AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾನ್ ವರ್ಲ್ಡ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಆದರೆ ನಾಯಕಿಯಾಗಿ ಅಲ್ಲ

ಇತ್ತೀಚೆಗಷ್ಟೆ ಹೆಣ್ಣು ಮಗುವಿನ ತಾಯಿ ಆಗಿರುವ ದೀಪಿಕಾ ಪಡುಕೋಣೆ ಸಿನಿಮಾಗಳಿಂದ ಬ್ರೇಕ್ ಪಡೆದಿದ್ದಾರೆ. ಆದರೆ ಕೆಲವು ಕತೆಗಳನ್ನು ಕೇಳಿ ಸಿನಿಮಾಗಳಿಗೆ ಒಪ್ಪಿಗೆ ನೀಡುತ್ತಿದ್ದಾರೆ. ಭಾರತದ ಅತಿ ದೊಡ್ಡ ಬಜೆಟ್​ನ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ, ಅದೂ ನಾಯಕಿಯಾಗಿ ಅಲ್ಲ.

ಪ್ಯಾನ್ ವರ್ಲ್ಡ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಆದರೆ ನಾಯಕಿಯಾಗಿ ಅಲ್ಲ
ಮಂಜುನಾಥ ಸಿ.
|

Updated on: Nov 01, 2024 | 10:50 AM

Share

ಇತ್ತೀಚೆಗಷ್ಟೆ ತಾಯಿ ಆಗಿರುವ ದೀಪಿಕಾ ಪಡುಕೋಣೆ ಪ್ರಸ್ತುತ ಸಿನಿಮಾಗಳಿಂದ ಬ್ರೇಕ್ ಪಡೆದುಕೊಂಡಿದ್ದಾರೆ. ಬ್ರೇಕ್​ನಲ್ಲಿರುವಾಗಲಿ ಕೆಲವು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಅದರಲ್ಲೂ ಭಾರತ ಅತ್ಯಂತ ನಿರೀಕ್ಷಿತ, ಹಾಗೂ ಈವರೆಗಿನ ಅತಿ ಹೆಚ್ಚು ಬಜೆಟ್​ನ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಆದರೆ ದೀಪಿಕಾ ಸಾಮಾನ್ಯವಾಗಿ ನಾಯಕಿ ಪಾತ್ರದಲ್ಲಿ ನಟಿಸುತ್ತಾರೆ ಆದರೆ ಈ ಸಿನಿಮಾದಲ್ಲಿ ಅವರು ನಾಯಕಿ ಪಾತ್ರದಲ್ಲಿ ನಟಿಸುತ್ತಿಲ್ಲ. ಮಾತ್ರವಲ್ಲದೆ ದೀಪಿಕಾ ಪಡುಕೋಣೆ ಚಿತ್ರೀಕರಣ ಪ್ರಾರಂಭಿಸುವುದು ಇನ್ನೂ ಒಂದು ವರ್ಷದ ಬಳಿಕವಂತೆ.

