನದ ಈ ಚಿತ್ರದಲ್ಲಿ ಸಿದ್ಧಾಂತ್ ಚತುರ್ವೇದಿ, ಅನನ್ಯಾ ಪಾಂಡೆ ಮೊದಲಾದವರು ಕಾಣಿಸಿಕೊಂಡಿದ್ದಾರೆ. ಫೆಬ್ರವರಿ 11ರಂದು ನೇರವಾಗಿ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಚಿತ್ರ ತೆರೆಕಾಣಲಿದೆ.

ಇದನ್ನೂ ಓದಿ:

Happy Birthday Yash: ಯಶ್​ ಹುಟ್ಟುಹಬ್ಬಕ್ಕೆ ‘ಕೆಜಿಎಫ್​ 2’ ಹೊಸ ಪೋಸ್ಟರ್​; ರಿಲೀಸ್​ ಡೇಟ್​ ಬಗ್ಗೆ ಇದ್ದ ಅನುಮಾನ ಕ್ಲಿಯರ್​

ಡಾನ್ಸಿಂಗ್​ ಚಾಂಪಿಯನ್​ ಶೋನಲ್ಲಿ ಚಿರು-ರಾಯನ್​ ಬಗ್ಗೆ ಮೇಘನಾ ರಾಜ್​ ಸರ್ಜಾ ಹೃದಯಸ್ಪರ್ಶಿ ಮಾತು

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