AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಣವೀರ್ ಮತ್ತು ನಾನು ಕೆಲವು ದಿನಗಳಿಂದ ದೂರ ಇದ್ದೇವೆ’: ದೀಪಿಕಾ ಹೀಗೆ ಹೇಳಿದ್ದು ಯಾಕೆ?

Deepika Padukone | Ranveer Singh: ರಣವೀರ್​ ಸಿಂಗ್​ ಮತ್ತು ದೀಪಿಕಾ ಪಡುಕೋಣೆ ಬಣ್ಣದ ಲೋಕದಲ್ಲಿ ಬ್ಯುಸಿ ಆಗಿದ್ದಾರೆ. ಈ ದಂಪತಿ ಬಗ್ಗೆ ಇತ್ತೀಚೆಗೆ ಕೆಲವು ಅಂತೆ-ಕಂತೆಗಳು ಹರಿದಾಡಲು ಆರಂಭಿಸಿವೆ.

‘ರಣವೀರ್ ಮತ್ತು ನಾನು ಕೆಲವು ದಿನಗಳಿಂದ ದೂರ ಇದ್ದೇವೆ’: ದೀಪಿಕಾ ಹೀಗೆ ಹೇಳಿದ್ದು ಯಾಕೆ?
ರಣವೀರ್ ಸಿಂಗ್, ದೀಪಿಕಾ ಪಡುಕೋಣೆ
Follow us
TV9 Web
| Updated By: ಮದನ್​ ಕುಮಾರ್​

Updated on:Oct 12, 2022 | 10:53 AM

ನೆಚ್ಚಿನ ಸೆಲೆಬ್ರಿಟಿ ದಂಪತಿ ಚೆನ್ನಾಗಿ ಬಾಳಬೇಕು ಎಂದು ಫ್ಯಾನ್ಸ್​ ಬಯಸುತ್ತಾರೆ. ಅಂಥ ಸೆಲೆಬ್ರಿಟಿಗಳ ಬದುಕಿನಲ್ಲಿ ಏನಾದರೂ ಮನಸ್ತಾಪ ಎದುರಾದರೆ ದೊಡ್ಡ ಸುದ್ದಿ ಆಗುತ್ತದೆ. ಇತ್ತೀಚೆಗೆ ದೀಪಿಕಾ ಪಡುಕೋಣೆ (Deepika Padukone) ಮತ್ತು ರಣವೀರ್​ ಸಿಂಗ್​ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಬಗ್ಗೆ ಗಾಸಿಪ್​ ಹಬ್ಬಿತ್ತು. ಆ ಗಾಳಿಸುದ್ದಿ ಕೇಳಿ ಅಭಿಮಾನಿಗಳಿಗೆ ಶಾಕ್​ ಆಗಿತ್ತು. ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಮದುವೆ ಆದ ಈ ಜೋಡಿಗೆ ಅಂಥದ್ದೇನಾಯ್ತು ಎಂದು ಎಲ್ಲರೂ ತಲೆ ಕೆಡಿಸಿಕೊಂಡಿದ್ದುಂಟು. ನಂತರ ರಣವೀರ್​ ಸಿಂಗ್​ (Ranveer Singh) ಅವರ ಆ ಗಾಸಿಪ್​ಗಳಿಗೆ ತೆರೆ ಎಳೆದಿದ್ದರು. ಈಗ ದೀಪಿಕಾ ಪಡುಕೋಣೆ ಕಡೆಯಿಂದಲೂ ಪ್ರತಿಕ್ರಿಯೆ ಬಂದಿದೆ.

ಕಳೆದ ಕೆಲವು ದಿನಗಳಿಂದ ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ಅವರು ದೂರ ಇದ್ದಾರೆ. ಹಾಗಂತ ಅವರ ನಡುವೆ ಏನೋ ಕಿರಿಕ್​ ಆಗಿದೆ ಅಂತೇನಿಲ್ಲ. ಅವರು ಕೆಲಸದ ಸಲುವಾಗಿ ಬೇರೆ ಬೇರೆ ನಗರಗಳಿಗೆ ತೆರಳಿದ್ದಾರೆ. ಇಬ್ಬರೂ ಕೂಡ ಬಣ್ಣದ ಲೋಕದಲ್ಲಿ ಬ್ಯುಸಿ ಆಗಿದ್ದಾರೆ. ಹಾಗಾಗಿ ಕೆಲವು ದಿನಗಳಮಟ್ಟಿಗೆ ಮನೆಯಿಂದ ದೂರ ಇರುವುದಾಗಿ ಹೇಳಿದ್ದಾರೆ.

