AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಸಿನಿಮಾ ದೊಡ್ಡ ಸಕಸ್ಸ್ ಕಂಡರೂ ತುಟಿಪಿಟಿಕ್ ಎನ್ನದ ದೀಪಿಕಾ ಪಡುಕೋಣೆ

ರಣವೀರ್ ಸಿಂಗ್ ನಟನೆಯ 'ಧುರಂಧರ್ 2' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಆದರೂ, ಪತ್ನಿ ದೀಪಿಕಾ ಪಡುಕೋಣೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದೀಪಿಕಾ ಅವರ ಮೌನಕ್ಕೆ ಅವರ ಎಡಪಂಥೀಯ ಸಿದ್ಧಾಂತಗಳು ಹಾಗೂ ಸಿನಿಮಾದ ಬಲಪಂಥೀಯ ಚಿಂತನೆಗಳು ಕಾರಣವೋ ಅಥವಾ ಇತ್ತೀಚಿಗೆ ಜನಿಸಿದ ಮಗುವಿನ ಆರೈಕೆಯಲ್ಲಿ ನಿರತರಾಗಿರುವುದು ಕಾರಣವೋ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.

ಪತಿಯ ಸಿನಿಮಾ ದೊಡ್ಡ ಸಕಸ್ಸ್ ಕಂಡರೂ ತುಟಿಪಿಟಿಕ್ ಎನ್ನದ ದೀಪಿಕಾ ಪಡುಕೋಣೆ
ರಣವೀರ್-ದೀಪಿಕಾ
ರಾಜೇಶ್ ದುಗ್ಗುಮನೆ
|

Updated on:Mar 21, 2026 | 11:57 AM

Share

ಬಾಲಿವುಡ್​ ಸಿನಿಮಾ ‘ಧುರಂಧರ್ 2’ (Dhurandhar 2) ಸೂಪರ್ ಹಿಟ್ ಆಗಿದೆ. ರಣವೀರ್ ಸಿಂಗ್ ನಟನೆಯ ಈ ಚಿತ್ರ ಗಮನ ಸೆಳೆಯುತ್ತಿದೆ. ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ರಣವೀರ್ ವೃತ್ತಿ ಜೀವನದ ಅತ್ಯಂತ ದೊಡ್ಡ ಯಶಸ್ಸು ಇದು. ಆದಾಗ್ಯೂ ಅವರ ಪತ್ನಿ ದೀಪಿಕಾ ಪಡುಕೋಣೆ ಅವರು ಈ ಬಗ್ಗೆ ಯಾವುದೇ ಪೋಸ್ಟ್ ಮಾಡಿಲ್ಲ. ಇದಕ್ಕೆ ಕಾರಣ ಏನು ಎಂಬ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಯಿತು. ಈದ್ ಪ್ರಯುಕ್ತ ಈ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ಭರ್ಜರಿ ಸಕಸ್ಸ್​ ಕಂಡಿದೆ. ಸಿನಿಮಾ ಎರಡನೇ ದಿನಕ್ಕೆ ಭಾರತದಲ್ಲಿ 269 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಈ ಚಿತ್ರವನ್ನು ನೋಡಿದವರೆಲ್ಲರೂ ಹಾಡಿ ಹೊಗಳುತ್ತಿದ್ದಾರೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಸಿನಿಮಾ ಇಷ್ಟ ಆಗಿದೆ.

ಆದರೆ, ದೀಪಿಕಾ ಪಡುಕೋಣೆ ಮಾತ್ರ ಈ ವಿಷಯದಲ್ಲಿ ಇನ್ನೂ ಮೌನವಾಗಿದ್ದಾರೆ. ಈ ಬಗ್ಗೆ ರಣವೀರ್ ಸಿಂಗ್ ಅವರ ಪತ್ನಿ ದೀಪಿಕಾ ಏಕೆ ಮೌನವಾಗಿದ್ದಾರೆ ಎಂದು ಎಲ್ಲರೂ ಕೇಳುತ್ತಿದ್ದಾರೆ. ಈ ಬಗ್ಗೆ ಅವರು ಯಾವುದೇ ಪೋಸ್ಟ್ ಹಾಕಿಲ್ಲ. ಅವರು ಪ್ರೀಮಿಯರ್ ಶೋಗಳಲ್ಲೂ ಕಾಣಿಸಿಕೊಂಡಿಲ್ಲ. ಇದು ಏಕೆ ಎಂಬ ಚರ್ಚೆ ನಡೆಯುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ದೀಪಿಕಾ ಪಡುಕೋಣೆ ಅವರು ಎಡಪಂಥೀಯ ಆಲೋಚನೆಗಳಿಂದ ಪ್ರಭಾವಿತರಾದವರು ಎಂದು ಹೇಳಲಾಗುತ್ತಾ ಇದೆ. ‘ಧುರಂಧರ್ 2’ ಸಿನಿಮಾ ಬಲ ಪಂಥೀಯ ಚಿಂತನೆಗಳನ್ನು ಹೊಂದಿದೆ. ಈ ಕಾರಣದಿಂದ ದೀಪಿಕಾ ಪಡುಕೋಣೆ ಅವರು ಮೌನ ತಾಳಿರಬಹುದು ಎಂಬ ಚರ್ಚೆ ನಡೆದಿದೆ.

ಇದನ್ನೂ ಓದಿ: ಆ ಒಂದು ವಿಷಯದ ಬಗ್ಗೆ ಕಂಪ್ಲೇಂಟ್ ಮಾಡಿದ ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಅವರು ಮಗುವಿನ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಅವರು ಸಿನಿಮಾ ನೋಡೋದು ವಿಳಂಬ ಮಾಡುತ್ತಿರಬಹುದು ಎಂದು ಹೇಳಲಾಗುತ್ತಾ ಇದೆ. ಈ ಕಾರಣದಿಂದ ಅವರು ಈ ಬಗ್ಗೆ ಮೌನ ತಾಳಿರಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:53 am, Sat, 21 March 26

Follow Us
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