‘ಆರ್​ಆರ್​ಆರ್’ ಸಿನಿಮಾ ಬಿಡುಗಡೆಗೆ ಮುಂಚೆಯೇ ರಾಜಮೌಳಿ, ತಮ್ಮ ಮುಂದಿನ ಸಿನಿಮಾವನ್ನು ಮಹೇಶ್ ಬಾಬು ಜೊತೆಗೆ ಮಾಡುವುದಾಗಿ ಘೋಷಣೆ ಮಾಡಿದ್ದರು. ‘ಆರ್​ಆರ್​ಆರ್’ ಸಿನಿಮಾ ಬ್ಲಾಕ್ ಬಸ್ಟರ್ ಆದ ಬಳಿಕ ರಾಜಮೌಳಿ ಹಾಗೂ ಮಹೇಶ್ ಬಾಬು ಸಿನಿಮಾದ ಸ್ಕೇಲ ದೊಡ್ಡದಾಗಿದ್ದು, ಕತೆ, ಚಿತ್ರಕತೆ, ತಂತ್ರಜ್ಞಾನ, ಕಲಾವಿದರು ಎಲ್ಲವೂ ಬದಲಾಗಿದೆ. ಮಾತ್ರವಲ್ಲದೆ ಈ ಸಿನಿಮಾದ ಬಜೆಟ್ 1000 ಕೋಟಿಗೂ ಹೆಚ್ಚಾಗಿದೆ. ಸಿನಿಮಾದಲ್ಲಿ ಹಲವು ವಿದೇಶಿ ಕಲಾವಿದರು ನಟಿಸುತ್ತಿದ್ದು, ಸಿನಿಮಾದ ಸಣ್ಣ-ಪುಟ್ಟ ಪಾತ್ರಕ್ಕೂ ಸಹ ಸ್ಟಾರ್ ನಟ-ನಟಿಯರನ್ನು ತೆಗೆದುಕೊಳ್ಳಲಾಗುತ್ತಿದೆ.

ಇದೀಗ ರಾಜಮೌಳಿ ಹಾಗೂ ಮಹೇಶ್ ಬಾಬು ಅವರ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸಲಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಈ ಸಿನಿಮಾದ ನಾಯಕಿ ಅಲ್ಲ ಎನ್ನಲಾಗುತ್ತಿದೆ. ವಿದೇಶಿ ನಟಿಯೊಬ್ಬರು ಈ ಸಿನಿಮಾದ ನಾಯಕಿ ಆಗಿದ್ದು, ಸಿನಿಮಾದಲ್ಲಿ ದೀಪಿಕಾರದ್ದು ಪೋಷಕ ಪಾತ್ರ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಲು ಇನ್ನೂ ಸಾಕಷ್ಟು ಸಮಯವಿದ್ದು, ದೀಪಿಕಾ ಪಡುಕೋಣೆ ಈ ಚಿತ್ರತಂಡವನ್ನು ಒಂದು ವರ್ಷದ ಬಳಿಕ ಸೇರಿಕೊಳ್ಳಲಿದ್ದಾರಂತೆ.

ಇದನ್ನೂ ಓದಿ:ದೀಪಿಕಾ ಪಡುಕೋಣೆ ಕನ್ನಡದಲ್ಲಿ ಮಾತನಾಡಿದ ಈ ವಿಡಿಯೋ ನೋಡಿದ್ರಾ?

ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಬಹುತೇಕ ಅಂತ್ಯವಾಗಿದ್ದು, ಪ್ರಸ್ತುತ ಸಿನಿಮಾದ ಚಿತ್ರೀಕರಣಕ್ಕೆ ಲೊಕೇಶನ್ ಹುಡುಕುವ ಕಾರ್ಯದಲ್ಲಿ ರಾಜಮೌಳಿ ನಿರತರಾಗಿದ್ದಾರೆ. ಆಫ್ರಿಕಾಗೆ ತೆರಳಿರುವ ರಾಜಮೌಳಿ ಲೊಕೇಶ್ ಅಂತಿಮಗೊಳಿಸುತ್ತಿದ್ದಾರೆ. ಇದರ ಜೊತೆಗೆ ಕಲಾವಿದರನ್ನು ಫೈನಲ್ ಗೊಳಿಸುವ ಕಾರ್ಯವೂ ಚಾಲ್ತಿಯಲ್ಲಿದೆ. ಹಾಲಿವುಡ್​ನ ಕೆಲವು ನಟ-ನಟಿಯರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಭಾರತ ಭಾಷೆಗಳು ಸೇರಿದಂತೆ ಚೀನಾ, ಜಪಾನ್, ಇಂಡೊನೇಷಿಯನ್, ರಷ್ಯನ್ ಇನ್ನೂ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾ ಪ್ಯಾನ್ ವರ್ಲ್ಡ್ ಸಿನಿಮಾ ಆಗಿರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು