AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲಾಮರ್​ ಲುಕ್​ ಬಿಟ್ಟು ಆ್ಯಕ್ಷನ್​ ಅವತಾರ ತಾಳಲಿದ್ದಾರೆ ದೀಪಿಕಾ ಪಡುಕೋಣೆ

ಈಗ ಶಾರುಖ್​ ಪಠಾಣ್​ ಸಿನಿಮಾ ಮೂಲಕ ತೆರೆ ಮೇಲೆ ಬರಲು ಸಿದ್ಧರಾಗಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ನಾಯಕಿ. ಈ ಸಿನಿಮಾದಲ್ಲಿ ಅವರೂ ಆ್ಯಕ್ಷನ್ ಮೆರೆಯುತ್ತಿದ್ದಾರೆ.

ಗ್ಲಾಮರ್​ ಲುಕ್​ ಬಿಟ್ಟು ಆ್ಯಕ್ಷನ್​ ಅವತಾರ ತಾಳಲಿದ್ದಾರೆ ದೀಪಿಕಾ ಪಡುಕೋಣೆ
ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ
TV9 Web
| Edited By: |

Updated on: Jul 26, 2021 | 9:40 PM

Share

ದೀಪಿಕಾ ಪಡುಕೋಣೆ ಇಲ್ಲಿವರೆಗೆ ಸಾಕಷ್ಟು ಸಿನಿಮಾಗಳಲ್ಲಿ ಗ್ಲಾಮರಸ್ ​ಲುಕ್​ನಲ್ಲಿ ಕಾಣಿಸಿಕೊಂಡಿದ್ದರು. ಇದೇ ಮೊದಲ ಬಾರಿಗೆ ಅವರು ಆ್ಯಕ್ಷನ್​ ಅವತಾರ ತಾಳಲಿದ್ದಾರೆ. ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಚಿತ್ರದಲ್ಲಿ ದೀಪಿಕಾ ಆ್ಯಕ್ಷನ್​ ಮೆರೆಯಲಿದ್ದಾರೆ. ಇದಕ್ಕಾಗಿ ಅವರು ದೇಹವನ್ನು ಹುರಿಗೊಳಿಸಿಕೊಳ್ಳುತ್ತಿದ್ದಾರೆ.

2013ರಲ್ಲಿ ತೆರೆಗೆ ಬಂದಿದ್ದ ಶಾರುಖ್​ ಖಾನ್​ ನಟನೆಯ ಚೆನ್ನೈ ಎಕ್ಸ್​ಪ್ರೆಸ್​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಹ್ಯಾಪಿ ನ್ಯೂ ಇಯರ್​ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದ್ದರೂ, ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಾದ ನಂತರ ತೆರೆಕಂಡ ಎಲ್ಲ ಚಿತ್ರಗಳೂ ನೆಲ ಕಚ್ಚಿದ್ದವು. ಈಗ ಶಾರುಖ್​ ಪಠಾಣ್​ ಸಿನಿಮಾ ಮೂಲಕ ತೆರೆ ಮೇಲೆ ಬರಲು ಸಿದ್ಧರಾಗಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ನಾಯಕಿ. ಈ ಸಿನಿಮಾದಲ್ಲಿ ಅವರೂ ಆ್ಯಕ್ಷನ್ ಮೆರೆಯುತ್ತಿದ್ದಾರೆ.

ಸಿದ್ಧಾರ್ಥ್​ ಆನಂದ್ ನಿರ್ದೇಶನ ಮಾಡುತ್ತಿರುವ ‘ಪಠಾಣ್​’ ಚಿತ್ರದಲ್ಲಿ  ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ. ದೀಪಿಕಾ ಕೂಡ ಆ್ಯಕ್ಷನ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೊದಲು ‘ಎಕ್ಸ್​ಎಕ್ಸ್​ಎಕ್ಸ್: ರಿಟರ್ನ್​ ಆಫ್​ ಕ್ಯಾಂಡರ್​ ಕೇಜ್’​ ಚಿತ್ರದಲ್ಲಿ ದೀಪಿಕಾ ಆ್ಯಕ್ಷನ್​ ಮೆರೆದಿದ್ದರು. ಇದನ್ನು ನೋಡಿದ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದರು. ಈಗ ಅವರು ಮತ್ತೆ ಇದೇ ರೀತಿಯ ಆ್ಯಕ್ಷನ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳೋಕೆ ರೆಡಿ ಆಗಿದ್ದಾರೆ. ಇದಕ್ಕಾಗಿ ಅವರು ಜಿಮ್​ನಲ್ಲೂ ವರ್ಕೌಟ್​ ಮಾಡುತ್ತಿದ್ದಾರೆ.

ನಟ ರಜನಿಕಾಂತ್​ ಅವರ ಮುಂದಿನ ಚಿತ್ರಕ್ಕೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಕಾಲ್​ ಶೀಟ್​ ಕೇಳಲಾಗಿದೆ ಎನ್ನುವ ಮಾತು ಕೇಳಿ ಬಂದಿದೆ. ‘ಕೊಚಡಿಯನ್’​ ಸಿನಿಮಾದಲ್ಲಿ ರಜನಿ ಹಾಗೂ ದೀಪಿಕಾ ಒಟ್ಟಾಗಿ ಕೆಲಸ ಮಾಡಿದ್ದರು. ಆದರೆ, ಇದು ಮೋಷನ್ ಕ್ಯಾಪ್ಚರ್​​ ಸಿನಿಮಾ ಆಗಿತ್ತು. ಒಂದೊಮ್ಮೆ ಈ ಹೊಸ ಚಿತ್ರದಲ್ಲಿ ದೀಪಿಕಾ ನಟಿಸೋಕೆ ಒಪ್ಪಿದರೆ ಇದೇ ಮೊದಲ ಬಾರಿಗೆ ರಜನಿ ಜತೆ ಅವರು ನೈಜವಾಗಿ ತೆರೆಹಂಚಿಕೊಂಡಂತಾಗಲಿದೆ ಈ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ.

ಇದನ್ನೂ ಓದಿ: ಶಾರುಖ್​ ಖಾನ್​ ಬಗ್ಗೆ ಹರಿದಾಡಿದ್ದ ಸುದ್ದಿ ಸುಳ್ಳು; ಆದರೂ ಬೇಸರಗೊಂಡ ಫ್ಯಾನ್ಸ್​

ಶಾರುಖ್​ ಪುತ್ರಿ ಸುಹಾನಾ ಖಾನ್​ ಹಾಟ್​ ಫೋಟೋಶೂಟ್ ವೈರಲ್​; ಅಪ್ಪನ ಕಮೆಂಟ್​ ಏನು?​

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್