‘ನನ್ನ ಪತಿ ಒಂದು ವಾರಗಳ ಕಾಲ ಮ್ಯೂಸಿಕ್​ ಕಾರ್ಯಕ್ರಮದಲ್ಲಿ ಬ್ಯುಸಿ ಇದ್ದರು. ಈಗತಾನೆ ವಾಪಸ್​ ಬಂದಿದ್ದಾರೆ. ನನ್ನ ಮುಖ ನೋಡಿದರೆ ಅವರಿಗೆ ಖಂಡಿತಾ ಖುಷಿ ಆಗಲಿದೆ’ ಎಂದು ದೀಪಿಕಾ ಪಡುಕೋಣೆ ಹೇಳಿದ್ದಾರೆ. ಅವರು ಇತ್ತೀಚೆಗೆ ಪ್ಯಾರಿಸ್​ನಲ್ಲಿ ಒಂದು ಫ್ಯಾಷನ್​ ವೀಕ್​ನಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ
Image
Ranveer Singh: ಮತ್ತೆ ಬೆತ್ತಲಾಗುವಂತೆ ರಣವೀರ್​ ಸಿಂಗ್​ಗೆ ಬೇಡಿಕೆ; ಈ ಬಾರಿ ಆಹ್ವಾನ ಬಂದಿರೋದು ಪ್ರಾಣಿಗಳಿಗೋಸ್ಕರ
Image
Ranveer Singh: ಬೆತ್ತಲೆ ಫೋಟೋ ಹಂಚಿಕೊಂಡ ರಣವೀರ್​ ಸಿಂಗ್​ ವಿರುದ್ಧ ಕೇಸ್​ ದಾಖಲಿಸಿದ ಮುಂಬೈ ಪೊಲೀಸರು
Image
Alia Bhatt: ‘ರಣವೀರ್​ ಸಿಂಗ್​ ಜತೆ ಏನು ಬೇಕಾದ್ರೂ ಮಾತಾಡ್ತೀನಿ’; ಮದುವೆ ಬಳಿಕ ಆಲಿಯಾ ಭಟ್​ ಅಚ್ಚರಿಯ ಹೇಳಿಕೆ
Image
Ranveer Singh: ರಣವೀರ್​ ಸಿಂಗ್​ ಒಟ್ಟು ಆಸ್ತಿ ಎಷ್ಟು? 2 ಸಿನಿಮಾ ಸೋತ ಮಾತ್ರಕ್ಕೆ ಕರಗಿಲ್ಲ ಸ್ಟಾರ್​ ನಟನ ನೂರಾರು ಕೋಟಿ ಸಂಪತ್ತು

ಗಾಸಿಪ್​ ಹಬ್ಬಿದ್ದು ಹೇಗೆ?

ವಿದೇಶಿ ಸೆನ್ಸಾರ್​ ಮಂಡಳಿಯಲ್ಲಿ ಉಮೈರ್ ಸಂಧು ಸದಸ್ಯನಾಗಿದ್ದಾರೆ. ಭಾರತದ ಸಿನಿಮಾಗಳನ್ನು ಅವರು ವಿಮರ್ಶೆ ಮಾಡುತ್ತಾರೆ. ಆ ಮೂಲಕ ಅವರು ಸೋಶಿಯಲ್​ ಮೀಡಿಯಾದಲ್ಲಿ ಕೊಂಚ ಫೇಮಸ್​ ಆಗಿದ್ದಾರೆ. ಅವರ ಖಾತೆಯನ್ನು ಸಿನಿಪ್ರಿಯರು ಫಾಲೋ ಮಾಡುತ್ತಾರೆ. ಇತ್ತೀಚೆಗೆ ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ಸಂಸಾರದ ಬಿರುಕಿನ ಬಗ್ಗೆ ಉಮೈರ್ ಸಂಧು ಟ್ವೀಟ್​ ಮಾಡಿ, ಎಲ್ಲರನ್ನೂ ಅಚ್ಚರಿಗೆ ದೂಡಿದ್ದರು. ‘ಬ್ರೇಕಿಂಗ್​! ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ನಡುವೆ ಎಲ್ಲವೂ ಸರಿ ಇಲ್ಲ’ ಎಂದು ಉಮೈರ್​ ಸಂಧು ಟ್ವೀಟ್​ ಮಾಡಿದ್ದರು.

ಗಾಸಿಪ್​ ಹಬ್ಬಿದ ಬಳಿಕ ರಣವೀರ್​ ಸಿಂಗ್​ ಅವರು ಒಂದು ಕಾರ್ಯಕ್ರಮದಲ್ಲಿ ದೀಪಿಕಾ ಬಗ್ಗೆ ಮಾತನಾಡಿದ್ದರು. ‘ನಾನು ಮತ್ತು ದೀಪಿಕಾ ಪಡುಕೋಣೆ 2012ರಲ್ಲಿ ಡೇಟಿಂಗ್​ ಮಾಡಲು ಆರಂಭಿಸಿದೆವು. 2022ಕ್ಕೆ ಹತ್ತು ವರ್ಷ ಆಯ್ತು’ ಎಂದು ಹೇಳುವ ಮೂಲಕ ತಾವಿಬ್ಬರೂ ಇನ್ನೂ ಅನ್ಯೋನ್ಯವಾಗಿಯೇ ಇದ್ದೇವೆ ಎಂದು ರಣವೀರ್​ ಸಿಂಗ್​ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:53 am, Wed, 12 October 22

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು